ಬಿಎಸ್ವೈ ಮನವಿಯನ್ನೂ ತಿರಸ್ಕರಿಸಿದ ಶ್ರೀನಿವಾಸ್ ಪ್ರಸಾದ್; ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಗೈರು
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಹ್ವಾನ ನೀಡಿದರೂ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಬಿಜೆಪಿ ಸಮಾವೇಶಕ್ಕೆ ತೆರಳಲಿಲ್ಲ.
ಮೈಸೂರು ನಗರದ ಜಯಲಕ್ಷ್ಮಿಪುರಂನಲ್ಲಿರುವ ವಿ.ಶ್ರೀನಿವಾಸಪ್ರಸಾದ್ ನಿವಾಸಕ್ಕೆ ಯಡಿಯೂರಪ್ಪ ತೆರಳಿ ಆರೋಗ್ಯ ವಿಚಾರಿಸಿ, ಸಮಾವೇಶಕ್ಕೆ ಆಹ್ವಾನಿಸಿದರು. ತಾವು ಹಿರಿಯ ನಾಯಕರಾಗಿದ್ದು, ಬಿಜೆಪಿ ಸಮಾವೇಶದಲ್ಲಿ ನರೇಂದ್ರ ಮೋದಿ ಜತೆ ವೇದಿಕೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಸಂಸದ ಶ್ರೀನಿವಾಸಪ್ರಸಾದ್ ಹಿರಿಯ ನಾಯಕರು. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದೇನೆ. ಬಿಜೆಪಿಯ ಸಂಸದರಾಗಿ ಐದು ನಿಮಿಷ ಬಂದು ಹೋಗಿ ಎಂದು ಮನವಿ ಮಾಡಿದ್ದು, ಅವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಚುನಾವಣೆಯಲ್ಲಿ ಶ್ರೀನಿವಾಸಪ್ರಸಾದ್ ಅವರನ್ನು ತೊಡಗಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾವು ಯಾವುದೇ ಒತ್ತಾಯ ಮಾಡುವುದಿಲ್ಲ. ಅದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು.
ಸಮಾವೇಶಕ್ಕೆ ಗೈರಾದ ಸಂಸದ
ನಂತರ ಮಾತನಾಡಿದ ಸಂಸದ ವಿ.ಶ್ರೀನಿವಾಸಪ್ರಸಾದ್, ಬಿಜೆಪಿ ಸಮಾವೇಶಕ್ಕೆ ಬರುವಂತೆ ಬಿ.ಎಸ್.ಯಡಿಯೂರಪ್ಪ ಆಹ್ವಾನ ಕೊಟ್ಟಿದ್ದಾರೆ. ಖಡಾಖಂಡಿತವಾಗಿ ಬರಲು ಆಗುವುದಿಲ್ಲ ಎಂದು ಹೇಳಲು ಆಗೋದಿಲ್ಲ. ಸೌಜನ್ಯದಿಂದ ಬಂದಾಗ ಪ್ರೀತಿಯಿಂದ ಮಾತನಾಡಿದ್ದೇನೆ. ಕಾರ್ಯಕ್ರಮಕ್ಕೆ ಹೋಗುವುದು ಬಿಡುವುದು ನಮ್ಮ ತೀರ್ಮಾನ ಎಂದರು.
ಬಿಜೆಪಿ ಸಮಾವೇಶಕ್ಕೆ ತಮಗೆ ಆಹ್ವಾನ ಬಂದಿಲ್ಲ ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಹೇಳಿಕೆ ನೀಡಿದ ಬೆನ್ನಲ್ಲೇ ಭಾನುವಾರ ಬೆಳಗ್ಗೆ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಶನಿವಾರ ಸಿಎಂ ಸಿದ್ದರಾಮಯ್ಯ ಅವರು ವಿ. ಶ್ರೀನಿವಾಸ್ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಇಬ್ಬರ ನಡುವೆ ವೈಮನಸ್ಸು ಇದ್ದರೂ ಇಬ್ಬರೂ ಮರೆತು ನಗು ನಗುತ್ತಲೇ ಮಾತನಾಡಿದ್ದು ಜಿಲ್ಲೆಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications