ಮಾಲ್ ಆಫ್ ಮೈಸೂರಿನಿಂದ ಪಾಲಿಕೆಗೆ 5 ಕೋಟಿಗೂ ಹೆಚ್ಚು ತೆರಿಗೆ ವಂಚನೆ
ಮೈಸೂರು ನಗರ ಪಾಲಿಕೆ ಅಧಿಕಾರಿಗಳು ಮಾಲ್ ಆಫ್ ಮೈಸೂರ್ ದಾಖಲೆಗಳನ್ನು ಪರಿಶೀಲಿಸಿ, ಐದು ಕೋಟಿಗೂ ಹೆಚ್ಚು ಮೊತ್ತದ ತೆರಿಗೆ ವಂಚನೆ ಆಗಿದೆ ಎಂದು ಕಂಡುಹಿಡಿದಿದ್ದಾರೆ. ಆ ಮೊತ್ತವನ್ನು ದಿನದೊಳಗಾಗಿ ಪಾವತಿಸುವಂತೆ ತಿಳಿಸಿದ್ದಾರೆ
ಮೈಸೂರು, ಮಾರ್ಚ್ 3: ಮೈಸೂರಿನ ಮಹಾತ್ಮ ಗಾಂಧಿ ರಸ್ತೆಯಲ್ಲಿ ರೇಸ್ ಕೋರ್ಸ್ ಎದುರಿನ ಮಾಲ್ ಆಫ್ ಮೈಸೂರಿನ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ನೋಟಿಸ್ ನೀಡಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿ, ಪಾಲಿಕೆ ನಿಯಮವನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾಲ್ ಆಫ್ ಮೈಸೂರ್ ಗೆ ಶುಕ್ರವಾರ ಸಂಜೆ ವೇಳೆಗೆ ಬೀಗ ಹಾಕುವ ಸಾಧ್ಯತೆಗಳಿವೆ.
ಪಟ್ಟಣ ಮತ್ತು ನಗರಯೋಜನೆ ಸ್ಥಾಯಿ ಸಮಿತಿ ಅಧ್ಯಕ್ಷ ನಂದೀಶ್ ಪ್ರೀತಂ ನೇತೃತ್ವದಲ್ಲಿ ಮಾಲ್ ಆಫ್ ಮೈಸೂರಿನ ಮೇಲೆ ದಾಳಿ ನಡೆಸಿದ್ದು, ಅದರ ಮಾಲೀಕರು ಪಾವತಿಸಬೇಕಾದ ತೆರಿಗೆಯನ್ನು ಸರಿಯಾಗಿ ಸಂದಾಯ ಮಾಡಿಲ್ಲ ಎಂಬುದು ತಿಳಿದುಬಂದಿದೆ.

ಅಷ್ಟೇ ಅಲ್ಲ, ಮಲ್ಟಿಪ್ಲೆಕ್ಸ್ ನಿರ್ಮಿಸಿ, ಒಂದು ಪ್ರದರ್ಶನ ನೀಡುತ್ತೇವೆ ಎಂದಿದ್ದು, ಪ್ರತಿ ದಿನ ನಾಲ್ಕು ಪ್ರದರ್ಶನ ನಡೆಯುತ್ತಿದೆ. ಆದರೆ ಪಾಲಿಕೆಗೆ ಒಂದು ಪ್ರದರ್ಶನದ ತೆರಿಗೆಯನ್ನು ಮಾತ್ರ ನೀಡಲಾಗುತ್ತಿದೆ. ಆ ಮೂಲಕ ಪಾಲಿಕೆ ನಿಯಮವನ್ನು ಉಲ್ಲಂಘಿಸಿದ್ದಾರೆ.[ಮಂಗಳೂರು ಮಹಾನಗರ ಪಾಲಿಕೆಯಿಂದ ಆಸ್ತಿ ತೆರಿಗೆ ಹೆಚ್ಚಳ]
ಐದು ಕೋಟಿ ರುಪಾಯಿಗೂ ಹೆಚ್ಚಿನ ತೆರಿಗೆ ವಂಚನೆ ಆಗಿದ್ದು, ಮಲ್ಟಿ ಪಾರ್ಕಿಂಗ್ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿ, ಅಂಥ ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ. ಈ ಹಿಂದೆ ಪಾಲಿಕೆ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಅದಕ್ಕೆ ಸ್ಪಂದಿಸಿಲ್ಲ.
350 ವಾಹನಗಳ ನಿಲುಗಡೆಗೆ ಅವಕಾಶ ನೀಡುತ್ತೇವೆಂದು ಅನುಮತಿ ಪಡೆದಿದ್ದು, ಕೇವಲ 150 ವಾಹನಗಳಿಗೆ ಮಾತ್ರ ನಿಲುಗಡೆಗೆ ಅವಕಾಶ ನೀಡುತ್ತಿದ್ದಾರೆ. ಈ ಬಗ್ಗೆ ತರಾಟೆಗೆ ತೆಗೆದುಕೊಂಡ ನಂದೀಶ್ ಪ್ರೀತಂ, ನೀವು ಪಾಲಿಕೆ ನಿಯಮವನ್ನು ಗಾಳಿಗೆ ತೂರಿದ್ದೀರಿ. ತೆರಿಗೆ ಕಟ್ಟದೆ ವಂಚಿಸಿದ್ದೀರಿ ಎಂದಿದ್ದಾರೆ. ಮಾಲ್ ಮಾಲೀಕರ ಮೇಲೆ ಕಾನೂನುಬದ್ಧವಾಗಿ ಏನೆಲ್ಲ ಕ್ರಮ ಕೈಗೊಳ್ಳಲು ಸಾಧ್ಯವೋ ಎಲ್ಲವನ್ನೂ ಕೈಗೊಳ್ಳಿ ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ಕೂಡ ನೀಡಿದ್ದಾರೆ.[ಪರಿಸರಸ್ನೇಹಿ ಕಟ್ಟಡಕ್ಕೆ ಬೆಳಗಾವಿ ಪಾಲಿಕೆಯಿಂದ ಶೇ 10 ಆಸ್ತಿ ತೆರಿಗೆ ರಿಯಾಯ್ತಿ]
2010ನೇ ಇಸವಿಯಿಂದಲೂ ಮಾಲ್ ನವರು ಪಾಲಿಕೆಗೆ ವಂಚಿಸುತ್ತಲೇ ಬಂದಿದ್ದಾರೆ. ಬಾಕಿ ಇರಿಸಿಕೊಂಡ ಎಲ್ಲ ತೆರಿಗೆಗಳನ್ನೂ ಈ ದಿನ ಪಾವತಿಸಬೇಕು. ಇಲ್ಲದಿದ್ದಲ್ಲಿ ಸಂಜೆ ವೇಳೆಗೆ ಬೀಗ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಲಾಗಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications