ಲೋಕಸಭಾ ಚುನಾವಣೆಗೆ ಶಾಯಿ ಪೂರೈಸಲು ಮುಂದಾದ ಮೈಸೂರಿನ ಮೈಲ್ಯಾಕ್ಸ್
ಮೈಸೂರು, ಮಾರ್ಚ್ 12: ಭಾರತ ಚುನಾವಣಾ ಆಯೋಗ ಲೋಕಸಭಾ ಚುನಾವಣೆ 2019ಕ್ಕೆ ಶಾಹಿ ಪೂರೈಕೆಗೆ ಮೈಸೂರು ಬಣ್ಣ ಮತ್ತು ಅರಗು (ಮೈಲ್ಯಾಕ್ಸ್ ) ಕಾರ್ಖಾನೆಗೆ ಬೇಡಿಕೆ ಬಂದಿದ್ದು, ಸಂಸ್ಥೆ ಅಳಿಸಲಾಗದ ಶಾಯಿ ಸರಬರಾಜಿಗೆ ಮುಂದಾಗಿದೆ.
ದೇಶದ 543 ಲೋಕಸಭಾ ಕ್ಷೇತ್ರದಲ್ಲಿ 7 ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಅಳಿಸಲಾಗದ ಶಾಯಿ ಪೂರೈಕೆಗೆ ತಯಾರಿ ನಡೆಸುತ್ತಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ಆರಂಭವಾದ ಮೈಸೂರು ಬಣ್ಣ ಮತ್ತು ಅರಗು ಕಾರ್ಖಾನೆ ಭಾರತದಲ್ಲಿ ನಡೆದ ಮೂರನೇ ಸಾರ್ವತ್ರಿಕ ಚುನಾವಣೆಯಲ್ಲಿ ಮೊದಲ ಬಾರಿಗೆ ಅಳಿಸಲಾಗದ ಶಾಯಿ ಪೂರೈಸಿತ್ತು.
ಅಂದಿನಿಂದ ಅಳಿಸಲಾಗದ ಶಾಯಿ ತಯಾರಿಸುತ್ತಾ ಬಂದಿದ್ದು, ಪ್ರತಿ ಚುನಾವಣೆಗೂ ಈ ಕಾರ್ಖಾನೆಯಿಂದಲೇ ಶಾಯಿ ಪೂರೈಕೆ ಮಾಡಲಾಗುತ್ತಿದೆ. ಮೈಲ್ಯಾಕ್ ತಯಾರಿಸುವ ಶಾಯಿಯನ್ನು ವಿಶ್ವದ 25 ರಾಷ್ಟ್ರಗಳು ಬಳಸುತ್ತಿವೆ. ಕಳೆದ ವರ್ಷ ಮಲೇಷಿಯಾ ಹಾಗೂ ಇಂಡೊನೇಷಿಯಾಗೆ ಶಾಯಿ ಸರಬರಾಜು ಮಾಡಿದ್ದನ್ನು ನೆನಪಿಸಿಕೊಳ್ಳಬಹುದು.

ನಾಲ್ಕು ತಿಂಗಳ ಹಿಂದೆಯೇ ಅಂದರೆ 2018 ಡಿಸೆಂಬರ್ ಅಂತ್ಯದಲ್ಲಿ ಮೈಲ್ಯಾಕ್ ಗೆ 10 ಎಂಎಲ್ ಪ್ರಮಾಣದ 26 ಲಕ್ಷ ಅಳಿಸಲಾಗದ ಶಾಯಿ ಪೂರೈಸುವಂತೆ ಆರ್ಡರ್ ಬುಕ್ ಮಾಡಲಾಗಿದೆ. ಇದರಿಂದ ಸುಮಾರು 33 ಕೋಟಿ ರೂ. ಮೈಲ್ಯಾಕ್ ಗೆ ಆದಾಯ ಬರಲಿದೆ.
ಆಯೋಗದ ಬೇಡಿಕೆಗೆ ಅನುಗುಣವಾಗಿ ಸಕಾಲಕ್ಕೆ ಶಾಯಿ ಸರಬರಾಜು ಮಾಡುವ ಉದ್ದೇಶದಿಂದ ಮೈಲ್ಯಾಕ್ ಸಂಸ್ಥೆ ಜ.7ರಿಂದಲೇ ಶಾಯಿ ತಯಾರಿಸುವ ಕಾರ್ಯ ಆರಂಭಿಸಿದೆ. ಚುನಾವಣಾ ದಿನಾಂಕ ಪ್ರಕಟವಾಗುವ ಮುನ್ನವೇ 20 ಲಕ್ಷ ಬಾಟಲಿ ಶಾಯಿಯನ್ನು ಹಂತ ಹಂತವಾಗಿ ಚುನಾವಣಾ ಆಯೋಗಕ್ಕೆ ನೀಡಲಾಗಿದೆ.
ಸಂಸ್ಥೆಯ 50 ನೌಕರರೊಂದಿಗೆ ಗುತ್ತಿಗೆ ಆಧಾರದಲ್ಲಿ ಇನ್ನೂ 50 ನೌಕರರು ಸೇರಿ ಶಾಯಿ ತಯಾರಿಸುವ ಕೆಲಸದಲ್ಲಿ ಭಾಗಿಯಾಗಿದ್ದಾರೆ. ಮಾ.19ರ ವೇಳೆಗೆ ಉಳಿಕೆ 6 ಲಕ್ಷ ಬಾಟಲಿ ಶಾಯಿಯನ್ನು ರವಾನಿಸಲಾಗುತ್ತದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications