ಡಾ. ಯತೀಂದ್ರ ನೇತೃತ್ವದಲ್ಲಿ ಮುಡಾದಲ್ಲಿ ₹5,000 ಕೋಟಿ ಭ್ರಷ್ಟಾಚಾರ: ಎಚ್.ವಿಶ್ವನಾಥ್ ಆರೋಪ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ನೇತೃತ್ವದಲ್ಲಿ 5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿದ ಅವರು, 2019ರಲ್ಲಿ ಮುಡಾ ಸುಪರ್ದಿನಲ್ಲಿ 9 ಸಾವಿರ ನಿವೇಶನಗಳಿದ್ದವು. ಇದರಲ್ಲಿ 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಮಾರಿಕೊಳ್ಳಲಾಗಿದೆ. ಹಿಂದಿನ ಬಿಜೆಪಿ ಸರಕಾರ ಹಾಗೂ ಈಗಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನಿಯಮ ಬಾಹಿರವಾಗಿ ನಿವೇಶನ ಹಂಚಿಕೆಯಾಗಿದೆ ಎಂದು ದೂರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತನಿಂದ ಮುಡಾ ಅಧೋಗತಿಗೆ ತಲುಪಿದೆ. ಒಂದಷ್ಟು ನಾಯಕರು, ಅಧಿಕಾರಿಗಳು ಸಿಂಡಿಕೇಟ್ ರಚಿಸಿಕೊಂಡಿದ್ದು, ಈ ದಂಧೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಎಲ್ಲ ಆರೋಪಿಗಳನ್ನೂ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಅವರು ಕಡತಗಳನ್ನು ಇಟ್ಟುಕೊಂಡು ಮುಡಾ ಕಚೇರಿಗೆ ಅಲೆಯುತ್ತಿದ್ದಾರೆ. ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ಶಾಸಕ ಹರೀಶ್ ಗೌಡ, ರಾಕೇಶ್ ಪಾಪಣ್ಣ, ಮುಡಾದ ಹಾಲಿ ಅಧ್ಯಕ್ಷ ಮರೀಗೌಡ, ಹಿಂದಿನ ಅಧ್ಯಕ್ಷ ಎಚ್.ವಿ. ರಾಜೀವ್, ಹಿಂದಿನ ಆಯುಕ್ತ ನಟೇಶ್, ಈಗಿನ ಆಯುಕ್ತ ದಿನೇಶ್ ಹಾಗೂ ಅವರ ಮೈದುನ ತೇಜಸ್ ಗೌಡ, ಮರಿತಿಬ್ಬೇಗೌಡರ ಶಿಷ್ಯ ಸುದೀಪ್, ದಲ್ಲಾಳಿಗಳಾದ ಉತ್ತಮ್ ಗೌಡ, ಮೋಹನ್ ಸೇರಿದಂತೆ ಹಲವರು ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.
ಸಿಎಂ ಪತ್ನಿ ಜಮೀನಿಗೆ ಅಕ್ರಮವಾಗಿ ಪರಿಹಾರ
ಮೈಸೂರಿನ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಅವರ ಸೋದರ ಸಂಬಂಧಿ ಮಲ್ಲಣ್ಣ ಎಂಬುವರು ಖರೀದಿಸಿದ್ದರು. ನಂತರದಲ್ಲಿ ಈ ಜಮೀನನ್ನು ಪಾರ್ವತಮ್ಮ ಹೆಸರಿಗೆ ದಾನಪತ್ರವಾಗಿ ನೀಡಿದ್ದರು. 1994ರಲ್ಲಿ ಇದರ ಭೂಸ್ವಾಧೀನಕ್ಕೆ ಮುಡಾ ಪ್ರಕಟಣೆ ಹೊರಡಿಸಿತ್ತು. 1998ರಲ್ಲಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದಾಗ ಇದನ್ನು ಡಿನೋಟಿಫೈ ಮಾಡಲಾಯಿತು. ಆದರೂ ಮುಡಾ ಇದೇ ಜಮೀನಿಗೆ ಪರಿಹಾರ ನೀಡಿದೆ ಎಂದು ದೂರಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications