ಮೋದಿ ಒಬ್ಬ ಸುಳ್ಳುಗಾರ : ಮೈಸೂರಿನಲ್ಲಿ ಎಚ್.ವಿಶ್ವನಾಥ ಆರೋಪ

ದೇಶದಲ್ಲಿ ಮೋದಿಗಿಂತ ಸುಳ್ಳುಗಾರ ಬೇರೊಬ್ಬರಿಲ್ಲ. ಬಿಜೆಪಿಯವರಿಗಿಂತ ಕಳ್ಳ ಮನಸ್ಸು ಇನ್ಯಾರಿಗಿದೆ ಎಂದು ಮಾಜಿ ಸಂಸದ ಹೆಚ್. ವಿಶ್ವನಾಥ್ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದರು.

ಮೈಸೂರು, ಡಿಸೆಂಬರ್ 28 : ದೇಶದಲ್ಲಿ ಮೋದಿಗಿಂತ ಸುಳ್ಳುಗಾರ ಬೇರೊಬ್ಬರಿಲ್ಲ. ಬಿಜೆಪಿಯವರಿಗಿಂತ ಕಳ್ಳ ಮನಸ್ಸು ಇನ್ಯಾರಿಗಿದೆ ಎಂದು ಮಾಜಿ ಸಂಸದ ಎಚ್. ವಿಶ್ವನಾಥ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ವೇಳೆ ಎಚ್.ವಿಶ್ವನಾಥ್, ಮಾತನಾಡಿ, ನೋಟ್ ಸಮಸ್ಯೆ ಇನ್ನೂ ಬಗೆಹರಿದಿಲ್ಲ, ಬಗೆಹರಿಯುವುದೂ ಇಲ್ಲ. ಇದು ಇನ್ನು 50 ತಿಂಗಳು ಕಳೆದರೂ ಸಹಜ ಸ್ಥಿತಿಗೆ ಬರಲ್ಲ ಎಂದು ಭವಿಷ್ಯ ನುಡಿದರು. ಜನಸಾಮಾನ್ಯರಿಗೆ ಇದರಿಂದ ತುಂಬಾ ತೊಂದರೆಯಾಗುತ್ತಿದೆ. ನೋಟ್ ಬ್ಯಾನ್ ಸಮಸ್ಯೆ ಕುರಿತು ಮಾತನಾಡುವವರಿಗೆ ದೇಶದ್ರೋಹದ ಪಟ್ಟ ಕಟ್ಟಲಾಗುತ್ತದೆ. ಪ್ರಧಾನಿ ಸಮಸ್ಯೆ ಬಗೆಹರಿಸುವುದನ್ನು ಬಿಟ್ಟು, ವಿಪಕ್ಷದವರ ಮೇಲೆಯೇ ತನಿಖಾ ದಾಳಿಗಳನ್ನು ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

H vishwanth

ಬಿಜೆಪಿ ಇಂದಿಗೂ ದಲಿತ ಹಾಗೂ ಅಲ್ಪಸಂಖ್ಯಾತರಿಗೆ ಅನ್'ಟಚಬಲ್ ಆಗಿದೆ. ದಲಿತರಿಗೆ, ಶೋಷಿತ ವರ್ಗದವರಿಗೆ ಬಿಜೆಪಿ ತೆರೆದ ಬಾಗಿಲು ಎನ್ನುತ್ತದೆ. ಆದರೆ ಅದು ಅವರಿಗೆ ಯಾವತ್ತೂ ಮುಚ್ಚಿದ ಬಾಗಿಲು ಎಂದು ತಿಳಿಸಿದರು.

ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರುವ ಕುರಿತು ಉತ್ತರಿಸಿದ ಅವರು, ಯಾರು ಯಾವ ಪಕ್ಷವನ್ನಾದರೂ ಸೇರಬಹುದು, ಆ ಸ್ವಾತಂತ್ರ್ಯ ಅವರಿಗಿದೆ ಎಂದು ತಿಳಿಸಿದರು. ಈ ಸಂದರ್ಭ ಕಾಂಗ್ರೆಸ್ ನ ಕೆಲವು ಮುಖಂಡರು ವಿಶ್ವನಾಥ್ ಜೊತೆಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+