ಮೈಸೂರಲ್ಲಿ ಜೆಸಿಬಿಗಳ ಘರ್ಜನೆ; ಅಕ್ರಮ ವಾಣಿಜ್ಯ ಕಟ್ಟಡ ಧ್ವಂಸ
ಮೈಸೂರು, ಡಿಸೆಂರ್ 16: ಮೈಸೂರು ನಗರದಲ್ಲಿ ಜೆಸಿಬಿಗಳು ಘರ್ಜನೆ ಮಾಡಿವೆ. ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಮೀಪದ ನಿರ್ಮಾಣಗೊಂಡಿದ್ದ ಅಕ್ರಮ ವಾಣಿಜ್ಯ ಕಟ್ಟಡಗಳನ್ನು ತೆರವುಗೊಳಿಲಾಯಿತು.
ಬುಧವಾರ ಬೆಳಗ್ಗೆಯಿಂದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಪೊಲೀಸರ ಭದ್ರತೆಯಲ್ಲಿ ಬೆಲವತ್ತ ಗ್ರಾಮದ ಸರ್ವೆ ನಂಬರ್ 295ರಲ್ಲಿ ಕಾನೂನು ಬಾಹಿರವಾಗಿ ನಿರ್ಮಾಣವಾಗುತ್ತಿರುವ ವಾಣಿಜ್ಯ ಮಳಿಗೆಗಳನ್ನು ತೆರವು ಮಾಡಲಾಯಿತು.
ಈ ಭೂಪ್ರದೇಶವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಒಳಪಟ್ಟಿದೆ. ಈ ಸ್ಥಳೀಯ ಯೋಜನಾ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮುನ್ನ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಕರ್ನಾಟಕ ನಗರ ಯೋಜನಾ ಕಾಯ್ದೆ 1961ರಡಿಯಲ್ಲಿ ಕೃಷಿ ಭೂಮಿಯಲ್ಲಿ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ (ಶೋಭಾ ಗಾರ್ಡನ್ ಬಡಾವಣೆಯ ಉತ್ತರ ದಿಕ್ಕಿನಲ್ಲಿ) ಮುಖ್ಯ ರಸ್ತೆಗೆ ಅಭಿಮುಖವಾಗಿ ಅನುಮೋದನೆ ಪಡೆಯದೇ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿದ್ದು ಕಾನೂನು ಬಾಹಿರವಾಗಿದೆ.
ಒಟ್ಟು 5 ಮಳಿಗೆಗಳನ್ನು ಮೈಸೂರು ನಗರ ಪಾಲಿಕೆ ವಾರ್ಡ್ 99ರ ಸದಸ್ಯ ಸಮೀಉಲ್ಲ ನಿರ್ಮಿಸುತಿದ್ದರು. ಈ ಸರ್ವೆ ನಂಬರ್ ಭೂಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ವಾಣಿಜ್ಯ ಸಂಕೀರ್ಣ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಎರಡು ಬಾರಿ ನೋಟೀಸ್ ನೀಡಲಾಗಿತ್ತು.

ಅನಧಿಕೃತವಾಗಿ ನಿರ್ಮಾಣವಾಗಿರುವ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಪೊಲೀಸ್ ಬಂದೋಬಸ್ತ್ನಲ್ಲಿ ತೆರವುಗೊಳಿಸಲಾಗಿದೆ ಎಂದು ಮುಡಾ ಆಯುಕ್ತ ಡಾ. ಡಿ. ಬಿ. ನಟೇಶ್ ಹೇಳಿದ್ದಾರೆ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications