ಮೋದಿಯದ್ದು ಅಭಿವೃದ್ಧಿಯಲ್ಲ, ಚುನಾವಣಾ ಗಿಮಿಕ್: ಖಾದರ್
ಮೈಸೂರು, ಜನವರಿ 3: ಮೋದಿ ಚುನಾವಣಾ ಗಿಮಿಕ್ ಮಾಡುತ್ತಿದ್ದಾರೆ. ಜನರ ಅಭಿವೃದ್ಧಿಗಾಗಿ ಯಾವುದೇ ಕಾರ್ಯ ಮಾಡಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಆರೋಪಿಸಿದರು.
ಮೈಸೂರಿನ ಜಲದರ್ಶಿನಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೋದಿ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ನೋಟು ನಿಷೇಧದಿಂದ ಜನತೆ ಸಂಕಷ್ಟ ಅನುಭವಿಸುವಂತಾಗಿದೆ. ಹಣ ಪಡೆಯಲು ಹೋದ 70ಜನ ಸರತಿ ಸಾಲಿನಲ್ಲಿ ನಿಂತು ಸಾವಿಗೀಡಾಗಿದ್ದಾರೆ. ಸೌಜನ್ಯಕ್ಕೂ ಮೋದಿ ಈ ಕುರಿತು ಮಾತನಾಡಿಲ್ಲ. ಅವರಿಗೆ ಜನರ ಕುರಿತು ಕಾಳಜಿ ಇಲ್ಲ ಎಂದು ಕಿಡಿ ಕಾರಿದರು.[ಕಪ್ಪುಹಣ: ಜನಧನ್ ಖಾತೆದಾರರಿಗೆ ಯು.ಟಿ.ಖಾದರ್ ಎಚ್ಚರಿಕೆ]

ನೋಟಿನ ಸಮಸ್ಯೆ 50ದಿನ ಮೀರಿದರೂ ಬಗೆಹರಿದಿಲ್ಲ. ಮುಂದೆಯೂ ಬಗೆಹರಿಯಲ್ಲ ಎಂದು ತಿಳಿಸಿದರು. ಭಾರತದಲ್ಲಿಯೇ ಇದೇ ಪ್ರಥಮಬಾರಿಗೆ ಎಪಿಎಲ್ ಕಾರ್ಡನ್ನು ಆನ್ ಲೈನ್ ನಲ್ಲಿ ಅರ್ಜಿ ಹಾಕಿ ಪಡೆಯಬಹುದಾಗಿದೆ. ಆನ್ ಲೈನ್ ನಲ್ಲಿ ಆಧಾರ್ ಕಾರ್ಡ್ ನಂಬರ್ ಜೋಡಿಸಿದರೆ ನಿಮಗೆ ಅದೇ ದಿನ ಪಡೆಯಬಹುದು. ಮತ್ತೆ 15ದಿನಗಳ ನಂತರ ಪರಿಶೀಲನೆಗೊಂಡ ಅಧಿಕೃತ ಕಾರ್ಡ್ ನಿಮ್ಮ ಕೈಸೇರಲಿದೆ ಎಂದರು.
ಕೆಲವರು ಪಡಿತರ ಕೊಂಡೊಯ್ದು ಬೇರೆಯವರಿಗೆ ಮಾರಾಟ ಮಾಡುತ್ತಿದ್ದಾರೆ ಎನ್ನುವುದು ತಿಳಿದು ಬಂದ ಹಿನ್ನೆಲೆಯಲ್ಲಿ ಕ್ಯಾಶ್ ಕೂಪನ್ ನೀಡಲಾಗುತ್ತಿದೆ. ಇದು ಈಗ ಸದ್ಯ ಮೈಸೂರು, ಮಂಗಳೂರು, ಬೆಂಗಳೂರಿನಲ್ಲಿ ಜಾರಿಯಲ್ಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ಜೆ.ವಿಜಯಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು ಉಪಸ್ಥಿತರಿದ್ದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications