ದಡದಹಳ್ಳಿಯಲ್ಲಿ ಏಕಾಏಕಿ 80ಕ್ಕೂ ಹೆಚ್ಚು ಕುರಿಗಳ ದಾರುಣ ಸಾವು
ಮೈಸೂರು, ಅಕ್ಟೋಬರ್. 05: ಏಕ ಕಾಲದಲ್ಲಿ 80ಕ್ಕೂ ಹೆಚ್ಚು ಕುರಿಗಳು ಒಂದೊಂದಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ದಡದಳ್ಳಿಯಲ್ಲಿ ಗುರುವಾರ ನಡೆದಿದೆ.
ಈ ಕುರಿಗಳು ತುಮಕೂರು ಶಿರಾ ಮೂಲದ ಮಾಲೀಕರಿಗೆ ಸೇರಿವೆ. ಮಾಲೀಕರು ಕುರಿ ಮೇಯಿಸುವುದಕ್ಕಾಗಿ ತುಮಕೂರಿನಿಂದ ಮೈಸೂರಿಗೆ ಬಂದಿದ್ದಾರೆ. ಎಂದಿನಂತೆ ಕುರಿಗಳು ಊರು ಊರಿನ ಮೇಲೆ ಮೇಯುತ್ತಾ ಸಾಗಿವೆ. ಅಂತೆಯೇ ಗುರುವಾರ ದಡದಳ್ಳಿಯಲ್ಲಿ ಮೇಯಲು ಬಿಟ್ಟಿದ್ದಾಗ ಈ ಘಟನೆ ನಡೆದಿದೆ.
ಕುರಿ ಮೇವಿನಲ್ಲಿ ವಿಷ ಸೇವನೆ ಶಂಕೆ ವ್ಯಕ್ತವಾಗಿದೆ. ಇದ್ದಕ್ಕಿದ್ದಂತೆ ಬೆಳಗ್ಗೆಯಿಂದಲೇ ಕುರಿಗಳೆಲ್ಲಾ ಒಂದೊಂದಾಗಿ ಸತ್ತಿವೆ. ಇದನ್ನು ಗಮನಿಸಿದ ಮಾಲೀಕರು ದಿಗ್ಭ್ರಾಂತರಾಗಿದ್ದಾರೆ. ದಿಕ್ಕೇ ತೋಚದಂತಾದ ಅವರು, ಗ್ರಾಮಸ್ಥರ ಸಹಾಯದಿಂದ ಕೂಡಲೇ ವೈದ್ಯರನ್ನು ಸಂಪರ್ಕಿಸಿದ್ದಾರೆ.

ಈ ವೇಳೆ ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿದರು. ಆದರೆ, ಕುರಿಗಳ ಸಾವಿಗೆ ನಿಖರ ಕಾರಣ ಏನೂ ಎಂಬುದು ತಿಳಿದು ಬಂದಿಲ್ಲ.
ಮಟನ್ ಸ್ಟಾಲ್ ಸೇರಿದ ಕುರಿಗಳು
ಈ ನಡುವೆ ಬೆಳಗ್ಗೆಯಿಂದಲೇ ಒಂದಾದ ಮೇಲೊಂದರಂತೆ ಕುರಿಗಳು ಸಾವನ್ನಪ್ಪುತ್ತಿದ್ದಂತೆಯೇ ಮಟನ್ ಸ್ಟಾಲ್ ಮಾಲೀಕರು ಸತ್ತ ಕುರಿಗಳನ್ನು ಅಂಗಡಿಗೆ ಹೊತ್ತೊಯ್ದರು. ಕುರಿ ಮಾಂಸ ಖರೀದಿಸುವವರು ಕೊಳ್ಳುವ ಮುಂಚೆ ಎಚ್ಚರವಹಿಸಬೇಕು ಎಂದು ಕುರಿಗಾಹಿಗಳು ಮನವಿ ಮಾಡಿದರು. ಈ ಸಂಬಂಧ ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications