ಚುಂಚನಕಟ್ಟೆ: ಧನುಷ್ಕೋಟಿ ಜಲಪಾತ ವೀಕ್ಷಣೆಗೆ ಪ್ರವಾಸಿಗರ ದಂಡು
ಮೈಸೂರು, ಜೂನ್.18: ಕಾವೇರಿ ನದಿಯಲ್ಲಿ ಹರಿವು ಹೆಚ್ಚಾಗಿದ್ದು, ಕೆ.ಆರ್.ನಗರ ತಾಲೂಕಿನ ಇತಿಹಾಸ ಪ್ರಸಿದ್ಧ ಚುಂಚನಕಟ್ಟೆ ಬಳಿ ಇರುವ ಪುರಾಣ ಪ್ರಸಿದ್ಧ ಸೀತಾ ಬಚ್ಚಲು ಹಾಗೂ ಧನುಷ್ಕೋಟಿ ಜಲಪಾತ ಭೋರ್ಗರೆಯುತ್ತಿರುವ ದೃಶ್ಯ ನೋಡಲು ಪ್ರವಾಸಿಗರ ದಂಡು ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬರುತ್ತಿದೆ.
ಭಾನುವಾರ ಬಂತೆಂದರೆ ಇಲ್ಲೊಂದು ಮಿನಿ ಜಾತ್ರೆಯೇ ಸೃಷ್ಟಿಯಾಗಿರುತ್ತದೆ. ಧನುಷ್ಕೋಟಿ ಫಾಲ್ಸ್ನಲ್ಲಿ ಇತ್ತೀಚೆಗೆ ಯುವ ವಿಜ್ಞಾನಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಯಾರೂ ಕೆಳಗೆ ಇಳಿಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಕಾರಣ ದೇವಾಲಯದ ಬಳಿಯಿಂದಲೇ ಸಾವಿರಾರು ಮಂದಿ ಧನುಷ್ಕೋಟಿ ಜಲಪಾತವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದರಿಂದ ಚುಂಚನಕಟ್ಟೆ ದೇವಾಲಯದ ಆವರಣದಲ್ಲಿ ನೂರಾರು ದ್ವಿಚಕ್ರ ವಾಹನಗಳು, ಕಾರ್, ಬಸ್ಗಳು ಸೇರಿದಂತೆ ಇಡೀ ಆವರಣ ವಾಹನಗಳಿಂದ ತುಂಬಿ ಹೋಗಿರುತ್ತದೆ. ಈ ಮಾರ್ಗದ ಮೂಲಕ ಹೋಗುತ್ತಿದ್ದವರು ಕೂಡ ಧನುಷ್ಕೋಟಿ ಜಲಪಾತ ವೀಕ್ಷಿಸಿಕೊಂಡೇ ಮುಂದಕ್ಕೆ ಹೋಗುವ ದೃಶ್ಯ ಸಾಮಾನ್ಯವಾಗಿದೆ.

ಕ್ಷೇತ್ರಕ್ಕೆ ಪ್ರವಾಸಿಗರು ದಂಡು ಬರುತ್ತಿದ್ದಂತೆ ಸ್ಥಳೀಯರು ತಿಂಡಿ ತಿನಿಸಿನ ಅಂಗಡಿಗಳ ಸಂಖ್ಯೆಯೂ ಹೆಚ್ಚಾಗಿದೆ. ಪಾನಿಪೂರಿ, ಚುರುಮುರಿ, ಸುಟ್ಟಜೋಳ, ಹಲಸಿನ ಹಣ್ಣು, ಕಡಲೆಕಾಯಿ, ಮಾವಿನ ಹಣ್ಣು, ಕಬ್ಬಿನ ಜ್ಯೂಸ್ ಖರೀದಿ ಮಾಡಲು ಜನ ಮುಗಿಬೀಳುತ್ತಿದ್ದಾರೆ.
ಜಲವೈಭವವನ್ನು ವೀಕ್ಷಿಸುತ್ತಲೇ ತಿಂಡಿ ತಿನಿಸುಗಳನ್ನು ತಿಂದು ಸಮಯ ಕಳೆಯಲು ಪ್ರವಾಸಿಗರಿಗೆ ಪ್ರಶಸ್ತ ಸ್ಥಳವಾಗಿದೆ ಧನುಷ್ಕೋಟಿ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications