ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆ ಆರ್ ಎಸ್ ನಲ್ಲಿ ಹೆಚ್ಚು ನೀರಿನ ಸಂಗ್ರಹ : ರೈತರ ಮೊಗದಲ್ಲಿ ಸಂತಸ

|
Google Oneindia Kannada News

ಮೈಸೂರು, ಮಾರ್ಚ್ 16 :ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಲ್ಲಿ ಕಳೆದ ಬಾರಿಗೆ ಹೋಲಿಸಿದರೆ ಈ ಸಲ ಹೆಚ್ಚಿನ ನೀರಿನ ಸಂಗ್ರಹವಿದ್ದು ಮೈಸೂರು, ಬೆಂಗಳೂರು ಮತ್ತು ಮಂಡ್ಯ ಭಾಗದಲ್ಲಿ ಕುಡಿಯುವ ನೀರಿಗೆ ಬರ ಎದುರಾಗದು.

'ಕೆಆರ್ ಎಸ್‌ನಲ್ಲಿ ಕಾವೇರಿ ಪ್ರತಿಮೆ ನಿರ್ಮಾಣ ಮಾಡಿದರೆ ಜಲಾಶಯಕ್ಕೆ ಸಂಚಕಾರ''ಕೆಆರ್ ಎಸ್‌ನಲ್ಲಿ ಕಾವೇರಿ ಪ್ರತಿಮೆ ನಿರ್ಮಾಣ ಮಾಡಿದರೆ ಜಲಾಶಯಕ್ಕೆ ಸಂಚಕಾರ'

ಕೆಆರ್‌ಎಸ್‌ ಜಲಾಶಯದಲ್ಲಿ ಪ್ರಸ್ತುತ ನೀರಿನ ಮಟ್ಟ 102 ಅಡಿಗಳಷ್ಟಿದೆ. 45.05 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯದಲ್ಲಿ 20.14 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿ ಯಲ್ಲಿ 9.57 ಟಿಎಂಸಿ ಅಡಿ ನೀರು ಇತ್ತು. ಬೆಂಗಳೂರು, ಮೈಸೂರು ನಗರ ಸೇರಿದಂತೆ ಇತರ 47 ಪಟ್ಟಣಗಳು, 625 ಗ್ರಾಮಗಳ ಜನರು ದಿನಬಳಕೆ ಮತ್ತು ಕುಡಿಯುವ ನೀರಿಗೆ ಕೆಆರ್‌ಎಸ್ ಜಲಾಶಯ ಅವಲಂಬಿಸಿದ್ದಾರೆ.

ಟ್ರಯಲ್ ಬ್ಲಾಸ್ಟ್ ನಡೆಸದೇ ಕೆಆರ್ ಎಸ್ ನಿಂದ ಹಿಂತಿರುಗಿದ ಪುಣೆ ತಂಡ ಟ್ರಯಲ್ ಬ್ಲಾಸ್ಟ್ ನಡೆಸದೇ ಕೆಆರ್ ಎಸ್ ನಿಂದ ಹಿಂತಿರುಗಿದ ಪುಣೆ ತಂಡ

ಕೆಆರ್‌ಎಸ್‌ನಲ್ಲಿ ಹೆಚ್ಚಿನ ನೀರು ಇರುವುದರಿಂದ ಕುಡಿಯುವ ನೀರಿನ ಕೊರತೆ ಎದುರಾಗದು . ಬೆಂಗಳೂರು, ಮೈಸೂರು ಮತ್ತು ಇತರ ಪಟ್ಟಣಗಳ ನೀರಿನ ಅವಶ್ಯಕತೆ ಪೂರೈಸಲು ಪ್ರತಿ ತಿಂಗಳು ಮೂರು ಟಿಎಂಸಿ ಅಡಿ ನೀರಿನ ಅಗತ್ಯವಿದೆ. ಮುಂದಿನ ಮೂರು ತಿಂಗಳಿಗೆ 9 ಟಿಎಂಸಿ ಅಡಿ ನೀರು ಬೇಕು. ಈಗ ಇರುವ ನೀರನ್ನು ಇತರ ಚಟುವಟಿಕೆಗಳಿಗೆ ಬಳಸದೇ ಇದ್ದರೆ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದು ಎಂದು ಹೇಳಿದ್ದಾರೆ.

more water storage in KRS and Kabini reservoir

ಕೃಷಿ ಚಟುವಟಿಕೆಗಳಿಗೆ ಬಿಡುವ ನೀರಿನ ಪ್ರಮಾಣವನ್ನು ಕಡಿಮೆಗೊಳಿಸಲಾಗಿದೆ. ಕಾವೇರಿ ಕಣಿವೆಯಲ್ಲಿ ಉತ್ತಮ ಮಳೆಯಾಗಿದ್ದರಿಂದ ಜುಲೈ ಎರಡನೇ ವಾರದಲ್ಲೇ ಜಲಾಶಯ ಭರ್ತಿಯಾಗಿತ್ತು. ಕಬಿನಿ ಜಲಾಶಯದಲ್ಲೂ ಕಳೆದ ಬಾರಿಗಿಂತ ಹೆಚ್ಚಿನ ನೀರಿನ ಸಂಗ್ರಹ ಇದೆ. 15.67 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 8.67 ಟಿಎಂಸಿ ಅಡಿ ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 4.74 ಟಿಎಂಸಿ ಅಡಿ ನೀರು ಇತ್ತು. ಆದರೆ, ಹೇಮಾವತಿ, ಹಾರಂಗಿ ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತಲೂ ಕಡಿಮೆ ನೀರಿದೆ.

English summary
This time, there is a lot of water storage in KRS and Kabini reservoirs compared to the last time in Mysuru, Bangalore and Mandya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X