ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದು ಸಂಜೆ 6 ರಿಂದ ಮೈಸೂರಿನಲ್ಲಿ ಸತತ 31 ಗಂಟೆಗಳ ಕಾಲ ಬಂದ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 4: ಸಾಂಸ್ಕೃತಿಕ ನಗರಿಯಲ್ಲಿ ಮುಂದುವರಿದ ಕೊರೊನಾ ವೈರಸ್ ಹಾವಳಿ ಮುಂದುವರೆದಿದೆ. ಮೈಸೂರಿನ ಕೇಂದ್ರ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬನಲ್ಲೂ ಸೋಂಕು ದೃಢಪಟ್ಟಿದ್ದು, ಕಾರಾಗೃಹದಲ್ಲಿ ಆತಂಕ ಶುರುವಾಗಿದೆ.

Recommended Video

ತುಂಬಿ ಹರಿದ ಕಾಗಿಣಾ ನದಿ, ನಡುಗಡ್ಡೆಯಲ್ಲಿ ಸಿಲುಕಿದ್ದ 8 ಜನರ ರಕ್ಷಣೆ | Oneindia Kannada

ವಿಜಯನಗರದಲ್ಲಿ ನಡೆದಿದ್ದ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು ಏಳು ಮಂದಿಯನ್ನು ಬಂಧಿಸಿದ್ದು, ಅದರಲ್ಲಿ ಒಬ್ಬ ಆರೋಪಿಗೆ ಸೋಂಕು ದೃಢಪಟ್ಟಿದೆ. ಸೋಂಕಿತ ಆರೋಪಿಯನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಜೈಲಿನಲ್ಲಿ ಆರೋಪಿಯಿದ್ದ ಸೆಲ್ ಅನ್ನು ಸೀಲ್ ‌ಡೌನ್ ಮಾಡಲಾಗಿದೆ. ಉಳಿದ ಆರೋಪಿಗಳನ್ನು ಕ್ವಾರಂಟೈನ್ ನಲ್ಲಿರಿಸಲಾಗಿದೆ. ಜಿಲ್ಲೆಯಲ್ಲಿ ಈ ನಡುವೆ ಮತ್ತಷ್ಟು ಕಡೆ ಪ್ರಕರಣಗಳು ಕಂಡುಬಂದಿವೆ.

ಮೈಸೂರಿನ ನಾಗರಿಕರಿಗೆ ಡಿಸಿಪಿ ಖಡಕ್ ಎಚ್ಚರಿಕೆ; ಸಂಜೆ 6ರ ನಂತರ ಓಡಾಡಿದರೆ ಜೋಕೆ!ಮೈಸೂರಿನ ನಾಗರಿಕರಿಗೆ ಡಿಸಿಪಿ ಖಡಕ್ ಎಚ್ಚರಿಕೆ; ಸಂಜೆ 6ರ ನಂತರ ಓಡಾಡಿದರೆ ಜೋಕೆ!

 ಕೆ.ಜಿ.ಕೊಪ್ಪಲಿನ ಮುಖ್ಯರಸ್ತೆ ಸೀಲ್ ಡೌನ್

ಕೆ.ಜಿ.ಕೊಪ್ಪಲಿನ ಮುಖ್ಯರಸ್ತೆ ಸೀಲ್ ಡೌನ್

ಹೈದರಾಬಾದ್ ನಿಂದ ವಾಪಸ್ಸಗಿದ್ದ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕಿನ ಶಂಕೆ ವ್ಯಕ್ತಗೊಂಡಿದ್ದು, ಕೆ.ಜಿ.ಕೊಪ್ಪಲಿನಲ್ಲಿ ಅಂಗಡಿ ಮುಂಗಟ್ಟು ಪೊಲೀಸರು ಬಂದ್ ಮಾಡಿಸಿದ್ದಾರೆ. ಮುಖ್ಯರಸ್ತೆಯ ಎರಡು ಬದಿಯನ್ನು ಬ್ಯಾರಿಕೇಡ್ ನಿಂದ ಬಂದ್ ಮಾಡಲಾಗಿದೆ. ಈ ಒಂದು ಪ್ರಕರಣದಿಂದ ಕೆ.ಜಿ.ಕೊಪ್ಪಲಿನ ಜನರಲ್ಲಿ ಆತಂಕ ಮಡುಗಟ್ಟಿದೆ.

 ಮೈಸೂರಿನಲ್ಲಿ ಸತತ 31 ಗಂಟೆಗಳ ಕಾಲ ಬಂದ್

ಮೈಸೂರಿನಲ್ಲಿ ಸತತ 31 ಗಂಟೆಗಳ ಕಾಲ ಬಂದ್

ಕೊರೊನಾ ವೈರಸ್ ನಿಯಂತ್ರಣ ಮಾಡಲು ಜಿಲ್ಲಾಡಳಿತ ಬಿಗಿ ಕ್ರಮಕ್ಕೆ ಮುಂದಾಗಿದ್ದು, ಇಂದು ಸಂಜೆ ಆರು ಗಂಟೆಯಿಂದಲೇ ಮೈಸೂರು ಬಂದ್ ಆಗಲಿದೆ. ನಾಳೆ ಔಷಧಿ, ಹಾಲು ಬಿಟ್ಟು ಉಳಿದವೂ ಬಂದ್ ಆಗಲಿದೆ. ಪಾರ್ಸಲ್ ನೀಡುವ ಹೋಟೆಲ್ ‌ಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಜನರು ಮನೆಯಿಂದ ಹೊರಗೆ ಬಾರದಂತೆ ಕ್ರಮವಹಸಿಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಜಿಲ್ಲೆ ಗಡಿಯಲ್ಲಿ ಚೆಕ್‌ಪೋಸ್ಟ್ ನಿರ್ಮಾಣ ಕಾರ್ಯವೂ ನಡೆದಿದೆ.

ಮೈಸೂರಿನಲ್ಲಿ ಮಿತಿ ಮೀರುತ್ತಿರುವ ಕೊರೊನಾ ಸೋಂಕು; ಸೋಂಕಿಗೆ ನಾಲ್ಕನೇ ಬಲಿ?ಮೈಸೂರಿನಲ್ಲಿ ಮಿತಿ ಮೀರುತ್ತಿರುವ ಕೊರೊನಾ ಸೋಂಕು; ಸೋಂಕಿಗೆ ನಾಲ್ಕನೇ ಬಲಿ?

 ಐಜಿಪಿ ನಿವಾಸದ ಅಡುಗೆ ಮನೆ ಪ್ರವೇಶಿಸಿದ ಸೋಂಕು

ಐಜಿಪಿ ನಿವಾಸದ ಅಡುಗೆ ಮನೆ ಪ್ರವೇಶಿಸಿದ ಸೋಂಕು

ಮೈಸೂರು ದಕ್ಷಿಣ ವಲಯದ ಐಜಿಪಿ ನಿವಾಸದ ಅಡುಗೆ ಮನೆಯನ್ನೂ ಕೊರೊನಾ ವೈರಸ್ ಪ್ರವೇಶಿಸಿದೆ. ಐಜಿಪಿ ನಿವಾಸದ ಅಡುಗೆ ಭಟ್ಟನಿಗೂ ಸೋಂಕು ತಗುಲಿದ್ದು, ಅಡುಗೆ ಭಟ್ಟನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಡೀ ನಿವಾಸವನ್ನು ಸೀಲ್ ಡೌನ್ ಮಾಡುವ ಕುರಿತು ಜಿಲ್ಲಾಡಳಿತ ಯೋಚಿಸುತ್ತಿದೆ.

ಜೊತೆಗೆ ಚೆಲುವಾಂಬ ಆಸ್ಪತ್ರೆಗೆ ಹೆರಿಗೆಗೆ ದಾಖಲಾಗಿದ್ದ ಮಹಿಳೆಗೂ ಕೊರೊನಾ ಸೋಂಕು ತಗುಲಿದೆ. ಚೆಲುವಾಂಬದಲ್ಲಿ ದಾಖಲಾಗಿದ್ದ ಗರ್ಭಿಣಿಯರನ್ನು ಆಸುಪಾಸಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಚೆಲುವಾಂಬ ಆಸ್ಪತ್ರೆಯ ಬಹುತೇಕ ವಾರ್ಡ್ ಗಳ ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ಮುಂದಾಗಿದೆ.
 ಎಚ್.ಡಿ.ಕೋಟೆಯಲ್ಲಿ ಶಾಸಕರಿಗೆ ಕ್ವಾರಂಟೈನ್

ಎಚ್.ಡಿ.ಕೋಟೆಯಲ್ಲಿ ಶಾಸಕರಿಗೆ ಕ್ವಾರಂಟೈನ್

ಎಚ್. ಡಿ. ಕೋಟೆ ಶಾಸಕರು ಸೇರಿದಂತೆ ತಾಲೂಕಿನ ಪ್ರಮುಖ ಅಧಿಕಾರಿಗಳಿಗೆ 7 ದಿನಗಳ ಕಾಲ ಹೋಂ ಕ್ವಾರಂಟೈನ್​ನಲ್ಲಿ ಇರುವಂತೆ ಜಿಲ್ಲಾ ಪೊಲೀಸ್​​​​​ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ. ಎಚ್.ಡಿ. ಕೋಟೆ ತಾಲೂಕು ಕಚೇರಿಯಲ್ಲಿ ನಡೆದ ಕೆಂಪೇಗೌಡ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಜೊತೆ ತಾಲೂಕು ತಹಶೀಲ್ದಾರ್, ಸರ್ಕಲ್ ಇನ್ಸ್‌ ಪೆಕ್ಟರ್ ಹಾಗೂ ಇತರ ತಾಲೂಕಿನ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸರ್ಕಲ್​ ಇನ್ಸಪೆಕ್ಟರ್​​ಗೆ ಕೊರೊನಾ ಸೋಂಕು ಬಂದ ಹಿನ್ನಲೆಯಲ್ಲಿ ಆ ಕಾರ್ಯಕ್ರಮದಲ್ಲಿದ್ದ ಶಾಸಕರು, ಅಧಿಕಾರಿಗಳು, 5 ಜನ ಪತ್ರಕರ್ತರು ಹಾಗೂ 20 ಪೊಲೀಸ್ ಸಿಬ್ಬಂದಿಗೆ ಹೋಂ ಕ್ವಾರಂಟೈನ್​​ನಲ್ಲಿ ಇರುವಂತೆ ಸೂಚಿಸಿದ್ದಾರೆ.

English summary
coronavirus positive cases are increasing in mysuru. Today prisoner at mysuru central prison tested positive
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X