ಬಹುನಿರೀಕ್ಷಿತ ಮೈಸೂರು – ಬೆಂಗಳೂರು ಮೆಮೂ ರೈಲಿಗೆ ಹಸಿರು ನಿಶಾನೆ
ಮೈಸೂರು, ಡಿಸೆಂಬರ್ 24 : ಮೈಸೂರು - ಬೆಂಗಳೂರು ನಡುವಿನ ಸುಗಮ ಸಂಚಾರಕ್ಕಾಗಿ ಮೆಮೂ ರೈಲಿಗೆ ಭಾನುವಾರ ಸಂಸದ ಪ್ರತಾಪ್ ಸಿಂಹ ಗ್ರೀನ್ ಸಿಗ್ನಲ್ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ.
ಬೆಂಗಳೂರು-ರಾಮನಗರದ ನಡುವೆ ಸಂಚರಿಸುತ್ತಿದ್ದ ಎಲೆಕ್ಟ್ರಿಕ್ ರೈಲನ್ನು (ಮೆಮೂ) ಮೈಸೂರಿನ ತನಕ ವಿಸ್ತರಿಸಲಾಗಿದ್ದು, ವಾರಕ್ಕೆ ನಾಲ್ಕು ದಿನ ಇದರ ಸೇವೆ ಪ್ರಯಾಣಿಕರಿಗೆ ಲಭ್ಯವಾಗಲಿದೆ. ವಾರದಲ್ಲಿ ಗುರುವಾರದಿಂದ ಭಾನುವಾರ ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚಾರ ಮಾಡಲಿದೆ.
ಬೆಳಗ್ಗೆ 4:45ಕ್ಕೆ ಮೈಸೂರಿನಿಂದ ಹೊರಡಲಿರುವ ರೈಲು ಬೆಳಗ್ಗೆ 8:30ಕ್ಕೆ ಬೆಂಗಳೂರು ತಲುಪಲಿದೆ. ಬೆಂಗಳೂರಿನಿಂದ ಸಂಜೆ 7:55ಕ್ಕೆ ಹೊರಡಲಿರುವ ಮೆಮು ಟ್ರೈನ್ ರಾತ್ರಿ 10:30ಕ್ಕೆ ಮೈಸೂರಿಗೆ ತಲುಪಲಿದೆ. ಡಿ.26ರಿಂದ ಸಂಚಾರ ಆರಂಭವಾಗಲಿದ್ದು, 30 ರೂ. ನಲ್ಲಿ ಬೆಂಗಳೂರು-ಮೈಸೂರು ಪ್ರಯಾಣ ಬೆಳಸಬಹುದು.

ಈ ರೈಲಿನ ಕುರಿತು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಕೊಡಗು ಹಾಗೂ ಮೈಸೂರು ನಡುವೆ ಚತುಷ್ಫಥ ರಸ್ತೆಗೆ ಚಾಲನೆ ನೀಡಲಾಗಿದೆ. 700 ಕೋಟಿ ರೂ. ವೆಚ್ಚದಲ್ಲಿ ಮೈಸೂರು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿದೆ.
ಸಚಿವ ಜಿ.ಟಿ.ದೇವೇಗೌಡ ಅವರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅವಶ್ಯಕವಿರುವ ಸ್ಥಳ ನೀಡುವುದಾಗಿ ತಿಳಿಸಿದ್ದಾರೆ ಎಂದರು.
ಇದೇ ವೇಳೆ ಜೆಡಿಎಸ್ ಎಂ ಎಲ್ ಸಿ ಸಂದೇಶ್ ನಾಗರಾಜ್ ಸಂಸದ ಪ್ರತಾಪ್ ಸಿಂಹ ಪರ ಬ್ಯಾಟ್ ಬೀಸಿದರು. ಸಿಂಹ ಒಂದು ತರ ಜಿಗಣೆಯ ಹಾಗೆ. ಅವರು ಹಿಡಿದ ಕೆಲಸ ಪೂರ್ಣ ಮಾಡುವವರೆಗೆ ಬಿಡಲ್ಲ. ಮೈಸೂರಿನ ಅಭಿವೃದ್ಧಿಗೆ ಪ್ರತಿನಿತ್ಯ ಮೈಸೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಾರೆ. ಇದುವರೆಗೂ ಅನೇಕ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ.
ಈಗ ಮೈಸೂರಿಗೆ ಮೆಮೂ ಟ್ರೈನ್ ತಂದಿದ್ದಾರೆ. ಶತಾಬ್ದಿ ಎಕ್ಸ್ಪ್ರೆಸ್ ರೈಲು ಪ್ರತಿನಿತ್ಯ ಚೆನ್ನೈ ತಲುಪುತ್ತದೆ. ಅದರೆ ಇದಕ್ಕೆ ಸರಿಸಮನಾದ ಮತ್ತೊಂದು ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಅವರಿಗೆ ನಾನು ಕೋರಿದ್ದೇನೆ. ಬೆಳಿಗ್ಗೆ ಮೈಸೂರಿನಿಂದ ಪ್ರತಿನಿತ್ಯ 4 ರೈಲುಗಳು ಬೆಂಗಳೂರಿಗೆ ತೆರಳುತ್ತಿವೆ. ಜತೆಗೆ ಇನ್ನೂ ಒಂದು ಹೆಚ್ಚುವರಿ ರೈಲನ್ನು ನೀಡುವಂತೆ ಸಂದೇಶ್ ಮನವಿ ಮಾಡಿದರು.
ಮೈಸೂರಿನ ಹಿನಕಲ್ ಬಳಿಯ ಜಿಲ್ಲೆಯ ಮೊದಲ ಫ್ಲೈ ಓವರ್ ಅನ್ನು ಪ್ರತಾಪ್ ಸಿಂಹ ಅಧ್ಯಕ್ಷತೆಯಲ್ಲಿ ಸಚಿವ ಜಿ ಟಿ ದೇವೇಗೌಡ ಚಾಲನೆ ನೀಡಿದರು. ಪ್ರತಾಪ್ ಸಿಂಹ ಅವರ ಕಾಳಜಿಯಿಂದ ಜಿಲ್ಲೆಯಾದ್ಯಂತ ಕೇಂದ್ರ ಸರಕಾರದ ಯೋಜನೆಗಳು ಜಾರಿಗೊಂಡು ಪ್ರಗತಿಯಲ್ಲಿದೆ ಎಂದು ಸಚಿವ ಜಿ.ಟಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications