ಹರಿದುಬಂದ ಪ್ರವಾಸಿಗರ ದಂಡು, ಮೈಸೂರು ದಸರಾಗೆ ಬರದ ಮಾತೆಲ್ಲಿ..!
ಮೈಸೂರು, ಅಕ್ಟೋಬರ್ 30: ರಾಜ್ಯದಲ್ಲಿ ಬರ ಇದ್ದ ಹಿನ್ನೆಲೆಯಲ್ಲಿ ಸರ್ಕಾರ ಅದ್ಧೂರಿ ದಸರಾಗೆ ಬ್ರೇಕ್ ಹಾಕಿ ಸಾಂಪ್ರದಾಯಿಕ ದಸರಾ ಆಚರಿಸಿತು. ಆದರೆ, ದಸರಾಗೆ ಬರದ ಬಿಸಿ ತಟ್ಟಲಿಲ್ಲ. ಸಾಕಷ್ಟು ಪ್ರವಾಸಿಗರು ದಸರಾ ಮಹೋತ್ಸವದಲ್ಲಿ ಭಾಗವಹಿಸಿದ್ದಾರೆ.
ಈ ಬಾರಿ ಹೊರ ಜಿಲ್ಲೆಗಳಿಂದ ಸಾಕಷ್ಟು ಪ್ರವಾಸಿಗರು ದಸರಾ ಮಹೋತ್ಸವದಲ್ಲಿ ಭಾಗವಹಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಸರಕಾರದ ಶಕ್ತಿ ಯೋಜನೆ. ಉಚಿತ ಪ್ರಯಾಣವಾದ ಕಾರಣ ಹೊರ ಜಿಲ್ಲೆಗಳಿಂದ ಹೆಚ್ಚು ಜನರು ದಸರಾದ ವಿವಿಧ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡಿದ್ದಾರೆ. 10 ದಿನದಲ್ಲಿ 3.5 ಲಕ್ಷ ಮಹಿಳೆಯರು ಹೆಚ್ಚುವರಿಯಾಗಿ ಪ್ರಯಾಣಿಸಿದ್ದಾರೆ. ಕೆಎಸ್ಆರ್ಟಿಸಿ ಮೈಸೂರು-ಬೆಂಗಳೂರು ನಡುವೆ 600 ಬಸ್ಗಳನ್ನು ಹೆಚ್ಚುವರಿಯಾಗಿ ಬಿಟ್ಟಿತ್ತು.

ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬೀಳಲಿಲ್ಲ. ಕೃಷಿ ಬೆಳೆಗಷ್ಟೇ ಅಲ್ಲದೆ ಭವಿಷ್ಯದಲ್ಲಿ ಕುಡಿಯಲು ನೀರಿಗೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. 216 ತಾಲೂಕುಗಳನ್ನು ಬರಪಿಡೀತ ತಾಲೂಕುಗಳೆಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ಬಾರಿ ಅದ್ಧೂರಿ ದಸರಾಗೆ ಕಡಿವಾಣ ಹಾಕಿ ಸಾಂಪ್ರದಾಯಿಕ ದಸರಾ ಆಚರಿಸುವುದಾಗಿ ಘೋಷಿಸಿತ್ತು. ಆದರೂ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಪ್ರವಾಸಿಗರ ಸಂಖ್ಯೆಯೇನೂ ಕಡಿಮೆ ಆಗಲಿಲ್ಲ. ಬರದ ದಸರಾ ಸಂಭ್ರಮವನ್ನು ಕುಗ್ಗಿಸಲಿಲ್ಲ.
ವ್ಯಾಪಾರ -ವಹಿವಾಟು ಜೋರು
ದಸರಾ ಎಂದರೆ ಸಾವಿರಾರು ಮಂದಿಗೆ ಬದುಕು. ಬಹಳಷ್ಟು ಮಂದಿ ದಸರಾದಲ್ಲಿ ಉತ್ತಮ ಆದಾಯ ಗಳಿಸುತ್ತಾರೆ. ಅಂತೆಯೇ ಈ ಬಾರಿಯೂ ಸ್ಥಳೀಯರ ವ್ಯಾಪಾರ ವಹಿವಾಟು ಜೋರಾಗಿಯೇ ನಡೆದಿದೆ. ಅಂಗಡಿ ಮುಂಗ್ಗಟ್ಟು, ಬೀದಿಬದಿ ವ್ಯಾಪಾರಿಗಳು, ಆತಿಥ್ಯ ವಲಯ, ಟೂರಿಸ್ಟ್ ಅಂಡ್ ಟ್ರಾವಲ್ಸ್ , ಅರಮನೆ, ಝೂ, ಚಾಮುಂಡಿಬೆಟ್ಟ, ದಸರಾ ಪಾಸ್ಗಳಿಂದ ಉತ್ತಮ ಆದಾಯವೇ ಬಂದಿದೆ.
ಅರಮನೆಗೆ 1.5 ಲಕ್ಷ ಮಂದಿ ಭೇಟಿ
ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಅರಮನೆ ಹಾಗೂ ಶ್ರೀಚಾಮರಾಜೇಂದ್ರ ಮೃಗಾಲಯಕ್ಕೆ ಸಾವಿರಾರು ಮಂದಿ ಭೇಟಿ ನೀಡಿದ್ದು, ಆದಾಯವೂ ಹೆಚ್ಚಳವಾಗಿದೆ. ಅರಮನೆಗೆ ಅ.9ರಿಂದ ಅ.23ರವರೆಗೆ 1,67.065 ಮಂದಿ ಭೇಟಿ ಕೊಟ್ಟಿದ್ದಾರೆ. ದಿನವಾದ ಮೃಗಾಲಯಕ್ಕೆ ಅ. 15ರಿಂದ 24ರವರೆಗೆ 1,65,003 ಮಂದಿ ಬಂದಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡು
ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರ ಚಾಮುಂಡಿಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬಂದಿದೆ. ಲಕ್ಷಾಂತರ ಮಂದಿ ಬೆಟ್ಟದ ತಾಯಿ ದರ್ಶನ ಪಡೆದಿದ್ದಾರೆ. ಜೊತೆಗೆ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೂ ಪ್ರವಾಸಿಗರು ಭೇಟಿ ಕೊಟ್ಟಿದ್ದರಿಂದ ಆದಾಯ ಹೆಚ್ಚಳವಾಗಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications