ಹೊಡೆದರೆ ಹುಲಿಯನ್ನೇ ಹೊಡಿಬೇಕು, ಕತ್ತೆಯನ್ನಲ್ಲ : ಪ್ರತಾಪ್ ಸಿಂಹ
ಮೈಸೂರು, ಸೆಪ್ಟೆಂಬರ್. 21 : "ಹೊಡೆದರೆ ಹುಲಿಯನ್ನೇ ಹೊಡೆದೊಡಿಸಬೇಕೇ ವಿನಃ ಕತ್ತೆಯನ್ನಲ್ಲ"....ಇದು ಸಂಸದ ಪ್ರತಾಪ್ ಸಿಂಹ ಸಚಿವ ಜಿಟಿ.ದೇವೇಗೌಡರ ಗೆಲುವಿನ ಬಗ್ಗೆ ಆಡಿದ ಮಾತುಗಳು.
ಮೈಸೂರಿನ ನಾಗನಹಳ್ಳಿ ರೈಲ್ವೆ ನಿಲ್ದಾಣ ಸ್ಥಳ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು ಜಿಟಿಡಿಯವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಶಕ್ತಿ ಏನು ಎಂಬುದನ್ನು ತೋರಿಸಿದ್ದಾರೆ.
ನಮ್ಮ ಉತ್ತರ ಕರ್ನಾಟಕ ಮಾತಿನ ಶೈಲಿಯಲ್ಲಿ ಹೇಳಬೇಕಾದರೆ 'ಹೊಡೆದರೆ ಹುಲಿಯನ್ನೇ ಹೊಡಿಬೇಕು, ಕತ್ತೆಯನ್ನಲ್ಲ' ಎನ್ನುವ ಮಾತಿಗೆ ತಕ್ಕ ಹಾಗೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಸಿದ್ದರಾಮಯ್ಯನವರನ್ನೇ ಸೋಲಿಸಿದ್ದಾರೆ ಎಂದು ಜಿಟಿಡಿ ಗೆಲುವಿನ ಪರಿಯನ್ನು ಹೊಗಳಿದರು.
ಪ್ರತಾಪ್ ಸಿಂಹ ಅವರ ಈ ಹೇಳಿಕೆ ಇದೀಗ ಸಾಕಷ್ಟು ಕುತೂಹಲ ಮೂಡಿಸಿದೆ.

ದಂಗೆ ಹೇಳಿಕೆ ಸಮರ್ಥಿಸಿಕೊಂಡ ಜಿಟಿಡಿ
ವಿರೋಧ ಪಕ್ಷದ ವಿರುದ್ಧ ರಾಜ್ಯದಲ್ಲಿ ಜನ ದಂಗೆ ಏಳಬೇಕೆನ್ನುವ ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಚಿವ ಜಿ.ಟಿ. ದೇವೇಗೌಡ, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಮಾಡಲು ಬಿಡುತ್ತಿಲ್ಲ. ಒಂದು ಕಡೆ ಭೀಕರ ಬರಗಾಲ, ಮತ್ತೊಂದು ಕಡೆ ನೆರೆ ಇದೆ.

ಇಂತಹ ಪರಿಸ್ಥಿತಿಯಲ್ಲಿ ವಿರೋಧ ಪಕ್ಷದವರು ರಾಜ್ಯದ ಅಭಿವೃದ್ಧಿಗೆ ತೊಂದರೆ ಮಾಡುತ್ತಿದ್ದಾರೆ. ಆಡಳಿತ ಪಕ್ಷಕ್ಕೆ ಅಧಿಕಾರ ನಡೆಸಲು ಅವಕಾಶ ಮಾಡಿಕೊಡಬೇಕು ಎನ್ನುವ ಅರ್ಥದಲ್ಲಿ ಸಿಎಂ ಹಾಗೇ ಮಾತನಾಡಿದ್ದಾರೆ. ಬೇರೆ ಯಾವುದೇ ದುರುದ್ದೇಶದಿಂದ ಈ ಹೇಳಿಕೆಯನ್ನು ನೀಡಿಲ್ಲ ಎಂದು ಸ್ಪಷ್ಟನೆ ನೀಡಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications