ದಸರಾ ಬಳಿಕ ಮೈಸೂರು ರಿಂಗ್ ರಸ್ತೆಗೆ ಹೊಸ ‘ಬೆಳಕು’
ಮೈಸೂರು, ಅ.16: ನಗರದ ಹೊರವಲಯದ ರಿಂಗ್ ರಸ್ತೆಗಳಿಗೆ ನವೆಂಬರ್ 30ರೊಳಗೆ ಬೀದಿ ದೀಪ ಅಳವಡಿಸುವ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ದಸರಾ ಮಹೋತ್ಸವದ ಅಂಗವಾಗಿ ನಗರ ಪ್ರಮುಖ ವೃತ್ತಗಳಿಗೆ ದೀಪಾಲಂಕಾರ ಅಳವಡಿಸಲಾಗಿತ್ತು. 124 ಕಿಮೀ ರಸ್ತೆಗಳಿಗೂ ಹಾಗೂ 96 ವೃತ್ತಗಳಿಗೆ ಆಕರ್ಷಕ ದೀಪಾಲಂಕಾರ ಮಾಡಲಾಗಿತ್ತು. ಇದು ಪ್ರವಾಸಿಗರನ್ನು ಸಾಕಷ್ಟು ಆಕರ್ಷಿಸಿತ್ತು. ಆದರೆ, ರಿಂಗ್ ರಸ್ತೆ ಮಾತ್ರ ಕತ್ತಲಲ್ಲೇ ಇತ್ತು. ಇದರಿಂದ ಅಪರಾಧ ಕೃತ್ಯಗಳು ಹೆಚ್ಚಾಗಿದ್ದವು. ಅಲ್ಲದೆ, ಅನಗತ್ಯ ಕಸಗಳನ್ನು ರಿಂಗ್ರಸ್ತೆಗೆ ತಂದು ಸುರಿಯುತ್ತಿದ್ದರು. ಇದನ್ನೆಲ್ಲಾ ಗಮನಿಸಿದ ಸಂಸದರು ಇದೀಗ ರಿಂಗ್ ರಸ್ತೆಯ ಬೀದಿದೀಪಗಳನ್ನು ದುರಸ್ತಿ ಮಾಡುವ ಕಾರ್ಯಕ್ಕೆ ಮುಂದಾಗಿದ್ದಾರೆ.
ರಿಂಗ್ ರಸ್ತೆ ಕೆಲವು ವರ್ಷಗಳಿಂದ ಕತ್ತಲಲ್ಲೇ ಇದೆ. ಮುಡಾ ಹಾಗೂ ನಗರಪಾಲಿಕೆ ತಾರತಮ್ಯ ನೀತಿಯಿಂದ ಬೆಳಕಿನ ಭಾಗ್ಯ ಮಾತ್ರ ಸಿಕ್ಕಿರಲಿಲ್ಲ. ರಿಂಗ್ ರಸ್ತೆ ನಮಗೆ ಬರುವುದಿಲ್ಲ ಎಂದು ನಗರಪಾಲಿಕೆ, ಅನುದಾನ ಇಲ್ಲ ಅಂತ ಮುಡಾ ದುರಸ್ತಿ ಕಾಮಗಾರಿಗೆ ಮುಂದಾಗಿರಲಿಲ್ಲ. ಜೊತೆಗೆ ರಿಂಗ್ ರಸ್ತೆಯಲ್ಲಿನ ಹೆಗ್ಗಣಗಳು ಬಿಲ ತೋಡಿ ವೈರ್ಗಳನ್ನು ಕಚ್ಚಿ ಹಾಳು ಮಾಡಿದ್ದವು. ಇದರಿಂದ ರಿಂಗ್ ರಸ್ತೆಯ ಬೀದಿದೀಪಗಳು ದುರಸ್ತಿಗೆ ಬಂದಿದ್ದವು.

''42.5 ಕಿ.ಮೀ. ಉದ್ದದ ರಿಂಗ್ ರಸ್ತೆಯುದ್ದಕ್ಕೂ ಗುಂಡಿ ತೆಗೆದು ಅಂಡರ್ ಗ್ರೌಂಡ್ ಕೇಬಲ್ ಹಾಕಿ, ಎಲ್ಇಡಿ ಬಲ್ಗಳನ್ನು ಅಳವಡಿಸಲು ಮುಡಾದಿಂದ 12 ಕೋಟಿ ರೂಪಾಯಿ ಮಂಜೂರು ಮಾಡಿಸಲಾಗಿದೆ. ಪಾಲಿಕೆ ಇದರ ನಿರ್ವಹಣೆ ಜವಾಬ್ದಾರಿ ಹೊತ್ತುಕೊಂಡು ಸೆಸ್ಕ್ಗೆ ಪ್ರತಿ ತಿಂಗಳೂ ರಿಂಗ್ ರಸ್ತೆ ದೀಪಗಳ ವಿದ್ಯುತ್ ಬಿಲ್ ಪಾವತಿಸುತ್ತದೆ. ಅದರಂತೆ ಎರಡು ಬಾರಿ ಟೆಂಡರ್ ಕರೆದಾಗ ಒಬ್ಬರೇ ಪಾಲ್ಗೊಂಡಿದ್ದರು. ಹಾಗಾಗಿ ಪಾಲಿಕೆ ಅಧಿಕಾರಿಗಳು ಅದೇ ವ್ಯಕ್ತಿಗೆ ಕಾಮಗಾರಿಯನ್ನು ಒಪ್ಪಿಸಿದ್ದಾರೆ. ಸದ್ಯ ಅಂಡರ್ ಗ್ರೌಂಡ್ ಕೇಬಲ್ ಅಳವಡಿಸಲಾಗಿದೆ. ಹಾಳಾಗಿರುವ ಕಂಬಗಳನ್ನು ಸರಿಪಡಿಸಿ, ಎಲ್ಇಡಿ ಬಲ್ಬ್ ಅಳವಡಿಸುವ ಕೆಲಸ ಶೀಘ್ರದಲ್ಲೇ ಆರಂಭವಾಗಲಿದೆ,'' ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications