ಎಂಎಸ್ಐಎಲ್ನಿಂದ ಕುಡಿಯುವ ನೀರು, ಔಷಧ ಮಳಿಗೆ
ಮೈಸೂರು, ಜ.9 : ಎಂಎಸ್ಐಎಲ್ ಶೀಘ್ರದಲ್ಲೇ ಔಷಧ ಮತ್ತು ಶುದ್ಧ ಕುಡಿಯುವ ನೀರಿನ ವ್ಯಾಪಾರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಎಂಎಸ್ಐಎಲ್ ಔಷಧ ಮಾರಾಟ ಮಳಿಗೆ ಸ್ಥಾಪನೆಯಾಗಲಿದೆ.
ರಾಜ್ಯ ಸರ್ಕಾರದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ಸಂಸ್ಥೆಯು ಅಧ್ಯಕ್ಷ ಎಂ.ಎಲ್.ಅನಿಲ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿಯೇ ಔಷಧ ಮಳಿಗೆ ಮತ್ತು ಖನಿಜಯುಕ್ತ ನೀರಿನ ಬಾಟಲಿಗಳ ಮಾರಾಟವನ್ನು ಆರಂಭಿಸಲಿದ್ದೇವೆ ಎಂದು ಹೇಳಿದ್ದಾರೆ.

ಸಾರ್ವಜಿನಿಕರಿಗೆ ಸುಲಭ ಬೆಲೆಯಲ್ಲಿ ಔಷಧ ಮಾರಾಟ ಮಾಡಲು ಎಂಎಸ್ಐಎಲ್ ಈ ಯೋಜನೆಯನ್ನು ರೂಪಿಸಿದೆ. ಬೆಂಗಳೂರು ಸೇರಿದಂತೆ ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲಿಯೂ ಸುಸಜ್ಜಿತ ಮಳಿಗೆಗಳ ಮೂಲಕ ಔಷಧ ಮಾರಾಟ ಆರಂಭಿಸಲಾಗುವುದು ಎಂದು ಅನಿಲ್ ಕುಮಾರ್ ತಿಳಿಸಿದರು. [ಮೈಸೂರು ರೇಷ್ಮೆ ಸೀರೆಗೆ ಮನಸೋತ ಏರ್ ಇಂಡಿಯಾ]
ನಮ್ಮ ಸಂಸ್ಥೆಯು ಕನಿಷ್ಠ ಲಾಭಾಂಶವನ್ನು ಪಡೆದು ಜನರಿಗೆ ಈ ಯೋಜನೆಗಳನ್ನು ಆರಂಭಿಸಲಾಗುತ್ತಿದೆ. ಶುದ್ಧವಾದ ಕುಡಿಯುವ ನೀರನ್ನು ಕಡಿಮೆ ಬೆಲೆಯಲ್ಲಿ ಜನರಿಗೆ ಪೂರೈಕೆ ಮಾಡುವ ಯೋಜನೆಯೂ ಇದೆ. ಖನಿಜಯುಕ್ತ ನೀರಿನ ಬಾಟಲಿಗಳ ಮಾರಾಟವನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. [ಮೈಸೂರು ವಿವಿಗೆ ಜ.27ಕ್ಕೆ ರಾಷ್ಟ್ರಪತಿ ಬರ್ತಾರೆ]
ಚಿಟ್ ಫಂಡ್ ಶಾಖೆಗಳು : ಎಂಎಸ್ಐಎಲ್ ಸಂಸ್ಥೆಯ 22 ಚಿಟ್ ಫಂಡ್ ಕೇಂದ್ರಗಳು ಸದ್ಯ ಕಾರ್ಯನಿರ್ವಹಿಸುತ್ತಿವೆ. ಅವುಗಳಲ್ಲಿ 15 ಕೇಂದ್ರಗಳು ಬೆಂಗಳೂರಿನಲ್ಲಿವೆ. ಜಿಲ್ಲಾ ಕೇಂದ್ರ, ಪ್ರಮುಖ ನಗರಗಳಲ್ಲಿಯೂ ಚಿಟ್ ಫಂಡ್ ಕೇಂದ್ರಗಳನ್ನು ಆರಂಭಿಸಲಾಗುತ್ತದೆ ಎಂದರು.
ಸದ್ಯ ಬಹಳಷ್ಟು ಖಾಸಗಿ ಸಂಸ್ಥೆಗಳು ಮತ್ತು ವ್ಯಕ್ತಿಗಳು ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದಾರೆ. ಆದರೆ, ಎಂಎಸ್ಐಎಲ್ ಸರ್ಕಾರಿ ಸಂಸ್ಥೆಯಾಗಿದ್ದು, ಅತ್ಯಂತ ವಿಶ್ವಾಸಾರ್ಹವಾಗಿದೆ ಎಂದು ಅನಿಲ್ ಕುಮಾರ್ ಹೇಳಿದರು. ರಾಜ್ಯದಲ್ಲಿ ಮೊದಲ ಹಂತದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ, ಎರಡನೇ ಹಂತದಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಚಿಟ್ ಫಂಡ್ ಶಾಖೆಗಳನ್ನು ಆರಂಭಿಸಲಾಗುವುದು ಎಂದರು.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications