ಜೆಡಿಎಸ್ ವಿಲೀನ ವಿಚಾರ; "ದೇವೇಗೌಡರು ಈ ತೀರ್ಮಾನ ಮಾಡಿದಂತಿದೆ''
ಮೈಸೂರು, ಡಿಸೆಂಬರ್ 21: ಸದ್ಯದ ಸ್ಥಿತಿಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಕಷ್ಟ ಸಾಧ್ಯ. ವಿಲೀನ ಸ್ವರೂಪದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಮೈಸೂರಿನಲ್ಲಿ ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಜೆಡಿಎಸ್ಗೆ ಸದ್ಯ ಹತಾಶ ಸ್ಥಿತಿ ಇದ್ದು, ಬಿಜೆಪಿ ಜೊತೆ ಬರುವುದು ಜೆಡಿಎಸ್ಗೆ ಅನಿವಾರ್ಯವಾಗಿದೆ ಎಂದರು.
ಜೆಡಿಎಸ್ ಪಕ್ಷ ತನ್ನ ನೆಲೆಗಳಲ್ಲೇ ಸೋಲು ಕಾಣುತ್ತಿದ್ದು, ತುಮಕೂರಿನಲ್ಲಿ ಸ್ವತಃ ಎಚ್.ಡಿ ದೇವೇಗೌಡರು ಸೋತರು. ರಾಜಕೀಯ ಭವಿಷ್ಯಕ್ಕಾಗಿ ಅವರು ಬಿಜೆಪಿ ಜೊತೆ ಹೊಂದಾಣಿಕೆ ಅನಿವಾರ್ಯವಾಗಿದ್ದು, ಬಿಜೆಪಿ ಜೊತೆ ಜೆಡಿಎಸ್ ವಿಲೀನ ವಿಚಾರವನ್ನು ದೇವೇಗೌಡರು ತೀರ್ಮಾನ ಮಾಡಿದಂತಿದೆ ಎಂದು ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.
ಕಾಂಗ್ರೆಸ್ ಮೈತ್ರಿಯಿಂದ ಅವರು ಹೊರ ಬಂದಿದ್ದು, ದೇವೇಗೌಡರಿಗೆ ನಾನು ವೈಯುಕ್ತಿಕವಾಗಿ ಸಲಹೆ ಕೊಡಲ್ಲ. ಯಾಕೆಂದರೆ ದೇವೇಗೌಡರು ಯಾವಾಗ, ಏನು ತೀರ್ಮಾನ ಮಾಡುತ್ತಾರೋ ಯಾರಿಗೂ ಗೊತ್ತಾಗುವುದಿಲ್ಲವೆಂದರು.

ಬೆಂಕಿಯಲ್ಲಿ ಕೈ ಕಾಯಿಸಿಕೊಳ್ಳುವುದು ದೇವೇಗೌಡರ ಸ್ವಭಾವ
ಬಿದ್ದ ಬೆಂಕಿಯಲ್ಲಿ ಕೈ ಕಾಯಿಸಿಕೊಳ್ಳುವುದು ದೇವೇಗೌಡರ ಸ್ವಭಾವ. ಹೊಂದಾಣಿಕೆ ವಿಚಾರದಲ್ಲಿ ಹೈಕಮಾಂಡ್ದೆ ಅಂತಿಮ. ಕೇವಲ ಎರಡು ಮೂರು ಜಿಲ್ಲೆಗೆ ಸೀಮಿತವಾಗಿರುವ ಜೆಡಿಎಸ್ಗೆ ಸಿಎಂ ಸ್ಥಾನ ಬಿಟ್ಟುಕೊಡೋಕೆ ಆಗುತ್ತಾ? ಎಂದು ಪ್ರಶ್ನಿಸಿ, ಜೆಡಿಎಸ್ ಜೊತೆ ಮೈತ್ರಿಗೆ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಳ ಒಪ್ಪಂದದಿಂದ ನನ್ನನ್ನು ಸೋಲಿಸಿದರು ಎಂಬ ಸಿದ್ದರಾಮಯ್ಯ ಹೇಳಿಕೆ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಸಿದ್ದರಾಮಯ್ಯನವರೇ ನಿಮಗೆ ಈಗ ಸೋಲಿನ ಕಹಿ ಈಗ ಅರ್ಥ ಆಯ್ತಾ. ನಾನು ನಂಜನಗೂಡು ಉಪ ಚುನಾವಣೆಯಲ್ಲಿ ಸೋತ ಮರುದಿನವೇ ಹೇಳಿದ್ದೆ, ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲ್ತಾರೆ ಅಂತ ಎಂದು ಗುಡುಗಿದರು.

ಅಧಿಕಾರದಲ್ಲಿದ್ದಾಗ ದರ್ಪ, ದುರಹಂಕಾರ
ಬೆಕ್ಕು ಕಣ್ಮುಚ್ಚಿಕೊಂಡು ಹಾಲು ಕುಡಿದರೆ ಜಗತ್ತಿಗೆ ಕಾಣುವುದಿಲ್ಲ ಅನ್ಕೊಂಡಿದ್ದೀರಾ? ಸಿದ್ದರಾಮಯ್ಯ ಹತಾಶನಾಗಿ ಸತ್ತ ಕೋಳಿಯಂತಾಗಿದ್ದಾನೆ. ಸತ್ತಕೋಳಿ ಬೆಂಕಿಗೆ ಹೆದರುವಂತಾಗಿದೆ ಸಿದ್ದರಾಮಯ್ಯನ ಸದ್ಯದ ಸ್ಥಿತಿ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ, ಮಹದೇವಪ್ಪನ ದರ್ಪ, ದುರಹಂಕಾರ ಈ ಪರಿಸ್ಥಿತಿಗೆ ಕೊಂಡೊಯ್ದಿದೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ವಿರುದ್ಧ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಗರಂ
ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯನನ್ನು ವಿರೋಧಿಸುವವರಿದ್ದಾರೆ. ಈಗಾಗಲೇ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಃಪತನದ ಹಾದಿ ಹಿಡಿಯುವಂತಾಗಿದೆ ಎಂದು ಮೈಸೂರಿನಲ್ಲಿ ಶ್ರೀನಿವಾಸ್ ಪ್ರಸಾದ್ ವಾಗ್ದಾಳಿ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ ವಿವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿರುದ್ಧ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಫುಲ್ ಗರಂ ಆಗಿದ್ದರು. ಜಿಲ್ಲಾಧಿಕಾರಿ ಶರತ್ ಅವರನ್ನು ಒಂದೇ ತಿಂಗಳಲ್ಲಿ ಎತ್ತಂಗಡಿ ಮಾಡಿದ್ದು ತಪ್ಪು ನಿರ್ಧಾರ. ರೋಹಿಣಿ ಸಿಂಧೂರಿಗೆ ಜಾಗ ತೋರಿಸಬೇಕೆಂದಿದ್ದರೆ ಬೇರೆ ಕಡೆ ಅವಕಾಶ ಕೊಡಬೇಕಿತ್ತು ಎಂದು ಅಸಮಾಧಾನ ಹೊರಹಾಕಿದರು.

ನನಗೆ ಸುತಾರಾಂ ಇಷ್ಟ ಆಗಲಿಲ್ಲ
ರೋಹಿಣಿ ಸಿಂಧೂರಿ ದುರಹಂಕಾರಿ, ಜನಪ್ರತಿನಿಧಿಗಳಿಗೆ ಗೌರವ ಕೊಡಲ್ಲ ಅನ್ನುವ ಕಾರಣಕ್ಕಲ್ಲವೇ ನಾನ್ ಎಕ್ಸಿಕ್ಯೂಟಿವ್ ಪೋಸ್ಟ್ಗೆ ಹಾಕಿದ್ದು. ಈಗ ಅವಳನ್ನೇ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಿಸಿದ್ದು, ನನಗೆ ಸುತಾರಾಂ ಇಷ್ಟ ಆಗಲಿಲ್ಲ ಎಂದರು. ಕಲಬುರಗಿಯಲ್ಲಿ ಶರತ್ಗೆ ಒಳ್ಳೆಯ ಹೆಸರಿತ್ತು. ಅವರನ್ನು ಇಲ್ಲಿಗೆ ವರ್ಗಾವಣೆ ಮಾಡಿ 29 ದಿನದಲ್ಲಿ ಬೇರೆ ಕಡೆ ಹಾಕಿದ್ದು ಎಷ್ಟು ಸರಿ. ಇಂತಹ ವಿಚಾರದಲ್ಲಿ ಸಿಎಂ ವಿವೇಚನೆಯಿಂದ ವರ್ತಿಸಬೇಕು ಎಂದು ಮೈಸೂರಿನಲ್ಲಿ ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications