ಅನರ್ಹ ಶಾಸಕರಿಗೆ ಸಿಗಲಿದೆ ಸಚಿವ ಸ್ಥಾನ: ಸುಳಿವು ನೀಡಿದ ಶ್ರೀನಿವಾಸ್ ಪ್ರಸಾದ್
ಮೈಸೂರು, ಆಗಸ್ಟ್ 23: "ಸ್ವಇಚ್ಚೆಯಿಂದ ಬಂದಿರುವ 17 ಶಾಸಕರೂ ಈಗ ಮೂಲ ಬಿಜೆಪಿಗರೇ. ಮುಂದಿನ ಚುನಾವಣೆಯನ್ನು ಅವರು ಬಿಜೆಪಿ ಚಿಹ್ನೆಯಿಂದಲೇ ಎದುರಿಸಬೇಕು. ಅನರ್ಹರಾಗಿರುವ 17 ಜನರಿಗೂ ಮಂತ್ರಿ ಸ್ಥಾನ ಸಿಗಲಿದೆ" ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಅನರ್ಹ ಶಾಸಕರಿಗೆ ಸುಪ್ರೀಂ ತೀರ್ಪಿನ ಬಳಿಕ 10 ದಿನದಲ್ಲಿ ಮಂತ್ರಿ ಸ್ಥಾನ ನೀಡಲಾಗುವುದು. ಈ ವಿಚಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸದ್ಯ ಅರ್ಧ ಕ್ಯಾಬಿನೆಟ್ ರಚನೆಯಾಗಿದೆ. ಮುಂದಿನ ಹಂತದಲ್ಲಿ ಇನ್ನುಳಿದ ಸಚಿವ ಸ್ಥಾನಗಳಿಗೆ ನೇಮಕ ನಡೆಯಲಿದೆ. ಆ ಸಂದರ್ಭದಲ್ಲಿ ಅನರ್ಹ ಶಾಸಕರನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು" ಎಂದರು.

Recommended Video
"ಮುಂದಿನ ಹಂತದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಮೈಸೂರು ಭಾಗಕ್ಕೂ ಸಚಿವ ಸ್ಥಾನ ದೊರೆಯಲಿದೆ. ಮೂಲ ಅಥವಾ ವಲಸಿಗರ ಪೈಕಿ ಯಾರಿಗೆ ಎಂಬುದು ಮುಂದಿನ ಹಂತದಲ್ಲಿ ಗೊತ್ತಾಗಲಿದೆ. ಆ ಸಂದರ್ಭದಲ್ಲಿ ಎಲ್ಲವನ್ನೂ ಗಣನೆಗೆ ತೆಗೆದುಕೊಳ್ಳಲಾಗುವುದು. ಸಂಪುಟ ರಚನೆ ಸಂದರ್ಭದಲ್ಲಿ ಭಿನ್ನಮತ ಸಹಜ. ಯಡಿಯೂರಪ್ಪ ಅವರು ಸಂದಿಗ್ಧ ಪರಿಸ್ಥಿತಿಯಲ್ಲಿದ್ದಾರೆ. ಕಾನೂನು ಪ್ರಕಾರ ಸಂಪುಟ ರಚನೆಯಲ್ಲಿ ಮುಖ್ಯಮಂತ್ರಿಗಳಿಗೆ ಪರಮಾಧಿಕಾರ ಇದೆ. ಆದರೆ ಯಡಿಯೂರಪ್ಪ ಈಗಿನ ಪರಿಸ್ಥಿತಿಯಲ್ಲಿ ಹೈಕಮಾಂಡ್ ನೊಂದಿಗೆ ಚರ್ಚಿಸಿಯೇ ತೀರ್ಮಾನ ತೆಗೆದುಕೊಳ್ಳಬೇಕಿದೆ" ಎಂದರು.
ಚಿದಂಬರಂ ಬಂಧನ ವಿಚಾರ ಕುರಿತು ಪ್ರತಿಕ್ರಿಯಿಸಿ, "ಚಿದಂಬರಂ ಬಂಧನ ರಾಜಕೀಯ ದ್ವೇಷದಿಂದ ಕೂಡಿದ್ದಲ್ಲ. ಅಂದು ಸಿಬಿಐ ಕಟ್ಟಡ ಉದ್ಘಾಟಿಸಿದ್ದ ಚಿದಂಬರಂ, ಇಂದು ಅದೇ ಕಟ್ಟಡದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಬದುಕಿನಲ್ಲಿ ಇಂತಹ ಸನ್ನಿವೇಶ ಸೃಷ್ಟಿಯಾಗುತ್ತವೆ" ಎಂದಷ್ಟೇ ಹೇಳಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications