ಅನುದಾನದ ಹಣದಲ್ಲಿ ಮೋಸವಾಗುತ್ತಿದೆ; ಪ್ರತಾಪ್ ಸಿಂಹ
ಮೈಸೂರು, ಜೂನ್ 12: ಮೈಸೂರು ಮಹಾನಗರ ಪಾಲಿಕೆಗೆ ಕೇಂದ್ರ ಸರ್ಕಾರದಿಂದ ಅಭಿವೃದ್ಧಿಗಾಗಿ ದೊರೆತ ಅನುದಾನದ ಹಣವನ್ನು ಸ್ಥಳೀಯ ಕಾರ್ಪೊರೇಟರ್ ಗಳೇ ಬಳಸಿಕೊಳ್ಳುವ ಮಾಫಿಯಾ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ 14ನೇ ಹಣಕಾಸು ಆಯೋಗದಿಂದ ಪಾಲಿಕೆಗೆ ಹಣ ಬರುತ್ತದೆ. ಹೆಚ್ಚಿನ ಅನುದಾನವನ್ನು ಸರ್ಕಾರ ನೀಡುತ್ತದೆ. ಈ ಬಾರಿಯೂ 68 ಕೋಟಿ ಅನುದಾನ ಕೊಟ್ಟಿದ್ದೇವೆ. ಪಾಲಿಕೆಯಲ್ಲಿ ನಾಮಕಾವಸ್ಥೆಗೆ ಕೌನ್ಸಿಲ್ ಮೀಟಿಂಗ್ ಎಂದು ಮಾಡಿ ಕೆಲವು ಹಿರಿಯ ಕಾರ್ಪೊರೇಟರ್ ಗಳು ಹೆಚ್ಚಿನ ಪಾಲನ್ನು ತೆಗೆದುಕೊಳ್ಳುತ್ತಿದ್ದಾರೆ. ಕೆಲವು ವಾರ್ಡ್ ಗಳಿಗೆ ಸಮನಾಗಿ ಹಣವನ್ನು ಹಂಚುತ್ತಿಲ್ಲ ಎಂದು ದೂರಿದರು.
ಈ ವಿಷಯವನ್ನು ನಾನು ಕಮಿಷನರ್ ಶಿಲ್ಪಾ ನಾಗ್ ಅವರ ಗಮನಕ್ಕೂ ತಂದಿದ್ದೇನೆ. ಜಿಲ್ಲಾಧಿಕಾರಿ ಅವರಿಗೆ ಈ ಕೂಡಲೇ ಪತ್ರ ಬರೆಯುತ್ತಿದ್ದೇನೆ. ಕಾರ್ಪೊರೇಷನ್ ನಲ್ಲಿ ಒಂದು ಮಾಫಿಯಾ ಮಾಡಿಕೊಂಡು ಇಂತಿಷ್ಟು ಹಣ ಅಂತ ಹಂಚಿಕೊಳ್ಳುವುದು, ಅದಕ್ಕೆ ಕೌನ್ಸಿಲ್ ಮೀಟಿಂಗ್ ನಲ್ಲಿ ಒಪ್ಪಿಗೆ ಸೂಚಿಸುವುದು ಕೂಡ ನಡೆಯುತ್ತಿದೆ. ಇದು ಅಂತ್ಯವಾಗಬೇಕು ಎಂದರು.

ಕೇಂದ್ರ ಸರ್ಕಾರದಿಂದ ಬರುವ ಹಣದಲ್ಲಿ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಬೇಕು. ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡಬೇಕು. 14ನೇ ಹಣಕಾಸು ಆಯೋಗದಿಂದ ಏನು ಹಣ ಬಂದಿದೆ ಅದನ್ನಷ್ಟು ಕುಡಿಯುವ ನೀರಿನ ವ್ಯವಸ್ಥೆ ಮಾಡಲಿಕ್ಕೆ ಬಳಸಿ ಉಳಿದ ಹಣವನ್ನು ವಾರ್ಡ್ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದರು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications