ಯೋಗಿ ಆದಿತ್ಯನಾಥ್ ಅವಹೇಳನ : ಪ್ರತಾಪ್ ಸಿಂಹ ಆಕ್ರೋಶ
ಯೋಗಿ ಆದಿತ್ಯನಾಥ್ ಬಗೆಗಿನ ತಿರುಚಲ್ಪಟ್ಟ ಅಶ್ಲೀಲ ಚಿತ್ರವೊಂದನ್ನು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ಪ್ರಭಾ ಅವರ ನಡೆಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ.
ಮೈಸೂರು ಮಾರ್ಚ್ 21: ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಅಪಲೋಡ್ ಮಾಡಿದ್ದ ಪ್ರಭಾ ಎನ್. ಬೆಳವಂಗಲ ಅವರದ್ದು ಕೀಳು ಅಭಿರುಚಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಯೋಗಿ ಆದಿತ್ಯನಾಥ್ ಬಗೆಗಿನ ತಿರುಚಲ್ಪಟ್ಟ ಅಶ್ಲೀಲ ಚಿತ್ರವೊಂದನ್ನು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ಪ್ರಭಾ ಅವರ ನಡೆಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಈ ಕುರಿತು ರಾಜ್ಯದ ಹಲವು ಪೊಲೀಸ್ ಠಾಣೆಗಳಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೂರನ್ನೂ ದಾಖಲಿಸಲಾಗಿದೆ.[ವಿವಾದ, ಹಿಂದುತ್ವ, ಸನ್ಯಾಸದ ಘಾಟು ಮಿಕ್ಸ್ಚರ್ ಯೋಗಿ ಆದಿತ್ಯನಾಥ್]

ಎಫ್ ಐ ಆರ್ ದಾಖಲಿಸಿ ಆಕೆಯನ್ನು ಬಂಧಿಸಬೇಕು, ಇಲ್ಲವಾದಲ್ಲಿ ನ್ಯಾಯಾಲಯದಲ್ಲಿ ಖಾಸಗೀ ದೂರು ನೀಡಲಾಗುವುದು, ಆಕೆಯ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.[ಯೋಗಿ ಎಫೆಕ್ಟ್: ಅಲಹಾಬಾದ್ ನಲ್ಲಿ ಎರಡು ಕಸಾಯಿ ಖಾನೆಗಳಿಗೆ ಬೀಗ]
ಯಾವುದೋ ಬಿ ಗ್ರೇಡ್ ಚಿತ್ರವನ್ನು ತಿರುಚಿರುವ ಅವರಿಗೆ ಕೀಳು ಅಭಿರುಚಿಯಿದೆ, ಅವರಿಗೆ ಇಂಥ ಕೆಲಸ ಮಾಡುವ ಆಸೆಯಿದ್ದರೆ ಉತ್ತರ ಪ್ರದೇಶದವರೆಗೂ ಹೋಗುವ ಅಗತ್ಯವಿಲ್ಲ, ಬಾಗಲಕೋಟೆಯ ಮೇಟಿ ಕಚೇರಿಗೆ ಹೋಗಲಿ. ಅಲ್ಲಿ ನಡೆಯುತ್ತಿರುವುದನ್ನು ನೇರವಾಗಿ ನೋಡಲಿ, ಇಲ್ಲವಾದರೆ ಸ್ವ ಅನುಭವ ಪಡೆಯಲಿ ಎಂದಿದ್ದಾರೆ.[15 ದಿನದೊಳಗೆ ಆದಾಯ ವಿವರ ನೀಡಿ: ಯೋಗಿ ಆದಿತ್ಯನಾಥ್]
ನನಗೆ ಹೆಣ್ಣಿನ ಬಗ್ಗೆ ಗೌರವವಿದೆ, ಆದರೆ ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ಆ ವಿಡಿಯೋದಲ್ಲಿ ಕಾಣಿಸಿರುವ ನಟಿಯ ಮಾನ ಹರಾಜು ಮಾಡುವವರ ಬಗ್ಗೆ ಗೌರವವಿಲ್ಲ. ಆ ನಟಿಯ ಪರವಾಗಿ ಮಹಿಳಾ ಪರ ಸಂಘಟನೆಗಳು ಧ್ವನಿ ಎತ್ತಲಿ. ಪ್ರಭಾ ಅಂಥವರಿಗೆ ಸರಿಯಾದ ಶಿಕ್ಷೆಯಾಗಲಿ ಎಂದು ಸಿಂಹ ಗುಡುಗಿದ್ದಾರೆ.[ಆ ಒಂದು ಘಟನೆಯೇ ಯೋಗಿ ಸಿಎಂ ಆಗಲು ಮೂಲ ಕಾರಣ!]
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications