ಅನಂತ್ ಕುಮಾರ್ ನೆನೆದು ಭಾವುಕರಾದ ಮೈಸೂರಿನ ಬಿಜೆಪಿ ನಾಯಕರು

ಮೈಸೂರು, ನವೆಂಬರ್. 13: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನದಿಂದ ದೇಶಕ್ಕೆ ಹಾಗೂ ರಾಜ್ಯಕ್ಕೆ ನಷ್ಟ ಉಂಟಾಗಿದೆ. ರಾಜ್ಯದಲ್ಲಿ ಬಿಜೆಪಿ ಬೆಳೆಯಲು ಅನಂತ್ ಕುಮಾರ್ ಪಾತ್ರ ಹಿರಿದು ಎಂದು ಬಿಜೆಪಿ ಮುಖಂಡ ಜಯಪ್ರಕಾಶ್ ತಿಳಿಸಿದ್ದಾರೆ.

ಸರಳ, ಸಜ್ಜನಿಕೆ ವ್ಯಕ್ತಿಯಾಗಿದ್ದ ಅನಂತ್ ಕುಮಾರ್ ಮಾದರಿ ರಾಜಕಾರಣಿಯಾಗಿದ್ದರು. ಅವರ ನಿಧನ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದರು.

ಸಂಸದ ಧ್ರುವನಾರಾಯಣ್ ಸಹ ಅನಂತ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ರಾಜ್ಯದಲ್ಲಿ ಉತ್ತುಂಗದ ನಾಯಕರಲ್ಲಿ ಅವರು ಅಗ್ರಗಣ್ಯರು. ಇವರು ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ನೀಡಿರುವ ಕೊಡುಗೆ ಅಪಾರ.

Mysore BJP leaders pays condolence to Ananth Kumars demise

ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಕೋರಿದ್ದಾರೆ.

ಕೇಂದ್ರ ಸಚಿವ ಅನಂತ್ ಕುಮಾರ್ ಪಕ್ಷದ ಸಂಘಟನೆಯ ಚತುರರಾಗಿ ಇಡೀ ದೇಶದಲ್ಲಿ ಬಹಳಷ್ಟು ರಾಜ್ಯಗಳ ಚುನಾವಣೆಗಳ ನಿರ್ವಹಣೆ ಮಾಡಿದಂತಹ ವ್ಯಕ್ತಿ. ಇವತ್ತು ಭಾರತೀಯ ಜನತಾ ಪಾರ್ಟಿ ತನ್ನದೇ ಆದ ಸ್ಥಾನವನ್ನು ಪಡೆಯಲು ನಿಸ್ವಾರ್ಥವಾಗಿ ದುಡಿದ ಮೇರು ವ್ಯಕ್ತಿತ್ವ. ನನ್ನಂತಹ ಸಾವಿರಾರು ಕಾರ್ಯಕರ್ತರನ್ನು ನಿರ್ಮಾಣ ಮಾಡಿದಂತಹದ ವ್ಯಕ್ತಿ ನಮ್ಮೊಂದಿಗಿಲ್ಲ ಎಂದು ಶಾಸಕ ರಾಮ್ ದಾಸ್ ತಿಳಿಸಿದ್ದಾರೆ.

ನಗರ ಬಿಜೆಪಿ ಅಧ್ಯಕ್ಷ ಡಾ. ಮಂಜುನಾಥ್ ಪತ್ರಿಕಾ ಪ್ರಕಟಣೆಯಲ್ಲಿ ಅನಂತ್ ಕುಮಾರ್ ನಿಧನದಿಂದ ಪಕ್ಷಕ್ಕೆ ಹಾಗೂ ರಾಷ್ಟ್ರಕ್ಕೆ ಹೆಚ್ಚು ನಷ್ಟವಾಗಿದೆ. ಕೇಂದ್ರ ರಸಗೊಬ್ಬರ ಸಚಿವರಾಗಿ ನೀಮ್ ಲೇಪಿತ ಯೂರಿಯಾ ಒದಗಿಸುವ ಮೂಲಕ ಕಾಳ ದಂಧೆಯನ್ನು ತಡೆಗಟ್ಟಿ ರೈತರಿಗೆ ಅನಿಯಮಿತ ರಸಗೊಬ್ಬರ ಪೂರೈಕೆಗೆ ಕ್ರಮಕೈಗೊಂಡಿದ್ದ ರೀತಿ ಪ್ರಶಂಸನಾರ್ಹ ಎಂದು ನೆನೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+