By Election: ಮೂರೂ ಕ್ಷೇತ್ರಗಳಲ್ಲಿ ಎನ್ಡಿಎ ಸೋಲು; ವಿಶ್ವನಾಥ್ ಅಚ್ಚರಿಯ ಹೇಳಿಕೆ
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳು ಸೋತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದಾರೆ. ಉಪ ಚುನಾವಣೆ ಫಲಿತಾಶಂದ ಬಗ್ಗೆ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು, ಗೆದ್ದವರು ಹೆಚ್ಚು ಸಂಭ್ರಮ ಪಡುವ ಅಗತ್ಯವಿಲ್ಲ, ಸೋತವರು ಹೆಚ್ಚು ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಫಲಿತಾಂಶ ಸಿದ್ದರಾಮಯ್ಯ ಸರ್ಕಾರದ ಆಡಳಿತ ಮೆಚ್ಚಿ ಜನ ಕೊಟ್ಟಿರುವ ತೀರ್ಮಾನವಲ್ಲ. ಈ ತೀರ್ಪಿನಿಂದ ಹಗರಣಗಳು ಏನು ಮುಚ್ಚಿಹೋಗುವುದಿಲ್ಲ. ಗೆದ್ದವರು ಹೆಚ್ಚು ಬೀಗುವ ಅಗತ್ಯವೂ ಇಲ್ಲ, ಹಣ, ಹೆಂಡ, ಶಿಫಾರಸ್ಸು ಇಂತಹ ವಿಚಾರಗಳ ಮೇಲೆ ಚುನಾವಣೆ ನಡೆಯುವುದು, ಈ ಚುನಾವಣೆ ಕೂಡ ಅದೇ ರೀತಿ ನಡೆದಿದೆ ಎಂದು ಹೇಳಿದರು.

ಮುಡಾ ಹಗರಣ ಮೈಸೂರು ಜಿಲ್ಲೆಯ ವ್ಯಾಪ್ತಿಯದು. ಅದು ಚನ್ನಪಟ್ಟಣದಲ್ಲಿ ವರ್ಕ್ ಆಗುತ್ತೆ ಅಂದುಕೊಳ್ಳುವುದು ಬೇಡ. ಸಿದ್ದರಾಮಯ್ಯ ಸರ್ಕಾರಕ್ಕೆ ಜನಕೊಟ್ಟ ತೀರ್ಪು ಇದಲ್ಲ. ಉಪಚುನಾವಣೆಗಳು ಯಾವ ರೀತಿ ನಡೆದಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಹಗರಣದ ಆರೋಪ ಹೊತ್ತವರು ಈ ತೀರ್ಪಿನಿಂದ ಖುಷಿ ಪಡುವ ಅಗತ್ಯ ಇಲ್ಲ ಎಂದರು.
ತಪ್ಪು ತಿದ್ದಿಕೊಳ್ಳಲು ಅವಕಾಶ
ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಪ್ರಜಾ ಪ್ರಭುತ್ವದಲ್ಲಿ ಇದೆಲ್ಲಾ ಸಾಮಾನ್ಯ, ಎಲ್ಲಾ ಬೂತ್ನಲ್ಲಿ ವೋಟ್ ಒತ್ತಿಕೊಂಡು ಹಾಕಿಸಿಕೊಳ್ಳಲು ಆಗುತ್ತದಾ? ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒಟ್ಟಾಗಿ ಕೆಲಸ ಮಾಡಿದರು, ಆದರೆ ಅದು ಫಲ ಕೊಟ್ಟಿಲ್ಲ ಎಂದು ಹೇಳಿದರು.
ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ
ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ ಎಂದು ವಿಶ್ವನಾಥ್ ಒಪ್ಪಿಕೊಂಡಿದ್ದಾರೆ. ಬಿಜೆಪಿಯಲ್ಲಿ ಸದ್ಯ ನಾಲ್ಕು ಗುಂಪುಗಳಿದೆ ಅನ್ನುವುದ ಸತ್ಯ, ಜನ ಬಿಜೆಪಿಗೆ ಮತ್ತೆ ಮತ್ತೆ ಅವಕಾಶ ಕೊಡುತ್ತಿದ್ದಾರೆ, ಇದು ತಪ್ಪು ತಿದ್ದಿಕೊಳ್ಳಲು ಉತ್ತಮ ಅವಕಾಶವಾಗಿತ್ತು ಆದರೆ ಅವರು ಅದನ್ನು ಮಾಡಲಿಲ್ಲ ಎಂದು ಹೇಳಿದ್ದಾರೆ.
ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಮಾತನಾಡಿ, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ಗೆಲ್ಲುವ ವಿಶ್ವಾಸ ಇತ್ತು. ಗ್ರೌಂಡ್ ರಿಯಾಲಿಟಿ ಕೂಡ ನಮ್ಮ ಅಭ್ಯರ್ಥಿ ಪರ ಇತ್ತು. ಆದರೆ ಫಲಿತಾಂಶ ನಮ್ಮ ಪರವಾಗಿ ಬಂದಿಲ್ಲ. ಈ ಫಲಿತಾಂಶದ ಬಗ್ಗೆ ಆತ್ಮವಾಲೋಕನದ ಅಗತ್ಯ ಇದೆ. ಉಪಚುನಾವಣೆಗಳು ಯಾವಾಗಲೂ ಆಡಳಿತ ಪಕ್ಷದ ಪರವಾಗಿಯೇ ಇರುತ್ತದೆ. ಇದು ಕೂಡ ಅದೇ ರೀತಿ ಆಗಿದೆ ಎಂದರು.
ಯಾವ್ಯಾವ ಅಂಶಗಳು ಉಪಚುನಾವಣೆಯಲ್ಲಿ ಪರಿಣಾಮ ಬೀರಿದೆ ಎಂಬುದನ್ನು ಪಕ್ಷದ ಸಭೆಯಲ್ಲಿ ತೀರ್ಮಾನ ಚರ್ಚೆ ಮಾಡುತ್ತೇವೆ. ಇದು ನಮಗೆ ಅನಿರೀಕ್ಷಿತವಾದ ಫಲಿತಾಂಶ ಎಂದು ಬೇಸರ ವ್ಯಕ್ತಪಡಿಸಿದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications