ಮೈಸೂರು ವಸ್ತು ಪ್ರದರ್ಶನ ಅಂತ್ಯ: ಬರೋಬ್ಬರಿ 19 ಲಕ್ಷ ದಾಖಲೆಯ ಪ್ರವಾಸಿಗರ ಭೇಟಿ
ಮೈಸೂರು, ಜನವರಿ 13: ಮೈಸೂರಿನ ಪ್ರಮುಖ ಜನಾಕರ್ಷಣೆಯ ಕೇಂದ್ರವಾದ ವಸ್ತು ಪ್ರದರ್ಶನಕ್ಕೆ ಈ ಬಾರಿ ದಾಖಲೆಯ ಪ್ರವಾಸಿಗರು ಭೇಟಿ ನೀಡಿದ್ದಾರೆ. ಸಾಮಾನ್ಯವಾಗಿ ದಸರಾ, ಕ್ರಿಸ್ಮಸ್ ಹಾಗೂ ಹೊಸ ವರ್ಷದ ಆರಂಭದಲ್ಲಿ ಮೈಸೂರಿಗೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಾರೆ.
ಇಲ್ಲಿನ ಚಾಮುಂಡಿಬೆಟ್ಟ, ಮೃಗಾಲಯ ಹಾಗೂ ಅರಮನೆಯಂತೆ ವಸ್ತು ಪ್ರದರ್ಶನಕ್ಕೂ ಭೇಟಿ ನೀಡುತ್ತಾರೆ. ಈ ಬಾರಿ 'ಶಕ್ತಿ' ಯೋಜನೆ ಪರಿಣಾಮ ವಸ್ತುಪ್ರದರ್ಶನಕ್ಕೆ ದಾಖಲೆಯ ಪ್ರಮಾಣದಲ್ಲಿ ಜನಸಾಗರವೇ ಹರಿದು ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.20ರಷ್ಟು ಹೆಚ್ಚು ಮಂದಿ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದ್ದಾರೆ.

ದಸರಾ ಮಹೋತ್ಸವ ಸಂದರ್ಭದಲ್ಲಿ ಈ ಬಾರಿ ಪ್ರತಿ ದಿನ ವಸ್ತು ಪ್ರದರ್ಶನಕ್ಕೆ 70 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದಾರೆ. ದೀಪಾವಳಿವರೆಗೂ ಪ್ರವಾಸಿಗರ ಸಂಖ್ಯೆ ಏರುಗತಿಯಲ್ಲೇ ಇತ್ತು. ಇನ್ನು ವಾರಾಂತ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ವಸ್ತುಪ್ರದರ್ಶನ ವೀಕ್ಷಿಸಿದ್ದರೆ, ಕ್ರಿಸ್ಮಸ್, ಹೊಸ ವರ್ಷದಲ್ಲೂ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದಾರೆ.
ಕಳೆದ ಬಾರಿ ಬೆಂಗಳೂರಿನ ವರ್ಲ್ಡ್ ಇಂಡಿಯಾ ರೆಸಾರ್ಟ್ ಪ್ರೈ.ಲಿ. 8.08 ಕೋಟಿ ರೂ. ಗೆ ಟೆಂಡರ್ ಪಡೆದುಕೊಂಡಿತ್ತು. ಈ ಬಾರಿಯೂ ನ್ ವರ್ಲ್ಡ್ 11.52 ಕೋಟಿ ರೂ.ಗೆ ಟೆಂಡರ್ ಪಡೆದುಕೊಂಡಿದೆ. ವಸ್ತು ಪ್ರದರ್ಶನದಲ್ಲಿ 145 ವಾಣಿಜ್ಯ ಮಳಿಗೆ, 60 ಫುಡ್ ಕೋರ್ಟ್, 40 ಸರಕಾರದ ಮಳಿಗೆ, 46 ಅಮ್ಯೂಸ್ಮೆಂಟ್ ಆಟಗಳು ಈ ಬಾರಿ ಗಮನ ಸೆಳೆದಿವೆ.
ಅಕ್ಟೋಬರ್ 15ರಂದು ಮೈಸೂರು ವಸ್ತು ಪ್ರದರ್ಶನ ಆರಂಭಗೊಂಡಿದ್ದು, ನಿನ್ನೆ (ಜನವರಿ 12)ರಂದು ಕೊನೆಗೊಂಡಿದೆ. ಪ್ರವಾಸೋದ್ಯಮಕ್ಕೆ ಅನುಕೂಲ ಕಲ್ಪಿಸುವ ಜೊತೆಗೆ ಟೆಂಡರ್ದಾರರ ಬೇಡಿಕೆ ಹಿನ್ನೆಲೆಯಲ್ಲಿ ಮತ್ತೆ 15 ದಿನ ವಸ್ತುಪ್ರದರ್ಶನವನ್ನು ಮುಂದುವರಿಸಲು ಅವಕಾಶ ನೀಡುವಂತೆ ಪ್ರಾಧಿಕಾರ ಸರ್ಕಾರಕ್ಕೆ ಪತ್ರ ಬರೆದಿತ್ತು. ಒಂದು ವೇಳೆ ಸರ್ಕಾರ ಒಪ್ಪಿಗೆ ಸೂಚಿಸಿದರೆ ಜನವರಿ 28 ರವರೆಗೂ ವಸ್ತು ಪ್ರದರ್ಶನ ವಿಸ್ತರಣೆ ಮಾಡಬೇಕೆಂದುಕೊಂಡಿತ್ತು. ಆದರೆ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಮೈಸೂರು ವಸ್ತು ಪ್ರದರ್ಶನ ಅಂತ್ಯಗೊಂಡಿದೆ.

ಕಳೆದ ಬಾರಿ 98 ದಿನದಲ್ಲಿ 17 ಲಕ್ಷ ಜನರು ವಸ್ತುಪ್ರದರ್ಶನಕ್ಕೆ ಭೇಟಿ ಕೊಟ್ಟಿದ್ದರು. ಈ ಬಾರಿ 75 ದಿನದಲ್ಲೇ 19 ಲಕ್ಷ ಪ್ರವಾಸಿಗರು ವಸ್ತು ಪ್ರದರ್ಶನವನ್ನು ಕಣ್ತುಂಬಿಕೊಂಡಿದ್ದಾರೆ. ವಿವಿಧ ಬಗೆಯ ಶಾಪಿಂಗ್ ಮಾಡಿ, ಅಮ್ಯೂಸ್ಮೆಂಟ್ ಗೇಮ್ಗಳಲ್ಲಿ ಎಂಜಾಯ್ ಮಾಡಿ, ಆಹಾರ ಮೇಳದಲ್ಲಿ ನಾನಾ ಖಾದ್ಯಗಳನ್ನು ಸವಿದಿದ್ದಾರೆ. ಸರ್ಕಾರದ ಉಚಿತ ಶಕ್ತಿ ಯೋಜನೆಯಿಂದ ದೂರದೂರಿನಿಂದ ಮಹಿಳೆಯರು ಕುಟುಂಬ ಸಮೇತ ಮೈಸೂರಿನ ವಸ್ತುಪ್ರದರ್ಶನಕ್ಕೆ ಲಗ್ಗೆ ಇಟ್ಟಿದ್ದಾರೆ. ಇದರಿಂದ ವಸ್ತು ಪ್ರದರ್ಶನಕ್ಕೆ ಜನರ ದಂಡೇ ಹರಿದುಬಂದಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications