ದಸರಾ ಉತ್ಸವ ಬಹಿಷ್ಕಾರ: ಕಲಾವಿದರ ನಿರ್ಧಾರ
ಮೈಸೂರು, ಸೆ.12: ಪ್ರತಿ ವರ್ಷ ಇದೇ ಸಮಸ್ಯೆ ಎದುರಾಗುತ್ತದೆ. ನಾವು ನಾಡಹಬ್ಬ ಎಂದು ಅನುಸರಿಸಿಕೊಂಡು ಹೋಗುತ್ತಾ ಬಂದಿದ್ದೇವೆ. ಆದರೆ, ಈ ಬಾರಿ ಸರಿಯಾದ ಸಂಭಾವನೆ ಸಿಗದಿದ್ದರೆ ದಸರಾ ಉತ್ಸವದಲ್ಲಿ ಯಾವ ಜಾನಪದ್ ಕಲಾವಿದರು ಪಾಲ್ಗೊಳ್ಳುವುದಿಲ್ಲ ಎಂದು ಅಖಿಲ ಕರ್ನಾಟಕ ಜಾನಪದ ಕಲಾವಿದರ ಒಕ್ಕೂಟ ಎಚ್ಚರಿಸಿದೆ.
ಕಳೆದ ಮೂರು ವರ್ಷಗಳಿಂದ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಜಾನಪದ ಕಲಾವಿದರಿಗೆ ಉತ್ತಮ ಸಂಭಾವನೆ ನೀಡಲಾಗುತ್ತದೆ ಎಂದು ಸರ್ಕಾರಗಳು ಭರವಸೆ ನೀಡುತ್ತಲೇ ಬಂದಿವೆ. ಅದರೆ, ಇದುವರೆವಿಗೂ ಆಶ್ವಾಸನೆಗಳು ಈಡೇರಿಲ್ಲ ಎಂದು ಕರ್ನಾಟಕ ಜಾನಪದ ಕಲಾವಿದರ ಒಕ್ಕೂಟದ ಅಧ್ಯಕ್ಷ ಜೋಗಿಲ ಸಿದ್ದರಾಜು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಶ್ವ ಖ್ಯಾತ ಜಂಬೂಸವಾರಿ ಮೆರವಣಿಗೆ ಸೇರಿದಂತೆ ಮೂರ್ನಾಲ್ಕು ದಿನ ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವ ಕಲಾವಿದರಿಗೆ ತಲಾ ಒಬ್ಬರಿಗೆ ಕೇವಲ 500 ರು ನೀಡಲಾಗುತ್ತದೆ. ಆದರೆ, ಇಡೀ ಜಾನಪದ ತಂಡಕ್ಕೆ ಕನಿಷ್ಠ 50 ಸಾವಿರ ರು ಸಂಭಾವನೆ ನೀಡಬೇಕು. ವಾಹನ ಬಾಡಿಗೆ, ಉತ್ತಮ ಊಟ, ವಸತಿ ಸೌಕರ್ಯ ಒದಗಿಸಬೇಕು ಎಂದು ಸಿದ್ದರಾಜು ಆಗ್ರಹಿಸಿದ್ದಾರೆ.

ಈಗಾಗಲೇ ಚಲನಚಿತ್ರ ಹಾಗೂ ಕಿರುತೆರೆ ಕಲಾವಿದರಿಗೆ ಪಿಎಸ್ ಐ, ಇಎಸ್ ಐ ವೈದ್ಯಕೀಯ ಸೌಲಭ್ಯ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ಜಾನಪದ ಕಲಾವಿದರಿಗೂ ಸೌಲಭ್ಯ ಸಿಗಬೇಕು. ರಾಜ್ಯದಲ್ಲಿ ಒಂದು ಲಕ್ಷಕ್ಕೂ ಅಧಿಕ ಜಾನಪದ ಕಲಾವಿದರಿದ್ದಾರೆ. ಆದರೆ, ಮೂಲ ಸೌಲಭ್ಯ ವಂಚಿತರಾಗಿದ್ದು, ಕನಿಷ್ಠ ವೇತನ ಕೂಡಾ ಸಿಗದೆ ಕಲೆಯಾಗಿ ಜೀವನ ಮುಡಿಪಿಟ್ಟಿದ್ದಾರೆ ಎಂದು ಸಿದ್ದರಾಜು ಹೇಳಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications