ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೇಂದ್ರದಿಂದ ನೆರೆ ಪರಿಹಾರ ಗ್ಯಾರಂಟಿ ಎಂದ ಸುಮಲತಾ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 4: "ಕೇಂದ್ರದಿಂದ ಪರಿಹಾರ ಹಣ ಬಂದೇ ಬರುತ್ತದೆ" ಎಂದು ಮಂಡ್ಯ ಸಂಸದೆ ಸುಮಲತಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, " ನೆರೆ ಪರಿಹಾರ ಹಣ ಬಂದೇ ಬರುತ್ತದೆ. ಏನೋ ತಾಂತ್ರಿಕ ಕಾರಣದಿಂದ ವಿಳಂಬವಾಗುತ್ತಿದೆ. ಹೀಗಾಗಿ ಪರಿಹಾರ ಹಣ ಬರುವುದು ತಡವಾಗಿದೆ. ಆದರೆ ಪರಿಹಾರ ಹಣ ಬರುತ್ತೆ ಎಂಬ ವಿಶ್ವಾಸ ನನಗಿದೆ. ಜನರು ಪ್ರಶ್ನೆ ಮಾಡುತ್ತಿರುವುದು ಒಳ್ಳೆಯದು. ನಾವು ಯಾರ ಬಳಿ ಮಾತನಾಡಬೇಕೋ ಅವರ ಬಳಿ ಮಾತನಾಡುತ್ತಿದ್ದೇವೆ. ಅವರು ಏನೋ ತಾಂತ್ರಿಕ ಕಾರಣ ಉಂಟಾಗಿದೆ ಎಂದು ಕಾರಣವನ್ನು ನೀಡುತ್ತಿದ್ದಾರೆ" ಎಂದರು.

ಕೆ.ಆರ್.ಪೇಟೆ ಉಪಚುನಾವಣೆ: ಇಕ್ಕಟ್ಟಿಗೆ ಸಿಲುಕಿದ ಸುಮಲತಾಕೆ.ಆರ್.ಪೇಟೆ ಉಪಚುನಾವಣೆ: ಇಕ್ಕಟ್ಟಿಗೆ ಸಿಲುಕಿದ ಸುಮಲತಾ

"ಯಶ್ ಹಾಗೂ ದರ್ಶನ್ ಕ್ಷೇತ್ರಕ್ಕೆ ಬರಬೇಕು ಎಂಬುದು ತುಂಬಾ ಚಿಕ್ಕ ವಿಷಯ. ಏಕೆಂದರೆ ಎಂಪಿಯಾಗಿ ಆಯ್ಕೆಯಾಗಿರುವುದು ನಾನು. ಯಶ್ ಅಥವಾ ದರ್ಶನ್ ಅಲ್ಲ. ಚುನಾವಣಾ ಪ್ರಚಾರದ ವೇಳೆ ನಮಗೆ ಬೆಂಬಲ ನೀಡಲು ಬರುತ್ತಾರೆ. ಸರ್ಕಾರದಲ್ಲಿ ಅವರಿಗೆ ಯಾವುದೇ ಅಧಿಕಾರ ಇಲ್ಲ. ಅವರು ಬಂದು ಏನು ಮಾಡುತ್ತಾರೆ. ನನ್ನ ಕೆಲಸ ನಾನು ಮಾಡಬೇಕು. ಯಶ್ ಹಾಗೂ ದರ್ಶನ್ ಮಂಡ್ಯಕ್ಕೆ ಬರುತ್ತಾರೆ. ಮೊದಲಿನಿಂದಲೂ ಅವರು ಬರುತ್ತಿದ್ದಾರೆ" ಎಂದು ಹೇಳಿದ್ದಾರೆ.

MP Sumalatha Assure To Get Flood Relief Fund

ಮಂಡ್ಯದಲ್ಲಿ ಸುಮಲತಾ ಅವರನ್ನು ಕಣಕ್ಕಿಳಿಸಿದ್ದು ಯಾರು? ಅಂದಿನ ಸತ್ಯ ಈಗ ಬಹಿರಂಗ!

"ನಾನು ಎಂಪಿ ಆಗಿರುವುದು ಜೆಡಿಎಸ್ ನಾಯಕರಿಗೆ ಉತ್ತರ ಕೊಡುವುದಕ್ಕೆ ಅಲ್ಲ. ನನ್ನ ಉತ್ತರ ಏನಿದ್ದರೂ ನನಗೆ ಮತ ನೀಡಿದ ಮಂಡ್ಯ ಜನತೆಗೆ ಮಾತ್ರ. ನಾನು ರಾಜಕೀಯವಾಗಿ ಮಾತನಾಡುವವರಿಗೆ ಉತ್ತರ ನೀಡಲ್ಲ. ಸುಮಕ್ಕ ಎಲ್ಲಿದ್ದಾರೆ ಎಂದು ಪ್ರಶ್ನೆ ಕೇಳುತ್ತಾರೆ. ನಾನು ಎಲ್ಲಿಯೂ ಹೋಗಿಲ್ಲ. ನಾನು ಇಲ್ಲಿಯೇ ಇದ್ದೀನಿ ಹಾಗೂ ನನ್ನ ಕೆಲಸ ಮಾಡುತ್ತಿದ್ದೇನೆ. ಯಾರಿಗೆ ಒತ್ತಡ ಹೇರಬೇಕೋ, ಯಾರ ಬಳಿ ಮನವಿ ಮಾಡಬೇಕೋ ಎಲ್ಲವನ್ನು ನಾನು ಮಾಡುತ್ತಿದ್ದೇನೆ" ಎಂದು ಸುಮಲತಾ ತಿಳಿಸಿದ್ದಾರೆ.

English summary
"I am sure that we will get flood relief fund" said MP Sumalatha in mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X