ಸಿದ್ದರಾಮಯ್ಯ ಮೊದಲು ಸ್ತಬ್ಧಚಿತ್ರಗಳ ಮಾರ್ಗಸೂಚಿ ಓದಿಕೊಳ್ಳಲಿ; ಪ್ರತಾಪ್ ಸಿಂಹ
ಮೈಸೂರು, ಜನವರಿ 19: ಗಣರಾಜ್ಯೋತ್ಸವ ಪರೇಡ್ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿ ಶುರುವಾಗಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ, ಕಾಮಾಲೆ ಕಣ್ಣಿಗೆ ಕಾಣುವುದೆಲ್ಲ ಹಳದಿ ಎಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಈ ಹಿಂದೆ ರಾಜ್ಯದಲ್ಲಿ ಕ್ಯಾಂಟೀನ್ಗೆ ಹೆಸರಿಡುವಾಗ ಈ ಮಹಾಪುರುಷರ ಹೆಸರು ನೆನಪಾಗಲಿಲ್ಲ. ಆಗ ನೆನಪಾಗಿದ್ದು ಇಂದಿರಾ ಗಾಂಧಿ ಮಾತ್ರ. ಅಧಿಕಾರ ಇದ್ದಾಗ ಸಿದ್ದರಾಮಯ್ಯನವರಿಗೆ ನಾರಾಯಣ ಗುರು, ಒನಕೆ ಓಬವ್ವ, ಮೈಸೂರು ಮಹಾರಾಜರು ನೆನಪಾಗಲಿಲ್ಲ. ಈಗ ನೆನಪಾಗುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತೆ ಮಹನೀಯರಿಗೆ ಗೌರವ ಕೊಡುವುದನ್ನು ನಮಗೆ ಹೇಳುತ್ತಿದ್ದಾರೆ. ಗಣರಾಜ್ಯೋತ್ಸವದಲ್ಲಿ ಒಂದು ವಿಷಯ ಕೊಟ್ಟಿದ್ದಾರೆ. ಆ ವಿಷಯಕ್ಕೆ ಅನುಗುಣವಾಗಿ ಯಾರು ಸ್ತಬ್ಧಚಿತ್ರ ಮಾಡಿರುತ್ತಾರೋ, ಗುಣಮಟ್ಟದ ಆಧಾರದ ಮೇಲೆ ಅದರ ಆಯ್ಕೆ ಆಗುತ್ತದೆ. ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರುತ್ತದೆ. ಇಲ್ಲಿ ಯಾರನ್ನೂ ಅವಮಾನ ಮಾಡುವ ಪ್ರಶ್ನೆಯೇ ಇಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮೊದಲು ಗಣರಾಜ್ಯೋತ್ಸವದ ಸ್ತಬ್ಧಚಿತ್ರಗಳ ಮಾರ್ಗಸೂಚಿ ಓದಿಕೊಳ್ಳಲಿ ಎಂದು ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟರು.

ಇದೇ ವೇಳೆ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿ ಮಾಡಿರುವ ವಾರಾಂತ್ಯ ಕರ್ಫ್ಯೂಗೆ ಹಲವು ಬಿಜೆಪಿ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ವೀಕೆಂಡ್ ಕರ್ಫ್ಯೂ ವಿಧಿಸುವುದಾದರೇ ಲಸಿಕೆ ಏಕೆ ಬೇಕಿತ್ತು? ಎಂದು ಪ್ರಶ್ನಿಸಿರುವ ಸಂಸದ ಪ್ರತಾಪ್ ಸಿಂಹ, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲಿ ಪ್ರಚಾರ ಸಭೆಗಳನ್ನು ನಡೆಸಲಾಗುತ್ತಿದೆ. ಹೀಗಿರುವಾಗ ರಾಜ್ಯದಲ್ಲಿ ಕರ್ಫ್ಯೂ ಯಾಕೆ? ಎಂದು ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಕಿಡಿಕಾರಿದರು.
ರಾಜ್ಯದಲ್ಲಿ ಜನರಿಗೆ ಭಯ ಬೀಳಿಸುವುದನ್ನು ಬಿಟ್ಟು ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ತೆಗೆಯಿರಿ ಎಂದು ಆಗ್ರಹಿಸಿದ ಪ್ರತಾಪ್ ಸಿಂಹ, ಕರ್ಫ್ಯೂನಿಂದಾಗಿ ರಾಜ್ಯದ ಜನರಿಗೆ ತೊಂದರೆಯಾಗುತ್ತಿದೆ. ಜೀವ ಉಳಿಸಿಕೊಳ್ಳಲು ವ್ಯಾಕ್ಸಿನ್ ನೀಡಲಾಗಿದೆ. ಜನರ ಜೀವನ ಉಳಿಸಬೇಕಾದರೇ ಕರ್ಫ್ಯೂ ತೆಗೆಯಿರಿ. ಜನರ ಜೀವ, ಜೀವನ ಎರಡೂ ಮುಖ್ಯ. ಸಾರ್ವಜನಿಕರ ಅಭಿಪ್ರಾಯಕ್ಕೆ ನನ್ನ ಬೆಂಬಲವಿದೆ. ಜನರಿಗೆ ಆಗುತ್ತಿರುವ ಕಷ್ಟಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ತಡೆಯಬೇಕು ಎಂದು ಹೇಳಿದರು.

ಕೋವಿಡ್ ಲಾಕ್ಡೌನ್, ಕರ್ಫ್ಯೂನಿಂದಾಗಿ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಜನರು ತುಂಬಾ ನೊಂದಿದ್ದಾರೆ. ಹೆಚ್ಚಿನ ಜನ ಲಸಿಕೆ ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ಲಾಕ್ಡೌನ್, ಕರ್ಫ್ಯೂ ಬೇಡ. ಸಿಎಂ ಬಸವರಾಜ ಬೊಮ್ಮಾಯಿ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ವೀಕೆಂಡ್ ಕರ್ಫ್ಯೂ ತೆರವುಗೊಳಿಸಿ ಎಂದು ಪರೋಕ್ಷವಾಗಿ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದರು.
-
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications