ಮೈಸೂರಿನಲ್ಲಿ ಸಾಲು-ಸಾಲು ಕಾರ್ಯಕ್ರಮಗಳಿಗೆ ಚಾಲನೆ
ಮೈಸೂರು, ಸೆ. 26 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಟಕಕಾರ ಡಾ. ಗಿರೀಶ್ ಕಾರ್ನಾಡ್ ಚಾಲನೆ ನೀಡಿದ್ದಾರೆ. ಗುರುವಾರ ಮುಂಜಾನೆಯಿಂದ ಸಂಜೆಯ ತನಕ ಮೈಸೂರಿನಲ್ಲಿ ದಸರಾದ ವಿವಿಧ ಕಾರ್ಯಕ್ರಮಗಳು ಉದ್ಘಾಟನೆಗೊಂಡಿವೆ.
ಗುರುವಾರ ಮುಂಜಾನೆ 8.45ರ ಸುಮಾರಿಗೆ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆಗೆ ಪೂಜೆ ಸಲ್ಲಿಸುವ ಒಂಭತ್ತು ದಿನಗಳ ದಸರಾಕ್ಕೆ ಗಿರೀಶ್ ಕಾರ್ನಾಡ್ ಚಾಲನೆ ನೀಡಿದರು. ನಂತರ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭವಾದರೆ, ನಗರದ ವಿವಿಧ ಭಾಗಗಳಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಗಳಿಗೆ ಚಾಲನೆ ದೊರೆಯಿತು. [ಚಿತ್ರಗಳಲ್ಲಿ ನೋಡಿ ಮೈಸೂರು ದಸರಾ]
ಕುಸ್ತಿ ಪಂದ್ಯಾವಳಿ, ದಸರಾ ವಸ್ತು ಪ್ರದರ್ಶನ, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು, ಫಲಪುಷ್ಪ ಪ್ರದರ್ಶನ ಮುಂತಾದವುಗಳಿಗೆ ಚಾಲನೆ ದೊರಕಿದ್ದು, ಶುಕ್ರವಾರ ರಂಗೋಲಿ ಸ್ಪರ್ಧೆ, ಸೈಕಲ್ ಜಾಥಾಕ್ಕೆ ಚಾಲನೆ ಸಿಕ್ಕಿದೆ. ಗುರುವಾರದಿಂದ ಮೈಸೂರಿನಲ್ಲಿ ದಸರಾ ಸಂಭ್ರಮ ಆರಂಭವಾಗಿದ್ದು, ಅ.4 ರಂದು ಜಂಬೂ ಸವಾರಿ ನಡೆಯಲಿದೆ. ಚಿತ್ರಗಳಲ್ಲಿ ನೋಡಿ ದಸರಾ ಸಂಭ್ರಮ

ದಸರಾಕ್ಕೆ ಚಾಲನೆ ನೀಡಿದ ಗಿರೀಶ್ ಕಾರ್ನಾಡ್
ಗುರುವಾರ ಮುಂಜಾನೆ 8.45ರ ಸುಮಾರಿಗೆ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆಗೆ ಪೂಜೆ ಸಲ್ಲಿಸುವ ಒಂಭತ್ತು ದಿನಗಳ ದಸರಾಕ್ಕೆ ಗಿರೀಶ್ ಕಾರ್ನಾಡ್ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ ಮತ್ತು ಸಿದ್ದರಾಮಯ್ಯ ಸಂಪುಟದ ಹಲವು ಸಚಿವರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಖಾಸಗಿ ದರ್ಬಾರ್ಗೆ ಚಾಲನೆ
ದಸರಾಗೆ ಚಾಲನೆ ದೊರೆಯುತ್ತಿದ್ದಂತೆ ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ಗೆ ಚಾಲನೆ ಸಿಕ್ಕಿತ್ತು. ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸಹೋದರಿ ಪುತ್ರ ಕಾಂತರಾಜ ಅರಸ್ ಪಟ್ಟದ ಕತ್ತಿಯನ್ನು ಸಿಂಹಾಸನದ ಮೇಲೆ ಇಟ್ಟು ದರ್ಬಾರ್ಗೆ ಚಾಲನೆ ನೀಡಿದರು. ರಾಜವಂಶದ ಉತ್ತರಾಧಿಕಾರಿ ನೇಮಕವಾಗದ ಕಾರಣ ಪಟ್ಟದ ಕತ್ತಿ ಇಟ್ಟು ದರ್ಬಾರ್ ನಡೆಸಲಾಗುತ್ತದೆ.

ಚಲನಚಿತ್ರೋತ್ಸವಕ್ಕೆ ಚಾಲನೆ
ದಸರಾ ಚಲನಚಿತ್ರೋತ್ಸವನ್ನು ವಾರ್ತಾ ಸಚಿವ ರೋಷನ್ ಬೇಗ್ ಉದ್ಘಾಟಿಸಿದರು. ಈ ಸಂರ್ಭದಲ್ಲಿ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರನ್ನು ಸನ್ಮಾನಿಸಲಾಯಿತು. ಸಿಎಂ ಸಿದ್ದರಾಮಯ್ಯ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಸ್ತು ಪ್ರದರ್ಶನ ಉದ್ಘಾಟಿಸಿದ ಉಮಾಶ್ರೀ
ದಸರಾ ಮಹೋತ್ಸವ ಅಂಗವಾಗಿ ವಸ್ತು ಪ್ರದರ್ಶನದ ಪ್ರಾಧಿಕಾರದಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ವತಿಯಿಂದ ಏರ್ಪಡಿಸಿದ ಪ್ರದರ್ಶನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಉಮಾಶ್ರೀ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಶಾಲಿನ ರಜನೀಶ್ ಮುಂತಾದವರು ಉಪಸ್ಥಿತರಿದ್ದರು.

ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿರುವ ದಸರಾ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕಾ ಸಚಿವ ಶಾಮನೂರು ಶಿವಶಂಕರಪ್ಪ ಮತ್ತು ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಚಾಲನೆ ನೀಡಿದರು. ಈ ಬಾರಿ ಕುಪ್ಪಣ್ಣ ಪಾರ್ಕ್ನಲ್ಲಿ ಪ್ರದರ್ಶನ ನಡೆಯುತ್ತಿದೆ.

ಕುಸ್ತಿ ಪಂದ್ಯಾವಳಿಯಲ್ಲಿ ಜಟ್ಟಿಗಳ ಕಾಳಗ
ದಸರಾ ಕುಸ್ತಿ ಪಂದ್ಯಾವಳಿಗೆ ಸಿಎಂ ಸಿದ್ದರಾಮಯ್ಯ ಗುರುವಾರ ಸಂಜೆ ಚಾಲನೆ ನೀಡಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications