ಪ್ಲಾಸ್ಟಿಕ್ ಮುಕ್ತ ನಗರವಾಗುವತ್ತ ಮೈಸೂರಿನ ಮತ್ತೊಂದು ಹೆಜ್ಜೆ
ಮೈಸೂರು, ಮಾರ್ಚ್ 13: ಸ್ವಚ್ಛ ನಗರ, ಪ್ಲಾಸ್ಟಿಕ್ ಮುಕ್ತ ನಗರವಾಗುವತ್ತ ಮೈಸೂರು ಮತ್ತೊಂದು ಹೆಜ್ಜೆ ಇಟ್ಟಿದೆ. ಇದಕ್ಕೆ ತಂತ್ರಜ್ಞಾನವನ್ನೂ ಜೊತೆಯಾಗಿಸಿಕೊಂಡಿದೆ. "ಮೈ ಕ್ಲೀನ್ ಸಿಟಿ" ಎಂಬ ಆಪ್ ನ ಹೊಸ ಆವೃತ್ತಿಯನ್ನು ಪರಿಚಯಿಸಲಾಗಿದ್ದು, ಮಹಾ ನಗರ ಪಾಲಿಕೆಯ ಕಚೇರಿ ಸಭಾಂಗಣದಲ್ಲಿ ಮೇಯರ್ ತಸ್ನೀಂ ಆಪ್ ನ ಹೊಸ ಆವೃತ್ತಿಯನ್ನು ಇಂದು ಬಿಡುಗಡೆ ಮಾಡಿದರು.
"ಆಡಳಿತವನ್ನು ಇನ್ನಷ್ಟು ಪಾರದರ್ಶಕ ಮತ್ತು ಜನಸ್ನೇಹಿಯಾಗಿಸಬೇಕೆಂಬುದು ಮಹಾನಗರ ಪಾಲಿಕೆಯ ಉದ್ದೇಶ. ಇದನ್ನು ಸಾಕಾರಗೊಳಿಸಲು ಹೊಸ ಆವೃತ್ತಿ ಬಿಡುಗಡೆ ಮಾಡಲಾಗುತ್ತಿದೆ. ಈ ಮೇಲ್ದರ್ಜೆಯ ಆಪ್ ಮುಖಾಂತರ ಜನರು ಅತೀ ಶೀಘ್ರವಾಗಿ ಪಾಲಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ" ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಪಾಲಿಕೆಯ ಆಯುಕ್ತ ಗುರುದತ್ ಹೆಗಡೆ ಮಾತನಾಡಿ, "ಗೂಗಲ್ ಪ್ಲೇ ಸ್ಟೋರ್ ಮೂಲಕ My Clean City-Mysuru ಆಪ್ ಡೌನ್ ಲೋಡ್ ಮಾಡಿಕೊಳ್ಳಬಹುದು. ಹೊಸ ಆವೃತ್ತಿಯಲ್ಲಿ ಹಲವು ಜನಸ್ನೇಹಿ ಅಂಶಗಳನ್ನು ಸೇರ್ಪಡೆಗೊಳಿಸಲಾಗಿದೆ. ಹಿಂದಿನ ಆವೃತ್ತಿಯಲ್ಲಿ ಗುಂಡಿ ಬಿದ್ದಿರುವ ರಸ್ತೆ, ಘನತ್ಯಾಜ್ಯ ವಿಲೇವಾರಿ, ಬೀದಿ ದೀಪಗಳ ಸಮಸ್ಯೆ, ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿ, ಫುಟ್ ಪಾತ್ ಅಥವಾ ಪಾಲಿಕೆ ಆಸ್ತಿ ಒತ್ತುವರಿ, ಪ್ರಾಣಿಗಳ ಹಾವಳಿ ಕುರಿತು ದೂರುಗಳನ್ನು ನೀಡಬಹುದಿತ್ತು. ಇದೀಗ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ಕುರಿತೂ ದೂರು ನೀಡಬಹುದು ಎಂದರು.

ಪಾಲಿಕೆಯು ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಮಾಡುವ ಗುರಿ ಹೊಂದಿದ್ದು ಇದಕ್ಕೆ ಪೂರಕವಾಗಿ 'ಮೈ ಕ್ಲೀನ್ ಸಿಟಿ' ಆಪ್ ಅನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ನಾಗರಿಕರು ನಿಷೇಧಿತ ಪ್ಲಾಸ್ಟಿಕ್ ಬಳಕೆ ಕುರಿತು ದೂರು ನೀಡಿದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಬಳಕೆದಾರರ ವಿರುದ್ಧ ಕ್ರಮ ಜರುಗಿಸುವರು. ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣಕ್ಕೆ ಜನರು ನಗರ ಪಾಲಿಕೆಯೊಂದಿಗೆ ಕೈಜೋಡಿಸಲು ಈ ಆಪ್ ಸಹಕಾರಿಯಾಗಿದೆ ಎಂದರು.
ಹೊಸ ಆವೃತ್ತಿಯಲ್ಲಿ ನೇರವಾಗಿ ದೂರು ವಾರ್ಡ್ ಅಧಿಕಾರಿಗೆ ತಲುಪುತ್ತದೆ. ಹೀಗಾಗಿ ನಾಗರಿಕರ ಸಮಸ್ಯೆಗಳಿಗೆ ಮತ್ತಷ್ಟು ವೇಗವಾಗಿ ಪರಿಹಾರ ನೀಡಬಹುದು. ಪ್ರತಿಯೊಂದು ಸಮಸ್ಯೆಗಳನ್ನು ಪರಿಹರಿಸಲು ಕಾಲಮಿತಿ ನಿಗದಿಪಡಿಸಲಾಗಿದೆ. ನಿಗದಿತ ಸಮಯದೊಳಗೆ ಸಮಸ್ಯೆ ಬಗೆಹರಿಸದೇ ಇದ್ದರೆ ವಲಯ ಅಧಿಕಾರಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ವಲಯ ಅಧಿಕಾರಿ ಹಂತದಲ್ಲೂ ಸಮಸ್ಯೆ ಬಗೆಹರಿಯದಿದ್ದರೆ ಇಲಾಖಾಧಿಕಾರಿ, ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮಾಹಿತಿ ನೀಡಿದರು.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications