ಸುಗಮ ಮತದಾನಕ್ಕಾಗಿ ಸಜ್ಜುಗೊಂಡಿದೆ ಸಾಂಸ್ಕೃತಿಕ ನಗರಿ ಮೈಸೂರು
ಮೈಸೂರು, ಮೇ 11 : ಪ್ರಜಾಪ್ರಭುತ್ವದ ಹಬ್ಬ ಎಂದೇ ಪರಿಗಣಿಸಿರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕಾಗಿ ಜಿಲ್ಲಾಡಳಿತ ಮೈಸೂರು ಸಂಪೂರ್ಣ ಸಜ್ಜುಗೊಂಡಿದೆ.
ಜಿಲ್ಲೆಯಲ್ಲಿ ಒಟ್ಟು 2,860 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 11 ವಿಧಾನಸಭಾ ಕ್ಷೇತ್ರಗಳಲ್ಲಿಯೂ ನಾಳೆ ಬೆಳಗ್ಗೆ 12ರಂದು ಶನಿವಾರ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 12,21,925, ಪುರುಷರು, 12,10,413 ಮಹಿಳೆಯರು ಸೇರಿದಂತೆ ಒಟ್ಟು 24,32,338 ಮತದಾರರಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅತಿ ಹೆಚ್ಚು (2,89,11), ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಅತಿಕಡಿಮೆ (1,77,023) ಮತದಾರರಿದ್ದಾರೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ಮತಗಟ್ಟೆಗೆ ಸಿಬ್ಬಂದಿಯನ್ನು ಕೊನೆಕ್ಷಣದಲ್ಲಿ ಗೊತ್ತು ಗುರಿ ಇಲ್ಲದಂತೆ (ರಾಂಡಮೈ ಜೇಶನ್) ನೇಮಕ ಮಾಡಲಾಗುವುದು.

ಮೊದಲ ಬಾರಿಗೆ ಪಿಂಕ್ ಮತಗಟ್ಟೆ ಸ್ಥಾಪನೆ
ಇಂದು ಮಧ್ಯಾಹ್ನ 1.30ರೊಳಗೆ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೆಲಸ ಪೂರ್ಣಗೊಳಿಸಲಾಗುವುದು. ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿರುವ ಅಧಿಕಾರಿಗಳು ಮಧ್ಯಾಹ್ನ 1.35ರೊಳಗೆ ಮತಗಟ್ಟೆಯಲ್ಲಿ ಕರ್ತವ್ಯಕ್ಕೆ ಹಾಜರಾಗಲೇಬೇಕು.
ಆ ನಂತರದಲ್ಲಿ ಕರ್ತವ್ಯಕ್ಕೆ ಹಾಜರಾದರೆ ಅಂತ ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ಮಹಿಳೆಯರಿಗಾಗಿಯೇ ಪ್ರತ್ಯೇಕವಾದ ಹಾಗೂ ಮಹಿಳೆಯರಿಂದಲೇ ನಿರ್ವಹಿಸಲ್ಪಡುವ 24 ಪಿಂಕ್ (ಗುಲಾಬಿ ಬಣ್ಣ) ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಸಕಲ ವ್ಯವಸ್ಥೆ
ವಿಕಲಚೇತನರು ಮತ ಚಲಾಯಿಸಲು ಅನುಕೂಲವಾಗುವಂತೆ ವೀಲ್ ಚೇರ್, ಬ್ರೈಲ್ ಲಿಪಿ, ವಾಹನ ವ್ಯವಸ್ಥೆ ಹೀಗೆ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ.
ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಚುನಾವಣೆ ನಡೆಯುತ್ತಿದ್ದು, ಆಯಾ ಜಿಲ್ಲಾಡಳಿತ ಮತದಾನಕ್ಕೆ ಪೂರ್ಣ ಸಿದ್ಧತೆ ಮಾಡಿಕೊಂಡಿದೆ. ನಿಯೋಜಿತ ಮತಗಟ್ಟೆಗಳಿಗೆ ಮತಗಟ್ಟೆ ಸಿಬ್ಬಂದಿ ಚುನಾವಣಾ ಸಾಮಗ್ರಿಗಳೊಂದಿಗೆ ಇಂದು ಬೆಳಗ್ಗೆಯೇ ಬಸ್ ಗಳಲ್ಲಿ ಹೊರಟರು.

14,500 ಸಿಬ್ಬಂದಿ ನೇಮಕ
ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ 2,860 ಮತಗಟ್ಟೆಗಳಿಗೆ ಒಟ್ಟು 2,860 ಮತಗಟ್ಟೆ ಅಧ್ಯಕ್ಷಾಧಿಕಾರಿಗಳು, 2,860 ಸಹಾಯಕ ಮತಗಟ್ಟೆ ಅಧ್ಯಕ್ಷ ಅಧಿಕಾರಿ ಹಾಗೂ 5,720 ಮತದಾನ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಪ್ರತಿ ಮತಗಟ್ಟೆಗೆ ಒಬ್ಬರು ಮತಗಟ್ಟೆ ಅಧ್ಯಕ್ಷಾಧಿಕಾರಿ, ಒಬ್ಬರು ಸಹಾಯಕ ಅಧಿಕಾರಿ ಮತ್ತು ಇಬ್ಬರು ಮತದಾನ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ವಿವಿಧೆಡೆಗೆ ಒಟ್ಟು 14,500 ಸಿಬ್ಬಂದಿಯನ್ನು ನೇಮಿಸಲಾಗಿದೆ.

ಮತಗಟ್ಟೆ ಮಟ್ಟದ ಅಧಿಕಾರಿ
ಇವರೊಂದಿಗೆ ಸ್ಥಳೀಯವಾಗಿ ಒಬ್ಬರು ಗ್ರೂಪ್ ಡಿ ಮತ್ತು ಮತದಾರರನ್ನು ಗುರುತಿಸಲು ಪ್ರತಿ ಮತಗಟ್ಟೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ.
ಚುನಾವಣಾ ಕಾರ್ಯಕ್ಕಾಗಿ ಒಟ್ಟು 387 ಕೆಎಸ್ ಆರ್ಟಿಸಿ ಬಸ್ ಗಳು, 145 ಮೆಟಡಾರ್ ವ್ಯಾನ್ ಗಳು, 329 ಲಘು ಮೋಟಾರ್ ವಾಹನಗಳು, 74 ಟ್ರಕ್ ಗಳು, 244 ಸರ್ಕಾರಿ ವಾಹನಗಳು ಸೇರಿದಂತೆ 1139 ವಾಹನಗಳನ್ನು ಉಪಯೋಗಿಸಲಾಗುತ್ತಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications