ಡಾ.ಸಿ.ಎನ್.ಮಂಜುನಾಥ್ ರಾಜಕೀಯಕ್ಕೆ ಬರಬೇಕು ಎಂದ ಸಂಸದ ಪ್ರತಾಪ್ ಸಿಂಹ
ಮೈಸೂರು: ಹಣ ಇದ್ದವರು ಮಾತ್ರ ಅಲ್ಲ ಉತ್ತಮ ಗುಣ ಇರುವವರು ರಾಜಕೀಯಕ್ಕೆ ಬರಬೇಕು. ಹಾಗಾಗಿ ಡಾ.ಸಿ.ಎನ್.ಮಂಜುನಾಥ್ ಅವರು ರಾಜಕೀಯಕ್ಕೆ ಬರಬೇಕು, ಎಂದು ಸಂಸದ ಪ್ರತಾಪಸಿಂಹ ವೇದಿಕೆಯಲ್ಲೇ ಆಹ್ವಾನ ನೀಡಿದರು.
ನಗರದ ಕಲಾಮಂದಿರದಲ್ಲಿ ಡಾ. ಮಂಜುನಾಥ್ ಅಭಿನಂದನಾ ಸಮಿತಿ ಮೈಸೂರು ವತಿಯಿಂದ 'ಧನ್ಯವಾದ ಧನ್ವಂತರಿ' ಎಂಬ ಹೆಸರಿನಲ್ಲಿ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. "ರಾಜಕೀಯ ಕೆಟ್ಟದ್ದಲ್ಲ. ರಾಜಕೀಯಕ್ಕೆ ಒಳ್ಳೆಯವರು ಬರಬೇಕು. ನಾನು ಏನು ಇಲ್ಲದೆ ರಾಜಕೀಯ ಬಂದವನು. ಜನ ಎರಡು ಬಾರಿ ಗೆಲ್ಲಿಸಿದರು. ಒಳ್ಳೆಯ ವ್ಯಕ್ತಿಗಳು ರಾಜಕೀಯಕ್ಕೆ ಬಂದಾಗ ಜನ ಖಂಡಿತವಾಗಿ ಸ್ವೀಕರಿಸುತ್ತಾರೆ. ಹಾಗಾಗಿ ಡಾ.ಮಂಜುನಾಥ್ ಅವರು ರಾಜಕೀಯಕ್ಕೆ ಬರಬೇಕು" ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಡಾ.ಸಿ.ಎನ್.ಮಂಜುನಾಥ್ ಅವರು, ನನ್ನ ಸೇವೆ ರಾಷ್ಟ್ರಮಟ್ಟದಲ್ಲೂ ಸಿಗಬೇಕೆಂಬ ಹಂಬಲವನ್ನು ಬಹಳಷ್ಟು ಜನರು ವ್ಯಕ್ತಪಡಿಸಿದ್ದಾರೆ. ಹಾಗಾಗಿ ಈ ಬಗ್ಗೆ ನಾನು ಆಲೋಚನೆ ಮಾಡುತ್ತಿದ್ದೇನೆ. ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, "ಜಯದೇವ ಆಸ್ಪತ್ರೆಯಿಂದ 75 ಲಕ್ಷ ಹೊರ ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. 8 ಲಕ್ಷ ರೋಗಿಗಳಿಗೆ ಶಸಚಿಕಿತ್ಸೆ ಮಾಡಲಾಗಿದೆ. ಆಸ್ಪತ್ರೆಯ ಪ್ರತಿಯೊಬ್ಬ ವೈದ್ಯರು, ಸಿಬ್ಬಂದಿ ಪರಿಶ್ರಮದಿಂದ ಇದು ಸಾಧ್ಯವಾಯಿತು. ನನಗೆ ಹಲವಾರು ಪ್ರಶಸ್ತಿಗಳು ಬಂದಿವೆ. ಆದರೆ, ಜನರು ನೀಡುವ ಸನ್ಮಾನ ಎಲ್ಲಾ ಪ್ರಶಸ್ತಿಗಿಂತ ವಿಶೇಷ ಎಂದೇ ಭಾವಿಸುವೆ" ಎಂದರು.
"ನಾವೆಲ್ಲರೂ ಜನರ ಹೃದಯ ಗೆಲ್ಲಬೇಕು. ದ್ವೇಷ ಕಳೆಯಬೇಕು. ಪ್ರೀತಿ ಹಂಚಬೇಕು. ಹಂಚಿ ತಿನ್ನುವ ಸಂಸ್ಕಾರ ಬೆಳೆಸಿಕೊಳ್ಳಬೇಕು. ವ್ಯಕ್ತಿ ಹೋದರೂ ವ್ಯಕ್ತಿತ್ವ ಶಾಶ್ವತವಾಗಿ ಉಳಿಯುವಂತಾಗಬೇಕು. ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆ ಬಂದವರ ಬಳಿ ಹಣ ಕಟ್ಟಿಸಿಕೊಳ್ಳುವುದಿಲ್ಲ. ಆ ನಾಮಲಕವನ್ನು ನಾವು ಆಸ್ಪತ್ರೆಯ ಆವರಣದಲ್ಲೇ ಹಾಕಿದ್ದೇವೆ. ಕೆಲಸ ಮಾಡಲು ಇಂತಹ ಹೃದಯಸ್ಪರ್ಶಿ ವಾತಾವರಣ ತುಂಬಾ ಮುಖ್ಯ" ಎಂದು ಹೇಳಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications