ಸಿದ್ದರಾಮಯ್ಯ ವಿರುದ್ಧ ಸಂಸದ ಶ್ರೀನಿವಾಸ್ ಪ್ರಸಾದ್ ಮತ್ತೆ ವಾಗ್ದಾಳಿ
ಮೈಸೂರು, ಡಿಸೆಂಬರ್ 22: ಮಾಜಿ ಸಿಎಂ ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ ಆಗಿದ್ದು, ಆತನಿಗೆ ನಾಗರಿಕತೆ, ಸಂಸ್ಕೃತಿ ಇಲ್ಲ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ವಿಪಕ್ಷ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಮಾತಾಡಿಸುವುದನ್ನೆ ರೂಢಿ ಮಾಡಿಕೊಂಡಿದ್ದಾನೆ. ಇದಕ್ಕೆ ಹಳ್ಳಿಯಿಂದ ಬಂದಿದ್ದೇನೆ ಎಂಬ ಸಮಜಾಯಿಷಿ ನೀಡುತ್ತಾನೆ ಎಂದು ಕಿಡಿಕಾರಿದರು.
""ನಿಮ್ಮಂತೆ ಹಳ್ಳಿಯಿಂದ ಸಾಕಷ್ಟು ಜನರು ಬಂದಿದ್ದಾರೆ. ಆದರೆ ಯಾರೂ ಕೂಡ ನಿಮ್ಮಂತೆ ಅನಾಗರಿಕತೆಯಿಂದ ಮಾತನಾಡುವುದಿಲ್ಲ'' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮವರೇ ನನ್ನ ಬೆನ್ನಿಗೆ ಚೂರಿ ಹಾಕಿದರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಶ್ರೀನಿವಾಸ ಪ್ರಸಾದ್, ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ದರೆ ನಿಮ್ಮ ವಿರುದ್ಧ ಹೈಕಮಾಂಡ್ಗೆ ಯಾಕೆ ದೂರು ಕೊಡ್ತಿದ್ರು? ಮುಖ್ಯಮಂತ್ರಿ ಸ್ಥಾನದಿಂದ ಇಳಿದ ಮೇಲೆ ನಿಮ್ಮ ನಾಯಕತ್ವದಲ್ಲಿ ಯಾವ ಚುನಾವಣೆ ಗೆದ್ದಿದ್ದೀರಾ? ಎಂದು ಪ್ರಶ್ನಿಸಿದರು.
ನೀವು ಇದ್ದರೆ ಕಾಂಗ್ರೆಸ್ ಪಕ್ಷ ನಾಶವಾಗಲಿದೆ ಎಂದು ನಿಮ್ಮ ಪಕ್ಷದವರೇ ನಿಮ್ಮ ವಿರುದ್ಧ ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ. ಇದರಲ್ಲೇ ನಿಮ್ಮ ನಾಯಕತ್ವದ ಮಟ್ಟ ತಿಳಿಯಲಿದೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ಮಾಜಿ ಸಿಎಂ ವಿರುದ್ಧ ಟೀಕಿಸಿದರು.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications