ಇಂಥ ಪರಿಸ್ಥಿತಿಯಲ್ಲಿ ಮೂರು ಡಿಸಿಎಂ ಬೇಕಿತ್ತಾ? ಸಂಸದ ಶ್ರೀನಿವಾಸ ಪ್ರಸಾದ್ ಪ್ರಶ್ನೆ
ಮೈಸೂರು, ಆಗಸ್ಟ್ 27: ಬಿಜೆಪಿ ಸರ್ಕಾರದ ಖಾತೆ ಹಂಚಿಕೆ ಹಾಗೂ ಮೂವರಿಗೆ ಡಿಸಿಎಂ ಪಟ್ಟ ನೀಡಿದ ವಿಚಾರವಾಗಿ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅಸಮಾಧಾನ ಹೊರಹಾಕಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಇಂತಹ ಪರಿಸ್ಥಿತಿಯಲ್ಲಿ ಮೂರು ಮೂರು ಜನ ಉಪ ಮುಖ್ಯಮಂತ್ರಿಗಳು ಬೇಕಾಗಿರಲಿಲ್ಲ. ಬಿಜೆಪಿ ಹೈಕಮಾಂಡ್ ಈ ತೀರ್ಮಾನ ಮಾಡಿದ್ದರೂ ನಾನು ವಿರೋಧ ಮಾಡುತ್ತೇನೆ" ಎಂದು ಸ್ವಪಕ್ಷದ ವಿರುದ್ಧವೇ ಹರಿಹಾಯ್ದಿದ್ದಾರೆ.

"ಬಿಜೆಪಿ ಹೈಕಮಾಂಡ್ ನಿರ್ಧಾರ ಸರಿಯಿಲ್ಲ. ಹೈಕಮಾಂಡ್ ಗೆ ಸರಿಯಾದ ಮಾಹಿತಿ ನೀಡಬೇಕಿತ್ತು. ಹೈಕಮಾಂಡ್ ನಿರ್ಧಾರಕ್ಕೆ ನನ್ನ ವೈಯಕ್ತಿಕ ವಿರೋಧವಿದೆ. ಡಿಸಿಎಂ ಸ್ಥಾನ, ಖಾತೆಗಾಗಿ ಜಗಳ ಬಿಡಿ. ಅತೃಪ್ತ ಶಾಸಕರ ಭವಿಷ್ಯದ ಬಗ್ಗೆ ಗಮನಕೊಡಿ. ಆ 17 ಜನ ಹೊರಬಂದಿದ್ದಕ್ಕೆ ತಾನೇ ನೀವು ಸರ್ಕಾರ ಮಾಡಿದ್ದು. ನಿಮಗೇನು 113 ಸ್ಥಾನ ಇತ್ತಾ? ಯಾಕ್ರೀ ಈ ಥರ ಕಚ್ಚಾಡ್ತೀರಾ...?" ಎಂದು ಪಕ್ಷದ ನಾಯಕರ ವಿರುದ್ಧವೇ ಹರಿಹಾಯ್ದರು.

"ಜನ ಬಿಜೆಪಿಗೆ ಬಹುಮತ ನೀಡಿರಲಿಲ್ಲ. ಅಂತಹದರಲ್ಲಿ ನೀವು ಸರ್ಕಾರ ರಚನೆ ಮಾಡಿದ್ದಿರಿ. ನಾಲ್ಕು ವರ್ಷಗಳ ಕಾಲ ಉತ್ತಮ ಆಡಳಿತ ಕೊಡಬೇಕಿತ್ತು. ಈ ರೀತಿ ಕಚ್ಚಾಟ ಮಾಡೋದು ಸರಿಯಲ್ಲ. ನಾನು ಏನಾದ್ರೂ ಹೇಳಲು ಹೋದ್ರೆ ಯಾರು ಕೇಳ್ತಾರೆ. ಎಲ್ಲರೂ ಸ್ವಾರ್ಥ ಬಿಟ್ಟು ಕೆಲಸ ಮಾಡಬೇಕು" ಎಂದು ಸಲಹೆ ನೀಡಿದರು.

"ಅನರ್ಹ ಶಾಸಕರನ್ನು ಬಿಜೆಪಿಯವರು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡುವುದಿಲ್ಲ. ಅವರ ಅನರ್ಹತೆ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಅದು ಇತ್ಯರ್ಥ ಆದ ಮೇಲೆ ಅವರಿಗೂ ಸಚಿವ ಸ್ಥಾನ ಸಿಗಲಿದೆ. ಹಾಗೇ ನೋಡುವುದಾದರೆ ಸಿದ್ದರಾಮಯ್ಯ ಸಹ ಅತೃಪ್ತ ಶಾಸಕರೇ" ಎಂದರು.
ಮೋಹನ್ ಭಾಗವತ್ ಹೇಳಿಕೆಗೆ ತಿರುಗೇಟು ನೀಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, "ಮೋಹನ್ ಭಾಗವತ್ ಅವರದ್ದು ವೈಯಕ್ತಿಕ ಹೇಳಿಕೆ. ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಹೋದರೆ ಧರ್ಮ ಸಂಪೂರ್ಣವಾಗುವುದಿಲ್ಲ ಎಂದು ಭಾಗವತ್ ಹೇಳುತ್ತಾರೆ. ಅವರು ಅವರ ಅಭಿಪ್ರಾಯ ಹೇಳುತ್ತಿದ್ದಾರೆ. ಆದ್ರೆ ಅವರ ಅಭಿಪ್ರಾಯಗಳು ನಮಗೆ ಇಷ್ಟ ಆಗಲ್ಲ" ಎಂದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications