ಬದನಾಳಿನಲ್ಲಿ ವೀರಶೈವ ಮುಖಂಡರು ಕಾಂಗ್ರೆಸ್ ಸೇರ್ಪಡೆ
ನಂಜನಗೂಡಿನ ಬದನವಾಳು ಗ್ರಾಮದ ನೂರಾರು ವೀರಶೈವ ಮುಖಂಡರು ಮಾರ್ಚ್ 26, ಭಾನುವಾರದಂದು ಸಂಸದ ಧ್ರುವನಾರಾಯಣ್ ಎದುರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಮೈಸೂರು, ಮಾರ್ಚ್ 27: ಮೈಸೂರಿನ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹೊರಳವಾಡಿ ಮತ್ತು ವಿವಾದಿತ ಬದನವಾಳು ಗ್ರಾಮದ ನೂರಾರು ವೀರಶೈವ ಮುಖಂಡರು ಸಂಸದ ಆರ್.ಧ್ರುವನಾರಾಯಣ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.
ಬದನವಾಳು ಗ್ರಾಮದ ವೀರಶೈವ ಮುಖಂಡರಾದ ನಾಗೇಂದ್ರ, ದಿಲೀಪ್, ಪ್ರದೀಪ್, ನಂದೀಶ್, ಮಹದೇವಮೂರ್ತಿ, ಸಿದ್ದರಾಜು, ಮಂಜುನಾಥ್, ಶಿವಮೂರ್ತಿ, ನಂಜುಂಡಸ್ವಾಮಿ, ಲೋಕೇಶ್, ಮಂಜು, ರಾಜಶೇಖರ ಮೂರ್ತಿ ಸತೀಶ್, ಮಲ್ಲಣ್ಣ, ನಂಜುವಪ್ಪ, ಮಣಿಕಂಠಮೂರ್ತಿ, ಸೇರಿದಂತೆ ನೂರಾರು ಪ್ರಮುಖರು ಸೇರ್ಪಡೆಗೊಂಡವರಾಗಿದ್ದಾರೆ.[ಸಿಎಂ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುವೆ: ಬಿಎಸ್ ವೈ]
ಇದೇ ವೇಳೆ ಬದನವಾಳು ಗ್ರಾಮದ ಸತೀಶ್ ಮಾತನಾಡಿ ನಮ್ಮ ಗ್ರಾಮಕ್ಕೆ ಮಾಜಿ ಸಚಿವರಾದ ಎಂ.ಮಹದೇವು, ಡಿ.ಟಿ.ಜಯಕುಮಾರ್, ವಿ.ಶ್ರೀನಿವಾಸಪ್ರಸಾದ್ ಅವರುಗಳಲ್ಲಿ ಯಾರೇ ಆಗಲಿ ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ.[ಇದು ಉಪಚುನಾವಣೆ ದಸರಾ! ಮೈಸೂರು ಹೋಟೆಲುಗಳು ಹೌಸ್ ಫುಲ್]

ಈಗ ಕಳೆದ 6 ತಿಂಗಳಿನಿಂದ ಕಾಂಗ್ರೆಸ್ ಸರ್ಕಾರದಿಂದ 1.5 ಕೋಟಿ ರೂ.ಗಳ ಅನುದಾನ ಗ್ರಾಮಕ್ಕೆ ಬಂದಿದ್ದು, ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಕೆಲವು ಮುಖಂಡರು ಬದನವಾಳು ಗ್ರಾಮದಲ್ಲಿ ವೀರಶೈವರು ಕಾಂಗ್ರೆಸ್ ಪಕ್ಷದ ಪರವಾಗಿಲ್ಲ ಎಂದು ಸುಳ್ಳು ಹೇಳಿಕೆ ನೀಡುತ್ತಿದ್ದು, ಇದರಿಂದಾಗಿ ನಾವು ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಅವರ ಬೆಂಬಲಕ್ಕೆ ನಿಂತಿದ್ದೇವೆ ಎಂದರು.[ಗೂಟದ ಕಾರು ನೆನಪಾಗಿ ಗೀತಾ ಚುನಾವಣೆಗೆ:ಹೇಳಿಕೆ ಹಿಂಪಡೆದ ಪ್ರತಾಪ್ ಸಿಂಹ]
ಸಂಸದ ಆರ್.ಧ್ರುವನಾರಾಯಣ್ ರವರು ಮಾತನಾಡಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಮುಖ್ಯಮಂತ್ರಿಗಳ ಗಮನಸೆಳೆದು ಕ್ಷೇತ್ರಕ್ಕೆ ಸುಮಾರು 500 ಕೋಟಿ ರೂ.ಗಳ ಅನುದಾನವನ್ನು ತಂದಿದ್ದು, ಪ್ರತಿಯೊಂದು ಗ್ರಾಮದಲ್ಲೂ ಅಭಿವೃದ್ದಿ ಕೆಲಸಗಳು ನಡೆಯುತ್ತಿವೆ. ಕ್ಷೇತ್ರದಲ್ಲಿ ಇನ್ನೂ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿಸಲು ಕೇಶವಮೂರ್ತಿ ಅವರನ್ನು ಗೆಲ್ಲಿಸುವುದರ ಮೂಲಕ ನಮ್ಮ ಕೈ ಬಲಪಡಿಸಿ ಎಂದರು.
ಏಪ್ರಿಲ್ 9 ರಂದು ನಡೆಯಲಿರುವ ನಂಜನಗೂಡು ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಮಾತನಾಡಿ ನಂಜನಗೂಡು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ನನಗೆ ಮತವನ್ನು ಚಲಾಯಿಸಬೇಕೆಂದು ಮನವಿ ಮಾಡಿದರು.[ಮಾ. 27 ರಂದು ಗುಂಡ್ಲುಪೇಟೆಗೆ ಕೃಷ್ಣಾಗಮನ!]
ಉಪಚುನಾವಣೆಯ ಫಲಿತಾಂಶ ಏಪ್ರಿಲ್ 13 ರಂದು ಹೊರಬೀಳಲಿದ್ದು, ಬಿಜೆಪಿಯ ಶ್ರೀನಿವಾಸ್ ಪ್ರಸಾದ್ ಮತ್ತು ಕಳಲೆ ಕೇಶವಮೂರ್ತಿ ನಡುವೆ ನೇರ ಹಣಾಹಣಿ ನಡೆಯಲಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications