'ರೋಹಿಣಿ ಸಿಂಧೂರಿಯ ಮೇಲ್ಮನವಿಯನ್ನೇ ಅಸಿಂಧುಗೊಳಿಸೋದಂದ್ರೆ... ಛೇ..!': ಪ್ರತಾಪ್ ಸಿಂಹ ಟಾಂಗ್
ಮೈಸೂರು, ಜುಲೈ 27: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.
ಚಾಮುಂಡಿ ಬೆಟ್ಟದ ತಪ್ಪಲಿನ ಕುರುಬಾರಹಳ್ಳಿ, ಆಲನಹಳ್ಳಿ, ಚೌಡಹಳ್ಳಿಯ ಭೂ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಹಿಂದಿನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.
1450 ಎಕರೆ ಭೂ ವ್ಯಾಜ್ಯ: ಮೈಸೂರು ರಾಜವಂಶಸ್ಥರಿಗೆ ಸುಪ್ರೀಂ ಕೋರ್ಟ್ನಲ್ಲಿ ಗೆಲುವು
ಈ ಹಿನ್ನೆಲೆಯಲ್ಲಿ ಮಹಿಳಾ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಟಾಂಗ್ ಕೊಟ್ಟಿರುವ ಸಂಸದ ಪ್ರತಾಪ್ ಸಿಂಹ, "ಸಿಂಧೂರಿಯ ಮೇಲ್ಮನವಿಯನ್ನೇ ಅಸಿಂಧುಗೊಳಿಸೋದಂದ್ರೆ... ಛೇ..!, ಇದು ಫೇಸ್ಬುಕ್ ಪಂಡಿತರಿಗಾದ ಮುಖಭಂಗ ಅಲ್ವೇ..! ನ್ಯಾಯವಂತರಿಗಿದು ಕಾಲ ಅಲ್ಲ ಸ್ವಾಮಿ" ಎಂದು ಕಾಲೆಳೆದಿದ್ದಾರೆ.
ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ, ರೋಹಿಣಿ ಸಿಂಧೂರಿ ಹಾಗೂ ಅವರ ಬೆಂಬಲಿಗರಿಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.