ಪ್ರಕಾಶ್ ರೈಗೆ ಕಾವೇರಿಗಿಂತ ಕಾಸು ಮುಖ್ಯ ಎಂದ ಸಂಸದ ಪ್ರತಾಪ್ ಸಿಂಹ
Recommended Video

ಮೈಸೂರು, ಜೂನ್ 4 : ರಾಜ್ಯದಲ್ಲಿ ವಿವಾದ ಎಬ್ಬಿಸಿರುವ ತಮಿಳು ನಟ ರಜನೀಕಾಂತ್ ಅಭಿನಯದ 'ಕಾಳ' ಚಲನಚಿತ್ರ ಬಿಡುಗಡೆ ವಿಚಾರದಲ್ಲಿ ನಟ ಪ್ರಕಾಶ್ ರೈ ಮಾಡಿದ ಟ್ವೀಟ್ ಗೆ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕಾಶ್ ರೈಗೆ ಕಾವೇರಿಗಿಂತ ಕಾಸು ಮುಖ್ಯ. ನಮಗೆಲ್ಲ ಕಾಸಿಗಿಂತ ಕಾವೇರಿ ಮುಖ್ಯ. ರಜನೀಕಾಂತ್ ಅವರನ್ನು ನಾವೆಲ್ಲರೂ ಇಷ್ಟಪಟ್ಟಿದ್ದೇವೆ. ಆದರೆ ಈ ಹಿಂದೆ ಕಾವೇರಿ ವಿಚಾರವಾಗಿ ಕೊಟ್ಟಂತಹ ಹೇಳಿಕೆ ಬಹಳ ನೋವನ್ನು ಕೊಟ್ಟಿದೆ. ಹೀಗಾಗಿ ಕನ್ನಡ ಪರ ಸಂಘಟನೆಗಳು ಸಹಜವಾಗಿ ಅವರ ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿವೆ ಎಂದರು.
ರಜನೀಕಾಂತ್ ಅವರಿಗೆ ಪ್ರಕಾಶ್ ರೈ ಸಲಹೆ ಕೊಡುವುದರ ಬದಲು ಕಾವೇರಿಗೂ 'ಕಾಳ' ಚಿತ್ರಕ್ಕೂ ಸಂಬಂಧವಿಲ್ಲ ಎಂದಿದ್ದಾರೆ. ಪ್ರಕಾಶ್ ರೈ ಕರ್ನಾಟಕದ ಪಾಲಿಗೆ ಓರ್ವ ಖಳನಾಯಕ ಎಂದಿದ್ದಾರೆ.

ಪ್ರಕಾಶ್ ರೈ ಈ ಹಿಂದೆ ವಾಹಿನಿಯೊಂದರಲ್ಲಿ ನಡೆದ ತಮ್ಮ ಸಿನಿಮಾ ಕಾರ್ಯಕ್ರಮದಲ್ಲಿ ಕಾವೇರಿ ವಿಚಾರ ಚರ್ಚೆ ಮಾಡೊಲ್ಲ ಎಂದಿದ್ದರು. ಈಗ ಸಿನಿಮಾಗೂ ಕಾವೇರಿಗೂ ಏನು ಸಂಬಂಧ ಎನ್ನುತ್ತಿದ್ದಾರೆ. ಆ ಮೂಲಕ ಕರ್ನಾಟಕ ಹಾಗೂ ಕಾವೇರಿಯನ್ನು ಪದೇ ಪದೇ ಕೆಣಕುತ್ತಿದ್ದಾರೆ ಎಂದು ಹೇಳಿದರು.
ಪ್ರಕಾಶ್ ರೈಗೆ ಕಾಸೇ ಮುಖ್ಯವಾಗಿದೆ. ಅದಕ್ಕಾಗಿ ರಜನೀಕಾಂತ್ ಚಿತ್ರದ ಪರ ಟ್ವೀಟ್ ಮಾಡಿದ್ದಾರೆ. ಕಾವೇರಿ ವಿಚಾರದಲ್ಲಿ ರಜನೀಕಾಂತ್ ಅಷ್ಟೇ ಅಲ್ಲ, ಯಾರೇ ಲಘುವಾಗಿ ಮಾತನಾಡಿದರೂ ಖಂಡಿಸುತ್ತೇವೆ ಎಂದರು.
ಕರ್ನಾಟಕದ ಪಾಲಿಗೆ ಜೀವನಾಡಿ ಕಾವೇರಿ. ಕರ್ನಾಟಕಕ್ಕೆ ಅನ್ನ ಹಾಗೂ ನೀರನ್ನು ಕೊಡುತ್ತಿರುವುದು ಕಾವೇರಿ. ಅಂಥ ಕಾವೇರಿ ವಿಚಾರವಾಗಿ ರಜನೀಕಾಂತ್ ಅಲ್ಲ, ಬೇರೆ ಯಾರೇ ಹೇಳಿಕೆ ಕೊಟ್ಟರೂ ನಾವು ಸಹಿಸಲ್ಲ. ಕಾವೇರಿಯನ್ನು ಕರ್ನಾಟಕದಿಂದ ಕಿತ್ತುಕೊಳ್ಳಲು ಪ್ರಯತ್ನಿಸಿದರೆ ತೀವ್ರವಾಗಿ ಖಂಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications