ಮೈಸೂರಿನಲ್ಲಿ ಶುರುವಾಯ್ತು ಮಳೆ: ಏನೆಲ್ಲಾ ಅವಾಂತರ ಸೃಷ್ಟಿಸಿದೆ ಗೊತ್ತಾ?
Recommended Video

ಮೈಸೂರು, ಅಕ್ಟೋಬರ್. 17: ಜಂಬೂಸವಾರಿಗೆ ಇನ್ನೆರಡು ದಿನ ಬಾಕಿ ಇರುವಾಗಲೇ ಮೈಸೂರಿನಲ್ಲಿ ಕಳೆದ ಮೂರು ದಿನಗಳಿಂದ ಕೆಲವು ಗಂಟೆಗಳ ಕಾಲ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದಾಗಿ ದಸರೆ ಹಾಗೂ ಜಂಬೂ ಸವಾರಿಯ ಗತಿಯೇನು ಎಂಬಂತಾಗಿದೆ.
ಕಳೆದ ಮೂರು ದಿನಗಳಿಂದ ದಿನಕ್ಕೊಂದು ಬಾರಿಯಂತೆ ಸಂಜೆ, ರಾತ್ರಿ ಸುರಿದ ಮಳೆ ಇಂದು ಮಾತ್ರ ಮಧ್ಯಾಹ್ನ 3 ರಿಂದ 4ರವೇಳೆಗಾಗಲೇ ಧೋ ಎಂದು ಸುರಿಯಿತು. ನಿನ್ನೆಯೂ ಸಹ ಸುರಿದ ಭಾರೀ ಮಳೆಗೆ ದಸರಾ ವಸ್ತು ಪ್ರದರ್ಶನ, ಆಹಾರ ಮೇಳ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿಯಾಯಿತಲ್ಲದೇ, ಪಾಲ್ಗೊಂಡಿದ್ದ ಜನ ಮನೆಗೆ ವಾಪಸ್ಸಾಗಲು ಹರ ಸಾಹಸ ಪಡಬೇಕಾಯಿತು.
ಇನ್ನು ಮಳೆಯ ರಭಸಕ್ಕೆ ಯುವ ದಸರಾ ಕಾರ್ಯಕ್ರಮವೂ ಹೊರತಾಗಿಲ್ಲ. ಎಷ್ಟೇ ಸ್ವಯಂಪ್ರೇರಿತವಾಗಿ ವಾಟರ್ ಪ್ರೂಫ್ ಟೆಂಟ್ ಅಳವಡಿಸಿದ್ದರೂ ಸಂಧಿಗಳಿಂದ ನೀರು ಸುರಿದು ವೇದಿಕೆಯ ಸುತ್ತೆಲ್ಲಾ ರಾಢಿಯಾದ ಘಟನೆ ನಡೆಯಿತು. ಅಲ್ಲದೇ ವಿಐಪಿ ವಾಹನಗಳ ಪಾರ್ಕಿಂಗ್ ಸ್ಥಳದಲ್ಲಿ ನೀರು ತುಂಬಿ ಕೆರೆಯಂತಾಗಿದ್ದರಿಂದ ವಾಹನ ಸವಾರರು ಪರದಾಡಿದರು. ಮುಂದೆ ಓದಿ..

ತಂಪೆರೆದ ಮಳೆ
ಕೆಲದಿನಗಳಿಂದ ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ನಗರದ ಜನರಿಗೆ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ತಣ್ಣನೆಯ ವಾತಾವರಣ ನಿರ್ಮಿಸಿತು. ಬೆಳಗ್ಗೆಯಿಂದ ಬಿರು ಬಿಸಿಲು ಇತ್ತಾದರೂ, ಮಧ್ಯಾಹ್ನದ ವೇಳೆ ಸುತ್ತಲು ಕಾರ್ಮೋಡ ಕವಿಯಿತು. ನಂತರ ಕೆಲಕಾಲ ನಿರಂತರವಾಗಿ ಸುರಿದು ತಂಪೆರೆಯಿತು.

ಉದುರಿದ ಹೂಗಳು
ದಸರೆಯಲ್ಲಿ ವೈವಿಧ್ಯಮಯ ಅಲಂಕಾರ, ಆಕೃತಿಗಳಿಂದಲೇ ಎಲ್ಲರನ್ನೂ ಕೈ ಬೀಸಿ ಕರೆಯುತ್ತಿರುವ ಫಲಪುಷ್ಪ ಪ್ರದರ್ಶನಕ್ಕೆ ಬರೋಬ್ಬರಿ 4.5 ಲಕ್ಷ ಮಂದಿ ಭೇಟಿ ನೀಡಿದ್ದಾರೆ. ಆದರೆ ಮಳೆಯಿಂದಾಗಿ ನಗರದ ಕರ್ಜನ್ ಪಾರ್ಕ್ ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದ ಕೆಲವು ಕಲಾಕೃತಿಗಳಲ್ಲಿ ಹೂಗಳು ಉದುರಿ ಹೊಸ ಹೂವುಗಳನ್ನು ಜೋಡಿಸುವ ಪ್ರಕ್ರಿಯೆ ನಿನ್ನೆಯಿಂದ ನಡೆಯುತ್ತಿದೆ.

ಆಹಾರ ಮೇಳಕ್ಕೆ ಬರಲು ಹಿಂದೇಟು
ಇನ್ನು ಕಳೆದ 3 ದಿನಗಳಿಂದ ಸುರಿಯುತ್ತಿರುವ ಮಳೆಗೆ ಆಹಾರ ಮೇಳದ ವ್ಯಾಪಾರಸ್ಥರು ನಷ್ಟ ಅನುಭವಿಸುವಂತಾಗಿದೆ. ಮಳೆ ಬರುತ್ತದೆಂಬ ಕಾರಣಕ್ಕಾಗಿ ಜನರು ಆಹಾರ ಮೇಳಕ್ಕೆ ಬರಲು ಹಿಂದೇಟು ಹಾಕುತ್ತಿರುವ ದೃಶ್ಯ ಕಂಡು ಬಂತು.
ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಆಹಾರ ಮಳಿಗೆಯ ಕೆಲವರು ನಮಗೆ ಜಿಲ್ಲಾಡಳಿತವೂ ಸಹ ಆಹಾರ ಮೇಳದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿಲ್ಲ. ಮಳೆ ಬಂದರೆ ಜನರು ಕುಳಿತು ತಿನ್ನುವ ಅವಕಾಶವನ್ನು ನೀಡಿಲ್ಲ. ಹಾಗಾಗಿ ಜನರು ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

2 ದಿನ ಮಳೆಯ ಆರ್ಭಟ
ಈ ನಡುವೆ ಅರಬ್ಬೀ ಮತ್ತು ಬಂಗಾಳಕೊಲ್ಲಿಯ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಪ್ರಭಾವ ಹೆಚ್ಚಾಗಿದೆ. ಮುಂದಿನ 4-5 ದಿನ ಸಾಧಾರಣ ಮಳೆಯಾಗಲಿದೆ. ಹಿಂಗಾರು ಬಿತ್ತನೆ ಈ ಮಳೆ ಅನುಕೂಲವಾಗಲಿದೆ ಎಂದು ಹವಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications