ಕೊವಿಡ್-19 ಸೋಂಕು ದೃಢ; ಖಾಸಗಿ ಆಸ್ಪತ್ರೆಗೆ MLC ಸಂದೇಶ್ ನಾಗರಾಜ್
ಮೈಸೂರು, ಜುಲೈ.17: ನೊವೆಲ್ ಕೊರೊನಾವೈರಸ್ ಸೋಂಕಿನ ಭೀತಿ ಜನಪ್ರತಿನಿಧಿಗಳನ್ನು ಬೆನ್ನು ಬಿಡದ ಭೂತದಂತೆ ಕಾಡುತ್ತಿದೆ. ಶಾಸಕರು, ಸಂಸದರು, ಸಚಿವರು ಸೇರಿದಂತೆ ವಿಧಾನ ಪರಿಷತ್ ಸದಸ್ಯರಿಗೂ ಸೋಂಕಿನ ಮಹಾಮಾರಿ ಅಂಟಿಕೊಳ್ಳುತ್ತಿದೆ.
Recommended Video
ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಚಿತ್ರ ನಿರ್ಮಾಪಕರಾಗಿರುವ ಸಂದೇಶ್ ನಾಗರಾಜ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.
ಮೈಸೂರಿನಲ್ಲಿ ಟೀ ಅಂಗಡಿ ಮುಚ್ಚುವ ಆದೇಶಕ್ಕೆ ವ್ಯಾಪಾರಿಗಳು ಗರಂ
ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಸಂದೇಶ್ ನಾಗರಾಜ್ ಅವರು ಕಳೆದ ಎರಡು ದಿನಗಳ ಹಿಂದೆಯಷ್ಟೇ ಕೊವಿಡ್ ಟೆಸ್ಟ್ ಗೆ ಒಳಗಾಗಿದ್ದರು. ಅವರ ರಕ್ತ ಮತ್ತು ಗಂಟಲು ದ್ರವದ ಮಾದರಿ ತಪಾಸಣೆ ವರದಿ ಬಳಿಕ ಕೊರೊನಾವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ.
ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ:
ಕೊರೊನಾವೈರಸ್ ಸೋಂಕು ತಗಲಿರುವುದು ದೃಢವಾಗುತ್ತಿದ್ದಂತೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಎಂಎಲ್ ಸಿ ಸಂದೇಶ್ ನಾಗರಾಜ್ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಂದೆಡೆ ಸಂದೇಶ್ ನಾಗರಾಜ್ ಕುಟುಂಬದವರನ್ನು ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ. ಮುಂದಿನ 14 ದಿನಗಳವರೆಗೂ ಮನೆಯಲ್ಲೇ ಪ್ರತ್ಯೇಕವಾಗಿ ಇರುವಂತೆ ಸೂಚನೆ ನೀಡಲಾಗಿದೆ.