ಹರಿದುಬಂದ ಪ್ರವಾಸಿಗರ ದಂಡು, ಮೈಸೂರು ದಸರಾಗೆ ಬರದ ಮಾತೆಲ್ಲಿ..!
ಮೈಸೂರು, ಅಕ್ಟೋಬರ್ 30: ರಾಜ್ಯದಲ್ಲಿ ಬರ ಇದ್ದ ಹಿನ್ನೆಲೆಯಲ್ಲಿ ಸರ್ಕಾರ ಅದ್ಧೂರಿ ದಸರಾಗೆ ಬ್ರೇಕ್ ಹಾಕಿ ಸಾಂಪ್ರದಾಯಿಕ ದಸರಾ ಆಚರಿಸಿತು. ಆದರೆ, ದಸರಾಗೆ ಬರದ ಬಿಸಿ ತಟ್ಟಲಿಲ್ಲ. ಸಾಕಷ್ಟು ಪ್ರವಾಸಿಗರು ದಸರಾ ಮಹೋತ್ಸವದಲ್ಲಿ ಭಾಗವಹಿಸಿದ್ದಾರೆ.
ಈ ಬಾರಿ ಹೊರ ಜಿಲ್ಲೆಗಳಿಂದ ಸಾಕಷ್ಟು ಪ್ರವಾಸಿಗರು ದಸರಾ ಮಹೋತ್ಸವದಲ್ಲಿ ಭಾಗವಹಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸರಕಾರದ ಶಕ್ತಿ ಯೋಜನೆ. ಉಚಿತ ಪ್ರಯಾಣವಾದ ಕಾರಣ ಹೊರ ಜಿಲ್ಲೆಗಳಿಂದ ಹೆಚ್ಚು ಜನರು ದಸರಾದ ವಿವಿಧ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡಿದ್ದಾರೆ. 10 ದಿನದಲ್ಲಿ 3.5 ಲಕ್ಷ ಮಹಿಳೆಯರು ಹೆಚ್ಚುವರಿಯಾಗಿ ಪ್ರಯಾಣಿಸಿದ್ದಾರೆ. ಕೆಎಸ್ಆರ್ಟಿಸಿ ಮೈಸೂರು-ಬೆಂಗಳೂರು ನಡುವೆ 600 ಬಸ್ಗಳನ್ನು ಹೆಚ್ಚುವರಿಯಾಗಿ ಬಿಟ್ಟಿತ್ತು.

ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬೀಳಲಿಲ್ಲ. ಕೃಷಿ ಬೆಳೆಗಷ್ಟೇ ಅಲ್ಲದೆ ಭವಿಷ್ಯದಲ್ಲಿ ಕುಡಿಯಲು ನೀರಿಗೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. 216 ತಾಲೂಕುಗಳನ್ನು ಬರಪಿಡೀತ ತಾಲೂಕುಗಳೆಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಬಾರಿ ಅದ್ಧೂರಿ ದಸರಾಗೆ ಕಡಿವಾಣ ಹಾಕಿ ಸಾಂಪ್ರದಾಯಿಕ ದಸರಾ ಆಚರಿಸುವುದಾಗಿ ಘೋಷಿಸಿತ್ತು. ಆದರೂ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಪ್ರವಾಸಿಗರ ಸಂಖ್ಯೆಯೇನೂ ಕಡಿಮೆ ಆಗಲಿಲ್ಲ. ಬರದ ದಸರಾ ಸಂಭ್ರಮವನ್ನು ಕುಗ್ಗಿಸಲಿಲ್ಲ.
ವ್ಯಾಪಾರ -ವಹಿವಾಟು ಜೋರು
ದಸರಾ ಎಂದರೆ ಸಾವಿರಾರು ಮಂದಿಗೆ ಬದುಕು. ಬಹಳಷ್ಟು ಮಂದಿ ದಸರಾದಲ್ಲಿ ಉತ್ತಮ ಆದಾಯ ಗಳಿಸುತ್ತಾರೆ. ಅಂತೆಯೇ ಈ ಬಾರಿಯೂ ಸ್ಥಳೀಯರ ವ್ಯಾಪಾರ ವಹಿವಾಟು ಜೋರಾಗಿಯೇ ನಡೆದಿದೆ. ಅಂಗಡಿ ಮುಂಗ್ಗಟ್ಟು, ಬೀದಿಬದಿ ವ್ಯಾಪಾರಿಗಳು, ಆತಿಥ್ಯ ವಲಯ, ಟೂರಿಸ್ಟ್ ಅಂಡ್ ಟ್ರಾವಲ್ಸ್ , ಅರಮನೆ, ಝೂ, ಚಾಮುಂಡಿಬೆಟ್ಟ, ದಸರಾ ಪಾಸ್ಗಳಿಂದ ಉತ್ತಮ ಆದಾಯವೇ ಬಂದಿದೆ.
ಅರಮನೆಗೆ 1.5 ಲಕ್ಷ ಮಂದಿ ಭೇಟಿ
ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಅರಮನೆ ಹಾಗೂ ಶ್ರೀಚಾಮರಾಜೇಂದ್ರ ಮೃಗಾಲಯಕ್ಕೆ ಸಾವಿರಾರು ಮಂದಿ ಭೇಟಿ ನೀಡಿದ್ದು, ಆದಾಯವೂ ಹೆಚ್ಚಳವಾಗಿದೆ. ಅರಮನೆಗೆ ಅ.9ರಿಂದ ಅ.23ರವರೆಗೆ 1,67.065 ಮಂದಿ ಭೇಟಿ ಕೊಟ್ಟಿದ್ದಾರೆ. ದಿನವಾದ ಮೃಗಾಲಯಕ್ಕೆ ಅ. 15ರಿಂದ 24ರವರೆಗೆ 1,65,003 ಮಂದಿ ಬಂದಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡು
ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರ ಚಾಮುಂಡಿಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬಂದಿದೆ. ಲಕ್ಷಾಂತರ ಮಂದಿ ಬೆಟ್ಟದ ತಾಯಿ ದರ್ಶನ ಪಡೆದಿದ್ದಾರೆ. ಜೊತೆಗೆ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೂ ಪ್ರವಾಸಿಗರು ಭೇಟಿ ಕೊಟ್ಟಿದ್ದರಿಂದ ಆದಾಯ ಹೆಚ್ಚಳವಾಗಿದೆ.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications