ಐತಿಹಾಸಿಕ ಮೈಸೂರು ದಸರಾ ಉತ್ಸವಕ್ಕೆ ಚಾಲನೆ
ಮೈಸೂರು, ಅ.5 : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ 2013ಕ್ಕೆ ಚಾಲನೆ ದೊರಕಿದೆ. ಶನಿವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಹತ್ತುದಿನಗಳ ದಸರಾ ಉತ್ಸವಕ್ಕೆ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ಮುಂತಾದವರು ಉಪಸ್ಥಿತರಿದ್ದರು.
ಶನಿವಾರ ಬೆಳಗ್ಗೆ 10.45ರ ಸುಮಾರಿಗೆ ಚಾಮುಂಡಿ ಬೆಟ್ಟದಲ್ಲಿ ನಾಡದೇವಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ದಸರಾ ಉತ್ಸವಕ್ಕೆ ಚಾಲನೆ ನೀಡಲಾಯಿತು. ಈ ಮೂಲಕ ಹತ್ತು ದಿನಗಳ ಉತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು.

ದಸರಾ ಉದ್ಘಾಟಿಸಿ ಮಾತನಾಡಿ ಡಾ.ಚಂದ್ರಶೇಖರ ಕಂಬಾರ, ಕರ್ನಾಟಕ ಜನರಿಗೆ ದಸರ ಹಬ್ಬದ ಶುಭಾಶಯ ಸಲ್ಲಿಸಿದರು. ಹಳೆ ಬೇರು, ಹೊಸ ಚಿಗುರುಗಳ ಮಿಲನವಾಗಿರುವ ದಸರಾ ಮಹೋತ್ಸವವನ್ನು ಉದ್ಘಾಘಟಿಸಲು ಅತೀವ ಹರ್ಷವಾಗುತ್ತದೆ ಎಂದು ಹೇಳಿದರು.
ಹಳತು ಹೊಸತರ ನಡುವೆ ನಮ್ಮೆಲ್ಲರ ಜೀವನ ನಾಟಕ ಜರುಗುತ್ತದೆ. ಬದಲಾವಣೆಯೊಂದೇ ನಿರಂತರ ಸತ್ಯ. ಬದವಲಾವಣೆಗಳನ್ನು ತಡೆಯುವುದು ಬೀಸುವ ಗಾಳಿಯನ್ನು ಹಿಡಿದಿಡುವ ಹಾಗೆ. ಇದಕ್ಕಾಗಿ ನಾವು ಕಳವಳಿಸಬೇಕಿಲ್ಲ.
ಆದರೆ, ಬದಲಾವಣೆಯ ಭರಾಟೆಯಲ್ಲಿ ಇಂದು ಅನಗತ್ಯವಾದುದರ ಜತೆಗೆ ಸಾರ್ವಕಾಲಿಕ ಮೌಲ್ಯಗಳುಳ್ಳ ಗತದ ಅನರ್ಘ್ಯ ಅಂಶಗಳು ಅಳಿದುಹೋಗದಂತೆ ಎಚ್ಚರ ವಹಿಸುವುದು ಬಲು ಮುಖ್ಯವಾದುದು ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ಅರಮನೆಯಲ್ಲಿ ರಾಜವಂಶಸ್ತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸಿಂಹಾಸನಕ್ಕೆ ಪೂಜೆ ಸಲ್ಲಿಸುವ ಮೂಲಕ ಖಾಸಗಿ ದಸರಾ ದರ್ಬಾರ್ ಗೆ ಚಾಲನೆ ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮ : ದಸರಾ ಅಂಗವಾಗಿ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ಖ್ಯಾತ ರಂಗಕರ್ಮಿ ನಾಡೋಜ ಡಾ.ಏಣಗಿ ಬಾಳಪ್ಪ ಚಾಲನೆ ನೀಡಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಲಿದೆ.
ಚಲನಚಿತ್ರೋತ್ಸವ : ಕಲಾ ಮಂದಿರದಲ್ಲಿ ಸಂಜೆ ದಸರಾ ಚಲನಚಿತ್ರೋತ್ಸವಕ್ಕೆ ವಾರ್ತಾ ಸಚಿವ ಸಂತೋಷ್ ಲಾಡ್ ಚಾಲನೆ ನೀಡಲಿದ್ದಾರೆ. ಪಾರ್ವತಮ್ಮ ರಾಜ್ಕುಮಾರ್, ಬಿ.ಸರೋಜಾದೇವಿ, ಲೀಲಾವತಿ, ತಾರಾ, ಉಪೇಂದ್ರ, ಪ್ರಿಯಾಂಕ, ದರ್ಶನ್, ವಿನೋದ್ರಾಜ್, ದಿಗಂತ್, ನಟಿ ಐಂದ್ರಿತಾ ರೇ ಮುಂತಾದವರು ಭಾಗವಹಿಸಲಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications