Get Updates
Get notified of breaking news, exclusive insights, and must-see stories!

ಮೈಸೂರು ದಸರಾ ಉದ್ಘಾಟನೆ ಬಳಿಕ ಕನ್ನಡಿಗರ ಶ್ರೀಮಂತ ಭಾಷೆಯ ಮಹತ್ವ ಸಾರಿದ ನಾದಬ್ರಹ್ಮ ಹಂಸಲೇಖ

ಮೈಸೂರು, ಅಕ್ಟೋಬರ್‌, 15: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿಬೆಟ್ಟದ ಸನ್ನಿಧಿಯಲ್ಲಿ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ ಭಾನುವಾರ (ಅಕ್ಟೋಬರ್‌) ವಿಧ್ಯುಕ್ತ ಚಾಲನೆ ನೀಡಿದ್ದು, ಈ ವೇಳೆ ಅವರು ನಾಡಿದ ಭಾಷೆ, ಸಂಸ್ಕೃತಿ ಬಗ್ಗೆ ಸವಿವರವಾಗಿ ವಿವರಿಸಿದ್ದಾರೆ.

ನಂತರ ನಾದಬ್ರಹ್ಮ ಹಂಸಲೇಖ ಅವರು ಪೂಜ್ಯ‌ ಕನ್ನಡಿಗರಿಗೆ ಎನ್ನುತ್ತಲೇ ಮಾತು ಶುರು ಮಾಡಿದರು. ಕರ್ನಾಟಕದ ಏಕೀಕರಣಕ್ಕೆ ಇದೀಗ 50 ವರ್ಷ ತುಂಬಿದೆ. ನನ್ನ ಕಲಾ ಕಾಯಕಕ್ಕೂ 50 ವರ್ಷ ತುಂಬಿದೆ. ಇಂದು ನನಗೆ ಸಿಕ್ಕಿರುವ ಈ ಅವಕಾಶ ಬಹಳ ಬೆಲೆ ಬಾಳುವಂತದ್ದು. ಸಾವಿರ ಮೆಟ್ಟಿಲು ಹತ್ತಿ ಇಲ್ಲಿಯವರೆಗೆ ಬಂದಿದ್ದೇನೆ. ಈ ಬೆಟ್ಟ, ಈ ಹಬ್ಬ, ಈ ದೀಪ ಹಚ್ಚೋದು ಪುಣ್ಯದ ಕೆಲಸ. ಈ ಸಂಭ್ರಮಕ್ಕೆ ನಾನು ಯಾರನ್ನು ನೆನೆಯಲಿ ಎಂದು ತಿಳಿಸಿದರು.

Music director Hamsalekha reaction on importance of Kannada language

ನಾನು ಹಚ್ಚಿದ್ದು ಕನ್ನಡದ ದೀಪ. ಈ ದೀಪ ಹಚ್ಚಲು ನನಗೆ ಇಡೀ ನಾಡಿನ ಆಶಯ ಇದೆ. ದಸರಾ ಒಂದು ಜೀವಂತ ಮಹಾಕಾವ್ಯ. ವೀರತೆಂಕಣದ ಮಹಾಕಾವ್ಯ ಇದು. ಕನ್ಮಡ ನಮ್ಮ ಶೃತಿ ಆಗಬೇಕು. ಆಳಿದರೆ ಕೃತಿಯಂತಿರಬೇಕು. ಕನ್ನಡದ ಭಾಷೆಗೆ ಮಿತಿ ಇದೆ. ಆದರೆ ಅದರ ಭಾವಕ್ಕೆ ಎಲ್ಲಿ ಮಿತಿ ಇದೆ. ದೆಹಲಿ ನಮಗೆ ಬೇಕು. ದೆಹಲಿಗೂ ಕನ್ನಡ ಬೇಕು ಎಂದರು.

ಆದರೆ, ದೆಹಲಿಗೆ ಯಾಕೋ ಕನ್ನಡ ಬೇಡವಾಗಿದೆ. ಕನ್ನಡ ವಿಶ್ವಭಾಷೆ ಆಗಬೇಕು. ಅಭಿವೃದ್ಧಿ ಶಾಂತಿಮಂತ್ರ ಒಂದಂಶದ ಕಾರ್ಯಕ್ರಮ ಆಗಬೇಕು. ಹೊರ ರಾಜ್ಯದ ಕಾರ್ಪೋರೇಟ್ ಕಂಪನಿಯ ನೌಕರರಿಗೆ ಕನ್ನಡ ಕಲಿಸಬೇಕು. ಕನ್ನಡ ಕಲಿಸುವ ಪುಸ್ತಕ ಹೊರಬರಬೇಕೆಂದು ತಿಳಿಸಿದರು.

ಮಂಗಳೂರು ಮೈಸೂರು ಜೋಡಿ ಜಿಲ್ಲೆ ಆಗಬೇಕು. ಈ ಎರಡು ಜಿಲ್ಲೆಯಲ್ಲಿ ಅಪಾರ ಸಾಂಸ್ಕೃತಿಕ ಕಣಜವಿದೆ. ವ್ಯಾಪಾರ-ವಿನಿಮಯ ಆಗಬೇಕು. ಎಲ್ಲಾ ಜಿಲ್ಲೆಗಳನ್ನು ಎರಡು ಜಿಲ್ಲೆಯಾಗಿ ಜೋಡಿಸಬೇಕಿದೆ. ಕೃಷಿಕರು-ಕಾರ್ಪೋರೇಟರ್ ಒಂದಾಗಿ ಸಾಗಬೇಕು. ಕನ್ನಡದ ಅಭಿವೃದ್ಧಿಯಲ್ಲಿ ನಾವೆಲ್ಲರೂ ಬದ್ಧರಾಗೋಣ. ಮಗುವಿಗೆ ಕನ್ನಡವನ್ನು ತಾಯಿ ಕಲಿಸಬೇಕು. ಮನುಜ ಮತ ವಿಶ್ವ ಪಥ ಎಲ್ಲೆಡೆ ಪರಿಸಬೇಕು. ಶಾಂತಿಮಂತ್ರವನ್ನು ನಾವೆಲ್ಲರೂ ಮಾಡೋಣ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+