ಸೋನಿಯಾ, ಪ್ರಿಯಾಂಕಾ, ವಾದ್ರಾಗೆ ರಾಯರೆಡ್ಡಿ ಬೋಧಿಸಲಿ: ಪ್ರತಾಪ್ ಸಿಂಹ
ವಿಐಪಿ ಗಳ ಕಾರುಗಳ ಮೇಲೆ ಕೆಂಪು ದೀಪಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದನ್ನು ಟೀಕಿಸಿದ್ದ ರಾಯರೆಡ್ಡಿ ವಿರುದ್ಧ ಶನಿವಾರ ಇಲ್ಲಿನ ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ.
ಮೈಸೂರು, ಏಪ್ರಿಲ್ 22 : ಭದ್ರತೆ ವಿಚಾರದಲ್ಲಿ ಮೋದಿಯವರನ್ನು ಟೀಕಿಸಿರುವ ಸಚಿವ ಬಸವರಾಜ ರಾಯರೆಡ್ಡಿ, ಮೊದಲು ತಮ್ಮ ಪಕ್ಷದ ನಾಯಕರಾದ ಸೋನಿಯಾ, ಪ್ರಿಯಾಂಕಾ ಹಾಗೂ ವಾದ್ರಾ ಅವರಿಗೆ ಭದ್ರತೆ ಬಗ್ಗೆ ಬೋಧನೆ ಮಾಡಲಿ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ.
ಇತ್ತೀಚೆಗೆ, ವಿಐಪಿ ಗಳ ಕಾರುಗಳ ಮೇಲೆ ಕೆಂಪು ದೀಪಗಳನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದನ್ನು ಟೀಕಿಸಿದ್ದ ರಾಯರೆಡ್ಡಿ ವಿರುದ್ಧ ಶನಿವಾರ ಇಲ್ಲಿನ ಗಾಂಧಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪ್ರತಾಪ್ ಸಿಂಹ, ರೆಡ್ಡಿಯವರ ಹೇಳಿಕೆಯನ್ನು ಖಂಡಿಸಿದರು.
ಕೇಂದ್ರದ ಆದೇಶವನ್ನು ಶುಕ್ರವಾರ (ಏ. 21) ಟೀಕಿಸಿದ್ದ ರಾಯರೆಡ್ಡಿ, ಪ್ರಧಾನಿಯವರು ತಮಗೆ ಮಾತ್ರ ಭದ್ರತೆ ಉಳಿಸಿಕೊಂಡು ಉಳಿದ ಗಣ್ಯರ ಭದ್ರತೆಗೆ ಚ್ಯುತಿ ತಂದಿದ್ದಾರೆ ಎಂದು ಟೀಕಿಸಿದ್ದರು.

ಇದಕ್ಕೆ ತೀಕ್ಷ್ಣವಾಗಿ ಉತ್ತರಿಸಿರುವ ಪ್ರತಾಪ್ ಸಿಂಹ, ''ದೇಶದ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಬಸವರಾಯ ರೆಡ್ಡಿಗೆ ಸಾಮಾನ್ಯ ಜ್ಞಾನವೂ ಇಲ್ಲದಂತಾಗಿದೆ. ಮೋದಿಯವರಿಗೆ ದೇಶದ ಪ್ರಧಾನಿ ಎಂಬ ಕಾರಣಕ್ಕೆ ಶಿಷ್ಟಾಚಾರದಂತೆ ಭದ್ರತೆ ನೀಡಲಾಗಿದೆ ಎಂಬುವುದನ್ನು ತಿಳಿದುಕೊಳ್ಳಬೇಕಿದೆ'' ಎಂದು ಕುಟುಕಿದರು.
''ಅಲ್ಲದೆ, ಒಂದು ಕಲ್ಲಿನ ಏಟಿಗೆ ಕಾಂಗ್ರೆಸ್ಸಿಗರು ಹೆದರುತ್ತಾರೆ. ಆದರೆ ಪ್ರಧಾನಿ ಬಂದೂಕಿನ ಗುಂಡೇಟಿಗೆ ಬಗ್ಗುವುದಿಲ್ಲ'' ಎಂದು ಅವರು ಹೇಳಿದರು.

ಇದೇ ವೇಳೆ, ಮಾತನಾಡಿದ ಪ್ರತಿಭಟನಾಕಾರರು, 'ಜೀವ ಬೆದರಿಕೆ ಇದ್ದರೆ ಸಾಯಲಿ ಬಿಡಿ, ಅಧಿಕಾರ ಬೇಕಾದ್ರೆ ಸಾಯಬೇಕಪ್ಪ. ಯಾರೇನು ಮಾಡಬೇಕು ಅದಕ್ಕೆ? ಅಧಿಕಾರ ಬೇಡ ಅಂದರೆ ಮನೆಯಲ್ಲಿ ಕೂರಲಿ' ಎಂದು ರಾಯರೆಡ್ಡಿ ಉಢಾಪೆಯ ಉತ್ತರ ನೀಡಿದ್ದಾರೆ. ಉನ್ನತ ಶಿಕ್ಷಣ ಸಚಿವರು ತಾವೂ ಸಹ ಸರ್ಕಾರದ ಒಂದು ಉನ್ನತ ಖಾತೆಯಲ್ಲಿದ್ದು, ಪ್ರಧಾನ ಮಂತ್ರಿ ಅವರ ಬಗ್ಗೆ ಈ ರೀತಿಯ ಉತ್ತರ ನೀಡಿರುವುದು ಸರಿಯಲ್ಲ. ಅವರು ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications