ಮುಸ್ಲಿಮರು ಈ ದೇಶದ ಪ್ರಜೆಗಳು, ವ್ಯಾಪಾರ ಮಾಡಲು ಅವಕಾಶ ಕೊಡಿ; ಎಚ್. ವಿಶ್ವನಾಥ್
ಮೈಸೂರು, ಮಾರ್ಚ್ 23: ಮುಸ್ಲಿಮರು ಈ ದೇಶದ ಪ್ರಜೆಗಳು, ಹಾಗಾಗಿ ಹಿಂದೂ ಹಬ್ಬದ ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದ್ದಾರೆ.
ಉಡುಪಿಯ ಕಾಪು ಮಾರಿಗುಡಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವನ್ನು ಹಿಂದೂ ಸಂಘಟನೆಗಳು ನಿರ್ಬಂಧಿಸಿವೆ. ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಎಚ್. ವಿಶ್ವನಾಥ್, ಇಂತಹ ನಡೆ ಅಮಾನವೀಯ. ಮುಸ್ಲಿಮರು ಈ ದೇಶದ ಪ್ರಜೆಗಳು. ಅವರನ್ನು ಅಲ್ಲಿ ವ್ಯಾಪಾರಕ್ಕೆ ಬರಬೇಡಿ, ಇಲ್ಲಿ ಬರಬೇಡಿ ಎಂದು ಹೇಳುವುದು ಸಂವಿಧಾನ ವಿರೋಧಿ ನಿಲುವು ಎಂದು ಹೇಳಿದರು.
ಹೀಗೆ ಮಾಡಿದರೆ ಅವರು ಎಲ್ಲಿ ಹೋಗುತ್ತಾರೆ ನೀವೇ ಹೇಳಿ? ರಾಜ್ಯ ಸರ್ಕಾರ ತಕ್ಷಣ ಮುಸ್ಲಿಂ ವರ್ತಕರ ನೆರವಿಗೆ ಬರಬೇಕು. ಇಂತಹ ಬಹಿಷ್ಕಾರಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಜೇಮ್ಸ್ ಚಿತ್ರ ಎತ್ತಂಗಡಿ ಆಗಬಾರದು
ಚಿತ್ರಮಂದಿರಗಳಿಂದ ಜೇಮ್ಸ್ ಚಿತ್ರ ತೆರವು ವಿಚಾರ ಕುರಿತಂತೆ ಮಾತನಾಡಿದ ಎಂಎಲ್ಸಿ ಎಚ್. ವಿಶ್ವನಾಥ್, ಸಾಂಸ್ಕೃತಿಕ ರಾಯಭಾರಿಯಾದ ಕುಟುಂಬಕ್ಕೆ ಅವಮಾನ ಮಾಡಬಾರದು. ಡಾ. ರಾಜ್ಕುಮಾರ್ ಕುಟುಂಬ ರಾಜ್ಯದಲ್ಲಿ ಸಾಂಸ್ಕೃತಿಕ ರಾಯಬಾರಿಯಂತೆ ಇದೆ. ಅವರ ಕುಡಿ ಡಾ. ಪುನೀತ್ ರಾಜ್ಕುಮಾರ್ ನಿಧನದ ನಂತರ ಜೇಮ್ಸ್ ಚಿತ್ರ ಬಿಡುಗಡೆ ಆಗಿದೆ. ಇಡೀ ಕುಟುಂಬ ರಾಜ್ಯದ ಜನರ ಜೊತೆ ಬೆಸೆದುಕೊಂಡಿದೆ. ಈ ಸಂದರ್ಭದಲ್ಲಿ ಜೇಮ್ಸ್ ಎತ್ತಂಗಡಿ ಆಗಬಾರದು. ಜೇಮ್ಸ್ ಚಿತ್ರ ಚಿತ್ರಮಂದಿರಗಳಿಂದ ಎತ್ತಂಗಡಿ ಆದರೆ ರಾಜ್ಯದ ಜನ ರೊಚ್ಚಿಗೇಳುತ್ತಾರೆ ಎಂದು ಎಚ್ಚರಿಸಿದರು.
ತೆಲುಗಿನ ಆರ್ಆರ್ಆರ್ ಚಿತ್ರಕ್ಕಾಗಿ ಜೇಮ್ಸ್ ಎತ್ತಂಗಡಿ ಆಗಬಾರದರು. ರಾಜ್ಯದಲ್ಲಿ ಕನ್ನಡ ಸಿನಿಮಾಗಳಿಗೆ ಮೊದಲ ಆದ್ಯತೆ ನೀಡಬೇಕು. ಕಾಶ್ಮೀರ್ ಫೈಲ್ಸ್ ಸಿನಿಮಾವೇ ಬೇರೆ. ಅದೊಂದು ರಕ್ತಸಿಕ್ತ ಚರಿತ್ರೆ. ಅದನ್ನು ನೋಡಬೇಕಾದವರು ನೋಡುತ್ತಾರೆ. ಮೊದಲು ನಮ್ಮ ಸಿನಿಮಾಗಳಿಗೆ ಆದ್ಯತೆ ಕೊಡಬೇಕು ಎಂದರು.
ಮುಸ್ಲಿಂ ಸಮುದಾಯದವರು ಮಳಿಗೆ ತೆರೆಯುವುದನ್ನು ನಿರಾಕರಿಸುವುದು ತಪ್ಪು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಬೆಂಬಲ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು.
Recommended Video
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications