ಅನಂತ್ ಕುಮಾರ್ ನೆನೆದು ಭಾವುಕರಾದ ಮೈಸೂರಿನ ಬಿಜೆಪಿ ನಾಯಕರು
ಮೈಸೂರು, ನವೆಂಬರ್. 13: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದಿಂದ ದೇಶಕ್ಕೆ ಹಾಗೂ ರಾಜ್ಯಕ್ಕೆ ನಷ್ಟ ಉಂಟಾಗಿದೆ. ರಾಜ್ಯದಲ್ಲಿ ಬಿಜೆಪಿ ಬೆಳೆಯಲು ಅನಂತ್ ಕುಮಾರ್ ಪಾತ್ರ ಹಿರಿದು ಎಂದು ಬಿಜೆಪಿ ಮುಖಂಡ ಜಯಪ್ರಕಾಶ್ ತಿಳಿಸಿದ್ದಾರೆ.
ಸರಳ, ಸಜ್ಜನಿಕೆ ವ್ಯಕ್ತಿಯಾಗಿದ್ದ ಅನಂತ್ ಕುಮಾರ್ ಮಾದರಿ ರಾಜಕಾರಣಿಯಾಗಿದ್ದರು. ಅವರ ನಿಧನ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದರು.
ಸಂಸದ ಧ್ರುವನಾರಾಯಣ್ ಸಹ ಅನಂತ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ರಾಜ್ಯದಲ್ಲಿ ಉತ್ತುಂಗದ ನಾಯಕರಲ್ಲಿ ಅವರು ಅಗ್ರಗಣ್ಯರು. ಇವರು ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ನೀಡಿರುವ ಕೊಡುಗೆ ಅಪಾರ.

ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಕೋರಿದ್ದಾರೆ.
ಕೇಂದ್ರ ಸಚಿವ ಅನಂತ್ ಕುಮಾರ್ ಪಕ್ಷದ ಸಂಘಟನೆಯ ಚತುರರಾಗಿ ಇಡೀ ದೇಶದಲ್ಲಿ ಬಹಳಷ್ಟು ರಾಜ್ಯಗಳ ಚುನಾವಣೆಗಳ ನಿರ್ವಹಣೆ ಮಾಡಿದಂತಹ ವ್ಯಕ್ತಿ. ಇವತ್ತು ಭಾರತೀಯ ಜನತಾ ಪಾರ್ಟಿ ತನ್ನದೇ ಆದ ಸ್ಥಾನವನ್ನು ಪಡೆಯಲು ನಿಸ್ವಾರ್ಥವಾಗಿ ದುಡಿದ ಮೇರು ವ್ಯಕ್ತಿತ್ವ. ನನ್ನಂತಹ ಸಾವಿರಾರು ಕಾರ್ಯಕರ್ತರನ್ನು ನಿರ್ಮಾಣ ಮಾಡಿದಂತಹದ ವ್ಯಕ್ತಿ ನಮ್ಮೊಂದಿಗಿಲ್ಲ ಎಂದು ಶಾಸಕ ರಾಮ್ ದಾಸ್ ತಿಳಿಸಿದ್ದಾರೆ.
ನಗರ ಬಿಜೆಪಿ ಅಧ್ಯಕ್ಷ ಡಾ. ಮಂಜುನಾಥ್ ಪತ್ರಿಕಾ ಪ್ರಕಟಣೆಯಲ್ಲಿ ಅನಂತ್ ಕುಮಾರ್ ನಿಧನದಿಂದ ಪಕ್ಷಕ್ಕೆ ಹಾಗೂ ರಾಷ್ಟ್ರಕ್ಕೆ ಹೆಚ್ಚು ನಷ್ಟವಾಗಿದೆ. ಕೇಂದ್ರ ರಸಗೊಬ್ಬರ ಸಚಿವರಾಗಿ ನೀಮ್ ಲೇಪಿತ ಯೂರಿಯಾ ಒದಗಿಸುವ ಮೂಲಕ ಕಾಳ ದಂಧೆಯನ್ನು ತಡೆಗಟ್ಟಿ ರೈತರಿಗೆ ಅನಿಯಮಿತ ರಸಗೊಬ್ಬರ ಪೂರೈಕೆಗೆ ಕ್ರಮಕೈಗೊಂಡಿದ್ದ ರೀತಿ ಪ್ರಶಂಸನಾರ್ಹ ಎಂದು ನೆನೆದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications