ವಿಶ್ವನಾಥ್ ಗೆ ವಿಧಾನ ಪರಿಷತ್ ಸ್ಥಾನ ನೀಡಲು ಶ್ರೀನಿವಾಸ ಪ್ರಸಾದ್ ಮನವಿ
ಮೈಸೂರು, ಮೇ 28: "ವಿಶ್ವನಾಥ್ ಅವರಿಗೆ ವಿಧಾನ ಪರಿಷತ್ತಿನಲ್ಲಿ ಸ್ಥಾನ ನೀಡಬೇಕು. ಬಿಜೆಪಿ ಸರ್ಕಾರ ಬರಲು ವಿಶ್ವನಾಥ್ ಅವರ ಪಾತ್ರ ಇದೆ. ಈ ವಿಚಾರ ಹೈಕಮಾಂಡ್ ಗಮನದಲ್ಲೂ ಇದೆ" ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಗೆ ವಿಧಾನ ಪರಿಷತ್ ಸದಸ್ಯತ್ವ ನೀಡಲು ಶ್ರೀನಿವಾಸ ಪ್ರಸಾದ್ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.
ಇಂದು ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೆ ವಿಶ್ವನಾಥ್, ಸಂಸದ ವಿ.ಶ್ರೀನಿವಾಸ ಪ್ರಸಾದ್ ಭೇಟಿ ನೀಡಿದ್ದು, ಮೈಸೂರಿನ ಜಯಲಕ್ಮೀಪುರಂ ನಿವಾಸದಲ್ಲಿ ಮೂವರು ನಾಯಕರು ರಹಸ್ಯ ಮಾತುಕತೆ ನಡೆಸಿರುವುದಾಗಿ ತಿಳಿದುಬಂದಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮುಖಾಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ, ವಿಶ್ವನಾಥ್ ಅವರಿಗೆ ವಿಧಾನ ಪರಿಷತ್ತಿನಲ್ಲಿ ಸ್ಥಾನ ನೀಡುವ ಕುರಿತು ಸಂದೇಶ ರವಾನಿಸಿರುವುದಾಗಿಯೂ ತಿಳಿದುಬಂದಿದೆ.

"ರಮೇಶ್ ಜಾರಕಿಹೊಳಿ ಅವರು ಇಂದು ನನ್ನ ಭೇಟಿಗೆ ಬಂದಿದ್ದರು. ವಿಶ್ವನಾಥ್ ಗೆ ಪರಿಷತ್ ಸದಸ್ಯತ್ವ ನೀಡುವುದು ಸುಲಭವಲ್ಲ. ನಾನು ಈ ವಿಚಾರವಾಗಿ ಸಿಎಂಗೆ ಮನವಿ ಮಾಡಿದ್ದೇನೆ. ಎಲ್ಲ ಶಾಸಕರು ಒಟ್ಟಾಗಿ ವಿಶ್ವನಾಥ್ ಪರ ಇದ್ದಾರೆ. ಸಮ್ಮಿಶ್ರ ಸರ್ಕಾರ ಬಿದ್ದು, ಬಿಜೆಪಿ ಸರ್ಕಾರ ಬರಲು ವಿಶ್ವನಾಥ್ ಅವರ ಪಾತ್ರ ಇದೆ. ರಮೇಶ್ ಜಾರಕಿಹೊಳಿ ಕೂಡ ನಮ್ಮ ಪರ ಇದ್ದಾರೆ. ಈ ಸಂಪುಟದಲ್ಲಿ ಇಂತಹ ರಾಜಕಾರಣಿಯ ಅವಶ್ಯಕತೆ ಇದೆ. ವಿಶ್ವನಾಥ್ ಗೆ ಪರಿಷತ್ ಸ್ಥಾನ ನೀಡುವ ಬೇಡಿಕೆ ನಮ್ಮದು" ಎಂದು ಹೇಳಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications