ನಟ ದರ್ಶನ್ ರ ಮೈಸೂರು ಮನೆ ಹೆಸರು - 'ಮುತ್ತುರಾಜ್ - ಪಾರ್ವತಮ್ಮ'
ಚಾಲೆಂಜಿಂಗ್ ಸ್ಟಾರ್ ದರ್ಶನ್ ರಮೈಸೂರಿನ ಹಳೆಯ ನಿವಾಸದ ಹೆಸರು ಮುಪಾ ಕೃಪಾ, ಮುಪಾ ನಿಲಯ. ಮು ಅಂದ್ರೆ ಮುತ್ತುರಾಜ, ಪಾ ಅಂದರೆ ಪಾರ್ವತಮ್ಮ. ಇದು ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿದೆ. ಇದನ್ನು ಪಾರ್ವತಮ್ಮ ರಾಜ್ ಕುಮಾರ್ ಕಟ್ಟಿಸಿಕೊಟ್ಟಿದ್ದರು
ಮೈಸೂರು, ಜೂನ್ 1: ನಟ ಸಾರ್ವಭೌಮ ಎಂದು ಬಿರುದಾಂಕಿತರಾದ ರಾಜ್ ಕುಮಾರ್ ಕುಟುಂಬದ್ದು ಸಹ ನಟರಿಗಾಗಿ ಬಾಗುವ ಮನಸ್ಸು. ಅವರ ಮನೆಗೆ ಯಾರೇ ಬರಲಿ ಅದು ಸಹಾಯಾರ್ಥಕ್ಕಾಗಿರಲಿ ಅಥವಾ ಭೇಟಿಯಾಗಿರಲಿ ಎಲ್ಲರನ್ನು ವಿನಯದಿಂದಲೇ ನಡೆಸಿಕೊಳ್ಳುತ್ತಿದ್ದ ಮನೆಯ ಯಜಮಾನಿ ಪಾರ್ವತಮ್ಮರದ್ದು ದೊಡ್ಡ ಔದಾರ್ಯತೆ. ಅದಕ್ಕೆ ಈ ಉದಾಹರಣೆಯೇ ಸಾಕ್ಷಿ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ರಮೈಸೂರಿನ ಹಳೆಯ ನಿವಾಸದ ಹೆಸರು ಮುಪಾ ಕೃಪಾ, ಮುಪಾ ನಿಲಯ. ಮು ಅಂದ್ರೆ ಮುತ್ತುರಾಜ, ಪಾ ಅಂದರೆ ಪಾರ್ವತಮ್ಮ. ಇದು ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿದೆ. ಇದನ್ನು ಪಾರ್ವತಮ್ಮ ರಾಜ್ ಕುಮಾರ್ ಕಟ್ಟಿಸಿಕೊಟ್ಟಿದ್ದರು.[ಸಾಲಿಗ್ರಾಮದ ಪಾರ್ವತಿ ಕನ್ನಡ ಚಿತ್ರರಂಗದ ಅಮ್ಮನಾಗಿ...]

ಆರ್ಥಿಕ ನೆರವು ನೀಡಿದ್ದ ಪಾರ್ವತಮ್ಮ
ಡಾ.ರಾಜ್ ಜೊತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದ ತೂಗುದೀಪ ಶ್ರೀನಿವಾಸ ಅವರು ಮೈಸೂರಲ್ಲಿ ಮನೆ ಕಟ್ಟಿಕೊಳ್ಳುವ ಆಸೆ ಹೊಂದಿದ್ದರು. ಆದರೆ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದ ಅವರಿಗೆ ಅದು ಸಾಧ್ಯವಾಗಿರಲಿಲ್ಲ. ಆದರೆ, ಅದನ್ನ ಸಾಕಾರಗೊಳಿಸಿದವರು ಪಾರ್ವತಮ್ಮ ರಾಜ್ ಕುಮಾರ್.

ನಟ ತೂಗುದೀಪ ಶ್ರೀನಿವಾಸ ಅವರ ಮನೆ ಇದಾಗಿದ್ದು, ಸಂಕಷ್ಟದಲ್ಲಿದ್ದ ತೂಗುದೀಪ ಕುಟುಂಬಕ್ಕೆ ಪಾರ್ವತಮ್ಮ ನೆರವಾಗಿದ್ದಲ್ಲದೇ, ಮನೆ ಕಟ್ಟಿಸಿಕೊಟ್ಟಿದ್ದರು. ಅವರಿಗೆ ಕೃತಜ್ಞತೆ ಸಲ್ಲಿಸುವುದಕ್ಕಾಗಿ ಮನೆಗೆ ಮುಪಾ ಎಂದು ತೂಗುದೀಪ್ ಶ್ರೀನಿವಾಸರ ಅವರ ಪತ್ನಿ ಮೀನಾ ತೂಗುದೀಪ್ ನಾಮಕರಣ ಮಾಡಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications