ವಿಶ್ವೇಶ್ವರಯ್ಯ ಪ್ರತಿಮೆ ನಿರ್ಮಾಣಕ್ಕೆ ಮೈಸೂರು ಮಾಜಿ ಮೇಯರ್ ವಿರೋಧ
ಮೈಸೂರು, ಜೂನ್ 6: ಕೆಆರ್ಎಸ್ನಲ್ಲಿ ನಾಲ್ವಡಿ ಅವರ ಸರಿಸಮನಾಗಿ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆ ನಿರ್ಮಾಣಕ್ಕೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಹಾಗೂ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಒಪ್ಪಿಗೆ ಸೂಚಿಸಿದರ ಹಿಂದೆ ರಾಜಕೀಯ ಪ್ರವೇಶ ಮಾಡುವ ಆಸಕ್ತಿ ಇದೆ ಎಂದು ಮಾಜಿ ಮೇಯರ್ ಪುರುಷೋತ್ತಮ್ ತಿಳಿಸಿದ್ದಾರೆ.
Recommended Video
ರೈತಸಂಘ, ಬಹು ಜನ ವಿದ್ಯಾರ್ಥಿ ಸಂಘ, ನಾಲ್ವಡಿ ಫೌಂಡೇಷನ್ ಹಾಗೂ ದಸಂಸ ಸಹಯೋಗದಲ್ಲಿ ಶನಿವಾರ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಪ್ರಶ್ನಿಸಿ ಮಾತನಾಡಿದ ಅವರು, ಸರ್ಕಾರದ ಈ ನಿರ್ಧಾರಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಆದರೆ, ರಾಜವಂಶಸ್ಥರು ಸರ್ಕಾರದ ತಿರ್ಮಾನಕ್ಕೆ ಬದ್ಧ ಎಂದು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಇದರಲ್ಲಿ ಅವರ ರಾಜಕೀಯ ಪ್ರವೇಶದ ಆಸಕ್ತಿ ಇರಬಹುದು. ಸರ್ ಎಂ.ವಿಶ್ವೇಶ್ವರಯ್ಯ ಸರ್ಕಾರಿ ನೌಕರನಂತೆ ಒಂದು ವರ್ಷ ಕೆಲಸ ನಿರ್ವಹಿಸಿದ್ದಾರೆ. ಅದಕ್ಕೆ ವೇತನವನ್ನೂ ಪಡೆದಿದ್ದಾರೆ. ಹಾಗಿದ್ದ ಮಾತ್ರಕ್ಕೆ ನೌಕರನ ಪ್ರತಿಮೆಯನ್ನು ನಾಲ್ವಡಿ ಅವರಿಗೆ ಸಮನಾಗಿ ನಿಲ್ಲಿಸುವುದು ಸೂಕ್ತವಲ್ಲ. ಎಲ್ಲೆಡೆ ಇದಕ್ಕೆ ಪ್ರತಿರೋಧ ವ್ಯಕ್ತವಾಗುತ್ತಿದೆ. ತಮ್ಮ ಪೂರ್ವಿಕರ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥರೂ ದನಿಗೂಡಿಸಬೇಕಿತ್ತು. ಆದರೆ, ರಾಜವಂಶಸ್ಥರು ಸರ್ಕಾರದ ನಿರ್ಧಾರಕ್ಕೆ ಬದ್ಧ ಎಂದೂ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಯಾವುದೇ ಕಾರಣಕ್ಕೂ ನಾಲ್ವಡಿ ಸಮನಾಗಿ ಸರ್ಎಂವಿ ಪ್ರತಿಮೆ ನಿರ್ಮಿಸಲು ಬಿಡುವುದಿಲ್ಲ. ಒಂದು ವೇಳೆ ನಿರ್ಮಿಸಿದರೆ, ಸರ್ಎಂವಿ ಪ್ರತಿಮೆ ಧ್ವಂಸ ಮಾಡುತ್ತೇವೆ. ರಕ್ತಪಾತ ಆದರೂ ಬಿಡುವುದಿಲ್ಲ. ಮುಂದಾಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅಸ್ಪಶ್ಯತೆ ಹೋಗಲಾಡಿಸಿ ಶೋಷಿತ ಸಮುದಾಯಕ್ಕೂ ಶಿಕ್ಷಣ, ಸಮಾನತೆ ಹಾಗೂ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಿಕೊಟ್ಟಿದ್ದಾರೆ. ಆದರೆ, ಬಿಜೆಪಿ ಸರ್ಕಾರ ಮತ್ತೆ ಸಮಾಜದಲ್ಲಿ ಅಸ್ಪಶ್ಯತೆ ಜಾರಿಗೆ ತರುವ ಕೆಲಸ ಮಾಡುತ್ತಿದೆ. ಅದಕ್ಕಾಗಿ ನಾಲ್ವಡಿ ಅವರ ಪ್ರತಿಮೆ ಪಕ್ಕದಲ್ಲಿ ವಿಶ್ವೇಶ್ವರಯ್ಯ ಅವರ ಪ್ರತಿಮೆಯನ್ನೂ ನಿಲ್ಲಿಸಬೇಕು ಎನ್ನುವ ಉzಶ ಹೊಂದಿದೆ ಎಂದು ದೂರಿದರು.
ನಂದೀಶ್ ರಾಜೇ ಅರಸ್ ಮಾತನಾಡಿ, ಕೆಆರ್ಎಸ್ ಅಣೆಕಟ್ಟೆಯ ದಕ್ಷಿಣ ದ್ವಾರದಲ್ಲಿ ನಾಲ್ವಡಿ ಪ್ರತಿಮೆ ನಿರ್ಮಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲೇ ನೀಲಿ ನಕ್ಷೆ ತಯಾರಿಸಲಾಗಿತ್ತು. ಆದರೆ, ಸಚಿವ ರಮೇಶ್ ಜಾರಕಿಹೋಳಿ ಅವರು ಇತಿಹಾಸ ತಿಳಿಯದೇ ಮಾತನಾಡುತ್ತಿದ್ದಾರೆ. ಅವರು ಒಮ್ಮೆ ನಾಲ್ವಡಿ ಇತಿಹಾಸ ಓದಿಕೊಳ್ಳಬೇಕಿದೆ ಎಂದರು.
ಈ ವೇಳೆ ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳಾದ ಬಸವರಾಜು, ಪೃಥ್ವಿರಾಜು, ಶಾಂತರಾಜೇ ಅರಸ್, ಟಿ.ಎಂ.ವಿಜಯರಾಜೇ ಅರಸ್, ಅಶ್ವಥ್ ನಾರಾಯಣ ರಾಜೇ ಅರಸ್, ಸೋಸಲೇ ಸಿದ್ದರಾಜು, ಎಚ್.ಎಲ್.ಯಮುನಾ ಉಪಸ್ಥಿತರಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications