ಎಂಎಸ್ಐಎಲ್ನಿಂದ ಕುಡಿಯುವ ನೀರು, ಔಷಧ ಮಳಿಗೆ
ಮೈಸೂರು, ಜ.9 : ಎಂಎಸ್ಐಎಲ್ ಶೀಘ್ರದಲ್ಲೇ ಔಷಧ ಮತ್ತು ಶುದ್ಧ ಕುಡಿಯುವ ನೀರಿನ ವ್ಯಾಪಾರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಎಂಎಸ್ಐಎಲ್ ಔಷಧ ಮಾರಾಟ ಮಳಿಗೆ ಸ್ಥಾಪನೆಯಾಗಲಿದೆ.
ರಾಜ್ಯ ಸರ್ಕಾರದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ಸಂಸ್ಥೆಯು ಅಧ್ಯಕ್ಷ ಎಂ.ಎಲ್.ಅನಿಲ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿಯೇ ಔಷಧ ಮಳಿಗೆ ಮತ್ತು ಖನಿಜಯುಕ್ತ ನೀರಿನ ಬಾಟಲಿಗಳ ಮಾರಾಟವನ್ನು ಆರಂಭಿಸಲಿದ್ದೇವೆ ಎಂದು ಹೇಳಿದ್ದಾರೆ.

ಸಾರ್ವಜಿನಿಕರಿಗೆ ಸುಲಭ ಬೆಲೆಯಲ್ಲಿ ಔಷಧ ಮಾರಾಟ ಮಾಡಲು ಎಂಎಸ್ಐಎಲ್ ಈ ಯೋಜನೆಯನ್ನು ರೂಪಿಸಿದೆ. ಬೆಂಗಳೂರು ಸೇರಿದಂತೆ ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲಿಯೂ ಸುಸಜ್ಜಿತ ಮಳಿಗೆಗಳ ಮೂಲಕ ಔಷಧ ಮಾರಾಟ ಆರಂಭಿಸಲಾಗುವುದು ಎಂದು ಅನಿಲ್ ಕುಮಾರ್ ತಿಳಿಸಿದರು. [ಮೈಸೂರು ರೇಷ್ಮೆ ಸೀರೆಗೆ ಮನಸೋತ ಏರ್ ಇಂಡಿಯಾ]
ನಮ್ಮ ಸಂಸ್ಥೆಯು ಕನಿಷ್ಠ ಲಾಭಾಂಶವನ್ನು ಪಡೆದು ಜನರಿಗೆ ಈ ಯೋಜನೆಗಳನ್ನು ಆರಂಭಿಸಲಾಗುತ್ತಿದೆ. ಶುದ್ಧವಾದ ಕುಡಿಯುವ ನೀರನ್ನು ಕಡಿಮೆ ಬೆಲೆಯಲ್ಲಿ ಜನರಿಗೆ ಪೂರೈಕೆ ಮಾಡುವ ಯೋಜನೆಯೂ ಇದೆ. ಖನಿಜಯುಕ್ತ ನೀರಿನ ಬಾಟಲಿಗಳ ಮಾರಾಟವನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. [ಮೈಸೂರು ವಿವಿಗೆ ಜ.27ಕ್ಕೆ ರಾಷ್ಟ್ರಪತಿ ಬರ್ತಾರೆ]
ಚಿಟ್ ಫಂಡ್ ಶಾಖೆಗಳು : ಎಂಎಸ್ಐಎಲ್ ಸಂಸ್ಥೆಯ 22 ಚಿಟ್ ಫಂಡ್ ಕೇಂದ್ರಗಳು ಸದ್ಯ ಕಾರ್ಯನಿರ್ವಹಿಸುತ್ತಿವೆ. ಅವುಗಳಲ್ಲಿ 15 ಕೇಂದ್ರಗಳು ಬೆಂಗಳೂರಿನಲ್ಲಿವೆ. ಜಿಲ್ಲಾ ಕೇಂದ್ರ, ಪ್ರಮುಖ ನಗರಗಳಲ್ಲಿಯೂ ಚಿಟ್ ಫಂಡ್ ಕೇಂದ್ರಗಳನ್ನು ಆರಂಭಿಸಲಾಗುತ್ತದೆ ಎಂದರು.
ಸದ್ಯ ಬಹಳಷ್ಟು ಖಾಸಗಿ ಸಂಸ್ಥೆಗಳು ಮತ್ತು ವ್ಯಕ್ತಿಗಳು ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದಾರೆ. ಆದರೆ, ಎಂಎಸ್ಐಎಲ್ ಸರ್ಕಾರಿ ಸಂಸ್ಥೆಯಾಗಿದ್ದು, ಅತ್ಯಂತ ವಿಶ್ವಾಸಾರ್ಹವಾಗಿದೆ ಎಂದು ಅನಿಲ್ ಕುಮಾರ್ ಹೇಳಿದರು. ರಾಜ್ಯದಲ್ಲಿ ಮೊದಲ ಹಂತದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ, ಎರಡನೇ ಹಂತದಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಚಿಟ್ ಫಂಡ್ ಶಾಖೆಗಳನ್ನು ಆರಂಭಿಸಲಾಗುವುದು ಎಂದರು.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ











Click it and Unblock the Notifications