ನಮಾಜ್ ಮೂಲಕ ಉತ್ತಮ ವರ ಸಿಗುವ ಆಮಿಷ; ಹುಣಸೂರಿಯಲ್ಲಿ ಮೌಲ್ವಿಯಿಂದ ಅತ್ಯಾಚಾರ
ಮೈಸೂರು, ಜೂನ್ 03: ಮಸೀದಿಯಲ್ಲಿ ದೇವರಿಗೆ ವಿಶೇಷ ನಮಾಜ್ ಸಲ್ಲಿಸಿದರೆ ವಿವಾಹವಾಗುತ್ತದೆ ಎಂದು ಯುವತಿಯನ್ನು ನಂಬಿಸಿ, ಮೌಲ್ವಿಯೊಬ್ಬ ಆಕೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿರುವ ಪ್ರಕರಣ ಇಲ್ಲಿಗೆ ಸಮೀಪದ ಹುಣಸೂರು ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ.
ಚಿಲ್ಕುಂದ ಗ್ರಾಮದ ಯುವತಿ ಅತ್ಯಾಚಾರಗೊಳಗಾಗಿದ್ದು, ಹುಣಸೂರಿನ ಲಾಲ್ಬನ್ ಬೀದಿಯ ವಾಸಿ, ಹೈರಿಗೆ ಗ್ರಾಮದ ಮಸೀದಿಯ ಧರ್ಮಗುರು ಜಬೀವುಲ್ಲಾ ಎಂಬಾತ ಪ್ರಕರಣದ ಆರೋಪಿ ಆಗಿದ್ದಾನೆ. ಪರಿಚಿತಳಾಗಿದ್ದ ಈ ಯುವತಿಗೆ ಉತ್ತಮ ವರ ಸಿಗಬೇಕಾದರೆ ವಿಶೇಷ ನಮಾಜ್ ಮಾಡುತ್ತೇನೆ ಎಂದು ನಂಬಿಸಿದ್ದ. ಈ ಮೂಲಕ ಯುವತಿಯ ವಿಶ್ವಾಸ ಗಳಿಸಿಕೊಂಡ ಈತ ನಂತರ ಈ ನೆಪದಲ್ಲಿ ಯುವತಿಯ ಮೇಲೆಯೇ ಅತ್ಯಾಚಾರ ಎಸಗಿದ್ದ.
ಲಾಕ್ಡೌನ್: ಮನೆಗೆ ಬಂದಿದ್ದ ಮಗಳ ಮೇಲೆ ತಂದೆಯಿಂದ ಅತ್ಯಾಚಾರ
ಈತನ ಪೈಶಾಚಿಕ ಕೃತ್ಯದಿಂದ ನೊಂದ ಯುವತಿ, ತನ್ನ ತಂದೆಗೆ ಘಟನೆ ಬಗ್ಗೆ ತಿಳಿಸಿದ್ದಾಳೆ. ಯುವತಿಯ ತಂದೆಯು ಹುಣಸೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮೌಲ್ವಿ ವಿರುದ್ಧ ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ.