ಇದೆಂಥ ಕ್ರೌರ್ಯ! ಆಸ್ಪತ್ರೆ ಶೌಚಾಲಯದಲ್ಲಿ ಮುದ್ದಾದ ಹೆಣ್ಣು ಶಿಶು!
ಮೈಸೂರು, ಡಿಸೆಂಬರ್ 19: ಮಕ್ಕಳಿಲ್ಲಾಂತ ಕಂಡ ಕಂಡ ದೇವರಿಗೆ ಹರಕೆ ಕಟ್ಟಿಕೊಂಡು, ಆಸ್ಪತ್ರೆಗಳಿಗೆಲ್ಲ ಎಡತಾಕುವ ಸಾವಿರಾರು ಮಹಿಳೆಯರು ನಮ್ಮ ನಡುವಲ್ಲಿದ್ದಾರೆ. ಆದರೆ ಮೈಸೂರಿನ ಮಹಾನ್ ತಾಯಿಯೊಬ್ಬಳು ತಾನು ಹೆತ್ತ ಶಿಶುವನ್ನೇ ಶೌಚಾಲಯದಲ್ಲಿ ಎಸೆದು ಹೋಗುವ ಮೂಲಕ ಎಲ್ಲರ ಹಿಡಿಶಾಪಕ್ಕೆ ತುತ್ತಾಗುತ್ತಿದ್ದಾಳೆ.
ಎಚ್.ಡಿ.ಕೋಟೆಯ ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಡಿ.18 ರಂದು ಈ ಘಟನೆ ನಡೆದಿದ್ದು, ಅಪರಿಚಿತ ಮಹಿಳೆಯೊಬ್ಬರು ತಾನು ಹೆತ್ತ ಹೆಣ್ಣು ಶಿಶುವನ್ನು ಆಸ್ಪತ್ರೆಯ ಶೌಚಾಲಯದಲ್ಲಿ ಬಿಸಾಡಿ ಹೋಗಿದ್ದಾರೆ.

ಆಸ್ಪತ್ರೆಯಲ್ಲಿ ಯಾವುದೇ ಗರ್ಭಿಣಿ ದಾಖಲಾಗಿರಲಿಲ್ಲ. ಜತೆಗೆ ಹೆರಿಗೆಯೂ ಆಗಿರುವ ಬಗ್ಗೆ ದಾಖಲಾತಿ ಇಲ್ಲದ್ದರಿಂದ ಹೊರಗೆ ಹೆರಿಗೆಯಾಗಿ, ಇಲ್ಲಿ ತಂದು ಮಗುವನ್ನು ಮಲಗಿಸಿ ಪರಾರಿಯಾಗಿರಬಹುದು ಎಂದು ಶಂಕಿಸಲಾಗುತ್ತಿದೆ.
ಅನೈತಿಕ ಸಂಬಂಧಕ್ಕೆ ಈ ಮಗುವಿನ ಜನ್ಮವಾಗಿರಬೇಕು ಹೀಗಾಗಿ ಮಗುವನ್ನು ಬಿಟ್ಟು ಆಕೆ ಹೋಗಿರಬಹುದು ಎಂಬುದು ಕೆಲವರ ಅಭಿಪ್ರಾಯ. ಡಿ.18 ರಂದು ಆಸ್ಪತ್ರೆಯ ಸಿಬ್ಬಂದಿ ಕಸಗುಡಿಸಲೆಂದು ಶೌಚಾಲಯಕ್ಕೆ ತೆರಳಿದ ಸಂದರ್ಭ ಮಗು ಕಂಡು ಬಂದಿದ್ದು, ಅದು ಕೈಕಾಲನ್ನು ಆಡಿಸುತ್ತಿರುವುದನ್ನು ಕಂಡ ಸಿಬ್ಬಂದಿ ಕೂಡಲೇ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ತಾಲೂಕು ವೈದ್ಯಾಧಿಕಾರಿ ಭಾಸ್ಕರ್ ಮತ್ತು ಸಿಬ್ಬಂದಿ ಮಗುವನ್ನು ರಕ್ಷಿಸಿ ಆಸ್ಪತ್ರೆಯಲ್ಲಿ ಆರೈಕೆ ಮಾಡಿದ್ದು ಮಗು ಆರೋಗ್ಯವಾಗಿದೆ.
ಈ ಸಂಬಂಧ ಪಟ್ಟಣ ಠಾಣೆಯ ಪಿಎಸ್ ಐ ಅಶೋಕ್ ಮತ್ತು ಸಾಂತ್ವಾನ ಕೇಂದ್ರದ ಸಮಾಲೋಚಕಿ ಜಶೀಲ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮಗುವನ್ನು ಮಹಿಳಾ ಸಾಂತ್ವಾನ ಕೇಂದ್ರದ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಇದರ ಪೋಷಣೆ ಇತರೆ ಮಕ್ಕಳ ನಡುವೆ ನಡೆಯುತ್ತಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications