ಚುನಾವಣಾ ಶಾಯಿ ಬಗ್ಗೆ ಬಂದಿರುವ ಆರೋಪ ಆಧಾರರಹಿತ:ಮೈಲಾಕ್ ಮಾಜಿ ಅಧ್ಯಕ್ಷ
ಮೈಸೂರು, ಏಪ್ರಿಲ್ 21:ಮೈಲಾಕ್ ಅಳಿಸಲಾಗದ ಶಾಯಿ ಗುಣಮಟ್ಟದ ಬಗ್ಗೆ ಏಪ್ರಿಲ್ 18 ರಂದು ನಡೆದ ಲೋಕಸಭೆ ಚುನಾವಣೆಯಲ್ಲಿ ಆರೋಪ ಕೇಳಿ ಬಂದಿದ್ದು, ಇದನ್ನು ಸಂಸ್ಥೆಯ ಮಾಜಿ ಅಧ್ಯಕ್ಷ ಹೆಚ್.ಎ ವೆಂಕಟೇಶ್ ತಳ್ಳಿ ಹಾಕಿದ್ದಾರೆ.
ಮಾಧ್ಯಮಗಳಿಗೆ ಸ್ಪಷ್ಟಿಕರಣ ನೀಡಿದ ಅವರು, ಇದೊಂದು ನಿರಾಧಾರ ಆರೋಪ. ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದಾಗಿನಿಂದ ಈ ಇಂಕ್ ಬಳಕೆ ಆಗುತ್ತಿದೆ. ಅಂದಿನಿಂದ ಇಲ್ಲದ ಆರೋಪ ಇಂದು ಮಾಡುತ್ತಿರುವುದು ಸರಿಯಲ್ಲ. ಭಾರತವು ಸೇರಿದಂತೆ 23 ರಾಷ್ಟ್ರಗಳಿಗೆ ಈ ಇಂಕ್ ಬಳಕೆ ಆಗಲಿದೆ. ಇಂಕ್ ಗುಣಮಟ್ಟವನ್ನ ಲ್ಯಾಬ್ ಗಳಲ್ಲಿ ಪರಿಶೀಲನೆ ಮಾಡಲಾಗುತ್ತದೆ ಎಂದು ಹೇಳಿದರು.
ಚುನಾವಣಾ ಶಾಯಿ ಬಗ್ಗೆ ಮೈಸೂರಿನ ಕಾರ್ಖಾನೆ ತನ್ನದೆ ಹೆಸರು ಉಳಿಸಿಕೊಂಡಿದೆ. ಅಲ್ಲಿನ ಶಾಯಿ ಗುಣಮಟ್ಟ ಎಂದಿಗೂ ಕಳಪೆಯಾಗಿಲ್ಲ. ನನ್ನ ಬೆರಳಲ್ಲಿ ಈಗಲೂ ಶಾಯಿ ಇದೆ. ಮೈಸೂರು ಪೇಂಟ್ಸ್ ಅಂಡ್ ವಾರ್ನಿಶ್ ಸಂಸ್ಥೆಯ ಇಡೀ ದೇಶದಲ್ಲೇ ಮಾದರಿ ಕಾರ್ಖಾನೆಯಾಗಿದೆ. ಆ ಕಾರ್ಖಾನೆ ಹೆಸರನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಬ್ದಾರಿ. ಚುನಾವಣಾ ಶಾಯಿ ಬಗ್ಗೆ ಬಂದಿರುವ ಆರೋಪ ಆಧಾರರಹಿತವಾದದ್ದು ಎಂದರು.

ನಾನು ಅಲ್ಲಿ ಅಧ್ಯಕ್ಷನಾಗಿದ್ದವನು. ಅಲ್ಲಿಯ ಗುಣಮಟ್ಟದ ಬಗ್ಗೆ ಯಾವತ್ತೂ ಹೊಂದಾಣಿಕೆ ಆಗಿಲ್ಲ. ಯಾರು ಇಂಕ್ ಅಳಿಸಿಹೋಗಿದೆ ಎನ್ನುತ್ತಾರೋ ಅವರ ಉದ್ದೇಶ ಬೇರೆ ಇರಬೇಕು. ನಾಲ್ವಡಿಯವರ ದೂರದೃಷ್ಟಿಯ ಕಾರ್ಖಾನೆ ಅದು ಎಂದು ವೆಂಕಟೇಶ್ ತಿಳಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications